Don't Miss!
- News Bangalore Rent: ಮನೆ ಬಾಡಿಗೆ ದರದಲ್ಲಿ ದಿಢೀರ್ ಕುಸಿತ, ಬೆಂಗಳೂರಿನ ಮಂದಿ ಹೋಗುತ್ತಿರುವುದು ಎಲ್ಲಿಗೆ?
- Lifestyle ಬದಲಾಯ್ತು ಡಿಡಿ ಲೋಗೋ: ಕೇಸರಿ ಬಣ್ಣಕ್ಕೆ ತಿರುಗಿರುವುದಕ್ಕೆ ಕೆಲವರ ಮೆಚ್ಚುಗೆ, ಕೆಲವರ ಟೀಕೆ
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Sports GT vs DC: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುರುಕ್ಷೇತ್ರ ಚಿತ್ರದ ಮೂರನೇ ಹಾಡಿನ ಬಿಡುಗಡೆ ದಿನಾಂಕ ಬಹಿರಂಗ
ಮುನಿರತ್ನ ನಿರ್ಮಾಣದ ಪೌರಾಣಿಕ ಚಿತ್ರ ಕುರುಕ್ಷೇತ್ರ ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿದೆ. ಈಗ ಮೂರನೇ ಹಾಡಿನ ರಿಲೀಸ್ ದಿನಾಂಕ ಬಹಿರಂಗವಾಗಿದೆ. ಜುಲೈ 19ರಂದು ಸಂಜೆ 6.30ಕ್ಕೆ ಕುರುಕ್ಷೇತ್ರದ 'ಎಲ್ಲಿರುವೇ ಹರಿಯೇ....' ಹಾಡು ಬರಲಿದೆ.
ಮೊದಲನೇ ಹಾಡು ದುರ್ಯೋಧನನ ಕುರಿತು, ಕೌರವನ ವ್ಯಕ್ತಿತ್ವವನ್ನ ವೈಭವಿಕರಿಸುವಂತಿತ್ತು. ಎರಡನೇ ಹಾಡು ದುರ್ಯೋಧನ ಮತ್ತು ಭಾನುಮತಿ ನಡುವಿನ ರೋಮ್ಯಾಂಟಿಕ್ ಗೀತೆಯಾಗಿತ್ತು. ಮೂರನೇ ಹಾಡು ದ್ರೌಪದಿ ವಸ್ತ್ರಾಪಹರಣದ ವೇಳೆ ಶ್ರೀಕೃಷ್ಣನಿಗಾಗಿ ದ್ರೌಪದಿ ಮನವಿ ಮಾಡುವ ಶೋಕಗೀತೆಯಾಗಿದೆ.
ದುರ್ಯೋಧನನ ಆಗಮನಕ್ಕೆ ದಿನಾಂಕ ನಿಗದಿ
ದ್ರೌಪದಿ ಪಾತ್ರದಲ್ಲಿ ಬಹುಭಾಷಾ ನಟಿ ಸ್ನೇಹಾ ನಟಿಸಿದ್ದು, ಪಾಂಡವರಾಗಿ ಶಶಿಕುಮಾರ್ (ಧರ್ಮರಾಯ), ಸೋನು ಸೂದ್ (ಅರ್ಜುನ), ಡ್ಯಾನಿಶ್ ಅಖ್ತರ್ (ಭೀಮ) ನಕುಲ ಮತ್ತು ಸಹದೇವನ ಪಾತ್ರದಲ್ಲಿ ಚಂದನ್ ಕುಮಾರ್ ಮತ್ತು ಯಶಸ್ ಸೂರ್ಯ ನಟಿಸಿದ್ದಾರೆ.
ಇನ್ನುಳಿದಂತೆ ಡಾ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಮುನಿರತ್ನ ನಿರ್ಮಾಣ ಮಾಡಿರುವ ಈ ಚಿತ್ರವನ್ನ ನಾಗಣ್ಣ ನಿರ್ದೇಶಿಸಿದ್ದಾರೆ.
ಮಯೂರ, ಬಬ್ರುವಾಹನ ಚಿತ್ರದ ಬಗ್ಗೆ ದರ್ಶನ್ ಹೇಳಿದ ಮಾತಿದು
ಆಗಸ್ಟ್ 2 ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಕುರುಕ್ಷೇತ್ರ ಸಿನಿಮಾ ಬರ್ತಿದೆ. ದುರ್ಯೋಧನನಾಗಿ ದರ್ಶನ್ ನಟಿಸಿದ್ದು, ಕೃಷ್ಣನ ಪಾತ್ರದಲ್ಲಿ ರವಿಚಂದ್ರನ್, ಕರ್ಣನ ಪಾತ್ರದಲ್ಲಿ ಅರ್ಜುನ್ ಸರ್ಜಾ ಹಾಗೂ ಭೀಷ್ಮನ ಪಾತ್ರದಲ್ಲಿ ಅಂಬರೀಶ್ ಬಣ್ಣ ಹಚ್ಚಿದ್ದಾರೆ.