Don't Miss!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಕುರುಕ್ಷೇತ್ರದಿಂದ ಮತ್ತೊಂದು ಸರ್ಪ್ರೈಸ್ ಸುದ್ದಿ
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿದ ಕುರುಕ್ಷೇತ್ರ ಸಿನಿಮಾ ಆಡಿಯೋ ಇತ್ತೀಚಿಗಷ್ಟೆ ಬಿಡುಗಡೆಯಾಗಿದೆ. ಜೊತೆಗೆ ಚಿತ್ರದ ಟ್ರೈಲರ್ ಕೂಡ ಬಂದಿದೆ. ಈಗ ಸಿನಿಮಾ ಯಾವಾಗ ನೋಡೋದು ಎಂದು ಅಭಿಮಾನಿಗಳು ಜಪ ಮಾಡ್ತಿದ್ದಾರೆ.
ಸದ್ಯಕ್ಕೆ ಕುರುಕ್ಷೇತ್ರ ಚಿತ್ರದ ಒಂದು ಆಡಿಯೋ ಸಾಂಗ್ ರಿಲೀಸ್ ಆಗಿದೆ. ಇದೀಗ, ಎರಡನೇ ಸಾಂಗ್ ಕೇಳುವ ಸಮಯ. ಹೌದು, ಕುರುಕ್ಷೇತ್ರ ಚಿತ್ರದ ಎರಡನೇ ಹಾಡು ಬಿಡುಗಡೆ ದಿನಾಂಕ ಪ್ರಕಟವಾಗಿದೆ.
ಮಯೂರ, ಬಬ್ರುವಾಹನ ಚಿತ್ರದ ಬಗ್ಗೆ ದರ್ಶನ್ ಹೇಳಿದ ಮಾತಿದು
ಜುಲೈ 13 ರಂದು ಶನಿವಾರ ಕುರುಕ್ಷೇತ್ರ ಚಿತ್ರದ ಚಾರುತಂತಿ ಹಾಡು ತೆರೆಕಾಣಲಿದೆ. ಅಂದ್ಹಾಗೆ, ಇದು ದುರ್ಯೋಧನ ಮತ್ತು ಭಾನುಮತಿ ನಡುವೆ ನಡೆಯುವ ಡುಯೆಟ್ ಸಾಂಗ್ ಆಗಿದ್ದು, ಪೌರಾಣಿಕ ಚಿತ್ರದಲ್ಲಿ ಈ ರೀತಿ ಹಾಡು ಹೇಗಿರಲಿದೆ ಎಂಬ ಕಾತುರ ಕಾಡುತ್ತಿದೆ.
ದರ್ಶನ್-ಮುನಿರತ್ನ ನಡುವೆ 2007ರಲ್ಲೇ ಕುರುಕ್ಷೇತ್ರದ ಬಗ್ಗೆ ಡೀಲ್ ಆಗಿತ್ತಂತೆ.!
ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಮಾಡಿದ್ದು, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಲಹರಿ ಸಂಸ್ಥೆ ಕುರುಕ್ಷೇತ್ರ ಚಿತ್ರದ ಆಡಿಯೋ ಹಕ್ಕು ಖರೀದಿಸಿದ್ದು, ಟಿ-ಸಿರೀಸ್ ಯೂಟ್ಯೂಬ್ ಚಾನಲ್ ನಲ್ಲಿ ಹಾಡು ಬಿಡುಗಡೆಯಾಗಲಿದೆ.
ಇನ್ನುಳಿದಂತೆ ನಾಗಣ್ಣ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ಮುನಿರತ್ನ ನಿರ್ಮಿಸಿದ್ದಾರೆ. ದರ್ಶನ್, ಅರ್ಜುನ್ ಸರ್ಜಾ, ರವಿಚಂದ್ರನ್, ಸೋನು ಸೂದ್, ಶಶಿ ಕುಮಾರ್, ನಿಖಿಲ್ ಕುಮಾರ್, ಸ್ನೇಹಾ, ಮೇಘನಾ ರಾಜ್, ಶ್ರೀನಿವಾಸ ಮೂರ್ತಿ, ಅಂಬರೀಶ್, ಶ್ರೀನಾಥ್ ಸೇರಿದಂತೆ ಹಲವರು ನಟಿಸಿದ್ದಾರೆ.