Don't Miss!
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ಒತ್ತಾಯದ ಮೇರೆಗೆ ಸಿಹಿ ಸುದ್ದಿ ನೀಡಿದ ದರ್ಶನ್
ಕನ್ನಡದ ಮೆಗಾ ಸಿನಿಮಾ ಎಂದು ಗುರುತಿಸಿಕೊಂಡಿರುವ ಕುರುಕ್ಷೇತ್ರ ಆಗಸ್ಟ್ 2 ರಂದು ಬಿಡುಗಡೆಯಾಗುತ್ತಿದೆ. ದರ್ಶನ್ ದುರ್ಯೋಧನನಾಗಿ ನಟಿಸಿದ್ದು, ರವಿಚಂದ್ರನ್, ಅರ್ಜುನ್ ಸರ್ಜಾ, ರವಿಶಂಕರ್, ಮೇಘನಾ ರಾಜ್, ಸ್ನೇಹ ಸೇರಿದಂತೆ ಬಹುದೊಡ್ಡ ತಾರಬಳಗ ಹೊಂದಿರುವ ಈ ಚಿತ್ರ 2ಡಿ ಹಾಗೂ 3ಡಿಯಲ್ಲಿ ತೆರೆಕಾಣುತ್ತಿದೆ.
ಸಿನಿಮಾ ರಿಲೀಸ್ ಗೂ ಮುಂಚೆ ಹಾಡುಗಳು ಅಬ್ಬರ ಮಾಡುತ್ತಿದ್ದು, ಈ ಮಧ್ಯೆ ಕುರುಕ್ಷೇತ್ರ ಟ್ರೈಲರ್ ವೊಂದನ್ನ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಆದರೆ, ಈ ಟ್ರೈಲರ್ ನ್ನ ಹೊಗಳಿಕೆಗಿಂತ ತೆಗಳಿಕೆಯೇ ಹೆಚ್ಚು.
ಯಾಕಂದ್ರೆ, ಈ ಹಿಂದೆ ಬಂದಿದ್ದ ಟೀಸರ್ ಗಳ ದೃಶ್ಯಕ್ಕೆ ಒಂದೇ ಒಂದು ಹೊಸ ದೃಶ್ಯ ಸೇರಿಸಿ ಟ್ರೈಲರ್ ಎಂದು ಬಿಟ್ಟಿದ್ದರು. ಅದಕ್ಕೆ ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದ ಅಭಿಮಾನಿಗಳು ಹೊಸ ಟ್ರೈಲರ್ ರಿಲೀಸ್ ಮಾಡುವಂತೆ ಒತ್ತಾಯ ಮಾಡಿದ್ದರು.
ಇದೀಗ, ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಡಿ ಬಾಸ್ ದರ್ಶನ್ ಮತ್ತು ಕುರುಕ್ಷೇತ್ರ ಚಿತ್ರತಂಡ, ಹೊಸ ಟ್ರೈಲರ್ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಜುಲೈ 24 ರಂದು ಮಧ್ಯಾಹ್ನ 2 ಗಂಟೆಗೆ ಅಧಿಕೃತವಾಗಿ ಲಹರಿ ಅಥವಾ ಟಿ-ಸಿರೀಸ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ.
ಅಂದ್ಹಾಗೆ, ಇಂತಹ ಮಗಾ ಪೌರಾಣಿಕ ಚಿತ್ರವನ್ನ ನಾಗಣ್ಣ ಅವರು ನಿರ್ದೇಶನ ಮಾಡಿದ್ದಾರೆ. ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರು ನಿರ್ಮಾಣ ಮಾಡಿದ್ದಾರೆ. ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದು. ಡಾ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ.