Don't Miss!
- Automobiles ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- Finance ತನ್ನ ಯುಪಿಐ ಬಳಕೆದಾರರನ್ನು ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಿದ Paytm
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮ್ ಚರಣ್ ಪತ್ನಿ ಬಳಿಕ ಮೋದಿ ವಿರುದ್ಧ ಖುಷ್ಬೂ ಅಸಮಾಧಾನ
Recommended Video
ಮಹಾತ್ಮ ಗಾಂಧಿ ಜಯಂತಿ ವಿಶೇಷವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬಾಲಿವುಡ್ ತಾರೆಯರನ್ನ ಮಾತ್ರ ಆಹ್ವಾನಿಸಿದ್ದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಕ್ಷಿಣ ಭಾರತದ ಕಲಾವಿದರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಇತ್ತೀಚಿಗಷ್ಟೆ ನಟ ರಾಮ್ ಚರಣ್ ಪತ್ನಿ ಉಪಾಸನ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮೋದಿ ಅವರನ್ನ ಪ್ರಶ್ನಿಸಿದ್ದರು. ''ಭಾರತ ಸಿನಿಮಾ ಅಂದ್ರೆ ಬರಿ ಹಿಂದಿ ಚಿತ್ರರಂಗ ಮಾತ್ರವಲ್ಲ'' ಎಂದು ಕಿಡಿಕಾರಿದ್ದರು.
ಇದೀಗ, ಬಹುಭಾಷ ನಟಿ ಖುಷ್ಬೂ ಕೂಡ ಮೋದಿ ಸರ್ಕಾರದ ನಡೆಗೆ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು ''ಭಾರತದ ಸಿನಿಮಾರಂಗದ ಪರವಾಗಿ ಪ್ರಧಾನಿ ಅವರನ್ನ ಭೇಟಿ ಮಾಡಿರುವ ಬಗ್ಗೆ ಗೌರವವಿದೆ. ಆದರೆ, ದೇಶದ ಆರ್ಥಿಕತೆಗೆ ಬರಿ ಹಿಂದಿ ಚಿತ್ರರಂಗ ಮಾತ್ರ ಕೊಡುಗೆ ನೀಡುತ್ತಿಲ್ಲ. ದಕ್ಷಿಣ ಭಾರತವೂ ದೊಡ್ಡ ಮಟ್ಟದ ಕೊಡುಗೆ ನೀಡುತ್ತಿದೆ ಎಂಬುದನ್ನ ಮೋದಿ ಗಮನಿಸಬೇಕು'' ಎಂದಿದ್ದಾರೆ.
'ದಕ್ಷಿಣ ಭಾರತೀಯ ಚಿತ್ರರಂಗವನ್ನು ಕಡೆಗಣಿಸಲಾಗಿದೆ': ಮೋದಿಗೆ ರಾಮ್ ಚರಣ್ ಪತ್ನಿ ಪ್ರಶ್ನೆ
''ದಕ್ಷಿಣ ಭಾರತ ಚಿತ್ರರಂಗವನ್ನು ದೇಶದ ಹೆಮ್ಮೆಯನ್ನಾಗಿ ಮಾಡಿದ ಕಲಾವಿದರು, ಪತ್ರಕರ್ತ ಗೆಳೆಯರನ್ನ ಆಹ್ವಾನಿಸಿ ಅದೇ ರೀತಿ ಗೌರವ ನೀಡಿದರೆ, ಅದು ನಿಜವಾಗಲೂ ಸರಿ ಎಂದು ಭಾವಿಸುತ್ತೇನೆ. ಇದರ ಬಗ್ಗೆ ಮೋದಿ ಅವರು ಪರಿಶೀಲಿಸಲಿ'' ಎಂದು ನಟಿ ಖುಷ್ಬೂ ಟ್ವೀಟ್ ಮಾಡಿದ್ದಾರೆ.
'ಆಮೀರ್, ಶಾರುಖ್ ಖಾನ್ ಗಳು ಮಾತ್ರ ಚಿತ್ರರಂಗದ ಒಡೆಯರಲ್ಲ': ಮೋದಿ ವಿರುದ್ಧ ನಟ ಜಗ್ಗೇಶ್ ಬೇಸರ
ಇದೇ ವಿಚಾರವಾಗಿ ಕನ್ನಡ ನಟ ಜಗ್ಗೇಶ್ ಅವರು ಕೂಡ ಧ್ವನಿ ಎತ್ತಿದ್ದರು. ''ಕನ್ನಡಿಗರು ಇಂದು ಬಹುತೇಕ ಪರಭಾಷೆ stars ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! @narendramodi Ji!ಉತ್ತರ ಭಾರತದ ನಟನಟಿಯರಿಗಿಂತ ನಾವು ಯಾವುದರಲ್ಲು ಕಮ್ಮಿಇಲ್ಲಾ! ಶಾರುಖ್ ಅಮಿರ್ ಅಲ್ಲಾ ಕಲಾರಂಗಕ್ಕೆ ಒಡೆಯರು!ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ!ನಿಮ್ಮ ಭಾವನೆ ಗೌರವಿಸಲು!'' ಎಂದು ಬೇಸರ ವ್ಯಕ್ತಪಡಿಸಿದ್ದರು.