Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕ್ವಾಟ್ಲೆ ಸತೀಶ'ನಿಂದ ಕನ್ನಡ ಚಿತ್ರರಂಗದ ಬರ್ತ್ ಡೇ
ಕನ್ನಡ ಚಲನಚಿತ್ರ ರಂಗಕ್ಕೆ ಈಗ ಎಂಬತ್ತರ ಪ್ರಾಯ. 1933ರ ಮಾರ್ಚ್ ಮೂರರಂದು ಕನ್ನಡ ಮೊದಲ ವಾಕ್ಚಿತ್ರ 'ಸತಿ ಸುಲೋಚನ' ಬಿಡುಗಡೆಯಾಗಿತ್ತು. ಈ ಎಂಬತ್ತರ ಸಡಗರವನ್ನು 'ಕ್ವಾಟ್ಲೆ ಸತೀಶ' ವಿಭಿನ್ನವಾಗಿ ಆಚರಿಸಿಕೊಂಡು ಸಂಭ್ರಮಿಸಿದ್ದಾನೆ.
ಯಾರಪ್ಪಾ ಈ 'ಕ್ವಾಟ್ಲೆ ಸತೀಶ' ಅಂದರೆ, ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ, ಭೋಗೇಂದ್ರ ಹಾಗೂ ಡಾ.ಸೂರಿ ಅವರು ನಿರ್ಮಿಸುತ್ತಿರುವ ಚಿತ್ರವೇ 'ಕ್ವಾಟ್ಲೆ ಸತೀಸ'. ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ಯೋಗರಾಜ್ ಭಟ್ ನಿರ್ದೇಶನದ 'ಡ್ರಾಮಾ' ಚಿತ್ರದಲ್ಲಿ ನೀನಾಸಂ ಸತೀಶ್ ಅವರು ಕ್ವಾಟ್ಲೆ ಸತೀಶ ಎಂಬ ಪಾತ್ರವನ್ನು ಪೋಷಿಸಿದ್ದರು. ಈಗ ಅದೇ ಶೀರ್ಷಿಕೆಯಲ್ಲಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ. ಈ ಚಿತ್ರದ ನಾಯಕಿ ಸೋನಿಯಾ ಗೌಡ. ಈಕೆ ಈಗಾಗಲೆ 'ರಣ', 'ಜಿಂಕೆಮರಿ' ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಇನ್ನು ಚಿತ್ರದ ನಿರ್ದೇಶಕರಾದ ಮಹೇಶ್ ರಾವ್ ಅವರು 'ಮುರಳಿ ಮೀಟ್ಸ್ ಮೀರಾ' ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮಿಳಿನ 'ನಡುವುಲ ಕೊಂಜಂ ಪಕ್ಕಥ ಕಾಣೊಂ' ಎಂಬ ಚಿತ್ರದ ರೀಮೇಕ್. ಚಿತ್ರದ ಹೆಸರೇ ಹೇಳುವಂತೆ ಇದು ಪಕ್ಕಾ ಕಾಮಿಡಿ ಚಿತ್ರ.
ಮಹೇಶ್ ರಾವ್ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣರ ಸಂಗೀತ ನಿರ್ದೇಶನವಿದೆ. ಪವನ್ ಒಡೆಯರ್ ಚಿತ್ರಕ್ಕೆ ಮಾತು ಬರೆದರೆ ಯೋಗರಾಜ್ ಭಟ್ ಹಾಡುಗಳನ್ನು ಬರೆದಿದ್ದಾರೆ. ಆನಂದ್ ಕಲಾ ನಿರ್ದೇಶನ ಹಾಗೂ ದೀಪು.ಎಸ್.ಕುಮಾರ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ನೀನಾಸಂ ಸತೀಶ್, ಸೋನಿಯಾಗೌಡ, ಅಚ್ಯುತರಾವ್, ಚಿಕ್ಕಣ್ಣ, ಡಾ.ಸೂರಿ, ಸಿಲ್ಲಿಲಲ್ಲಿ ಆನಂದ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)