Just In
Don't Miss!
- News
'ಮಮತಾರನ್ನು 50 ಸಾವಿರ ಮತಗಳಿಂದ ಸೋಲಿಸದಿದ್ದರೆ ರಾಜಕೀಯ ತ್ಯಜಿಸುತ್ತೇನೆ'
- Automobiles
ಇನ್ಮುಂದೆ ಮನೆ ಬಾಗಿಲಿಗೆ ಡೀಸೆಲ್ ಪೂರೈಕೆ ಮಾಡಲಿದೆ ಹೊಸ ಸ್ಟಾರ್ಟ್ ಅಪ್ ಕಂಪನಿ
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಎಸ್ಎಲ್: ಚೆನ್ನೈಯಿನ್ ಎಫ್ಸಿ vs ಎಸ್ಸಿ ಈಸ್ಟ್ ಬೆಂಗಾಲ್, Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 18ರ ಚಿನ್ನ, ಬೆಳ್ಳಿ ದರ
- Lifestyle
ಬಂಜೆತನಕ್ಕೆ ಕಾರಣವಾಗುವ ಥೈರಾಯ್ಡ್ ಲಕ್ಷಣಗಳು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದಯಾಮರಣದ ಬಗ್ಗೆ ಲಂಬಾಣಿ ಚಿತ್ರ 'ಆಂಸು'
'ದಯಾಮರಣ' ಈಗ ಪ್ರಪಂಚದಾದ್ಯಂತ ಬಹು ಚರ್ಚಿತವಾಗುತ್ತಿರುವ ವಿಷಯ. ಇದೇ ಅಂಶವನ್ನಿಟ್ಟುಕೊಂಡು ಈಗ ಲಂಬಾಣಿ ಭಾಷೆಯಲ್ಲಿ 'ಆಂಸು' (ಕಣ್ಣೀರು) ಎಂಬ ಚಲನಚಿತ್ರವೊಂದು ನಿರ್ಮಾಣವಾಗುತ್ತಿದೆ.
ಈ ಹಿಂದೆ ಓಂ ಪ್ರಕಾಶ್ ನಾಯಕ್ ಆಗಿ ಹಲವಾರು ಚಿತ್ರಗಳನ್ನು ನಿರ್ಮಿಸಿ ನಿರ್ದೇಶಿಸಿದ್ದ ಪ್ರಕಾಶ್ ಕುಮಾರ್ ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ತನ್ನ ಅಂತಿಮ ದಿನಗಳನ್ನು ಎದುರು ನೋಡುತ್ತಿರುವ ವೃದ್ಧ ತಂದೆಯ ನೋವು ವೇದನೆಯನ್ನು ನೋಡಲಾಗದೆ ತಳಮಳಿಸುವ ಮಗನ ಪಾತ್ರವನ್ನು ಪ್ರಕಾಶ್ ಕುಮಾರ್ ನಿರ್ವಹಿಸಿದ್ದಾರೆ. [ಓಂ 'ಢಿಶುಂ ಢಿಶುಂ' ತಪ್ಪು ಮಾಡಿದ್ರೆ ಹೊಡೀತೀನಿ]
ಹಿರಿಯ ವಿತರಕ 82 ವರ್ಷದ ಶಾಂತಾರಾಂ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಗಂಗಾವತಿ ಜಿಲ್ಲೆಯ ಚಿರ್ಚಿನಗುಡ್ಡ ತಾಂಡಾವೊಂದರಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಲಾಗಿರುವ ಈ ಚಿತ್ರವೀಗ ಸೆನ್ಸಾರ್ ಹಂತದಲ್ಲಿದೆ.
ಮಹದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಬಿ.ಟಿ.ಲಲಿತಾ ನಾಯಕ್ ಅರ್ಪಿಸುವ ಈ ಚಿತ್ರಕ್ಕೆ ತರ್ಜುನ್, ಪ್ರಕಾಶ್ ಕುಮಾರ್, ಛಾಯಾಗ್ರಹಣ, ಕ್ರೇಜಿಬಾಯ್ಸ್ ತಂಡದ ಸಂಗೀತ ಸಂಯೋಜನೆ, ಶಿವಕುಮಾರ್ ಸ್ವಾಮಿ ಸಂಕಲನವಿದೆ.
ಪ್ರಕಾಶ್ ಕುಮಾರ್, ಜ್ಯೋತಿ, ಶಾಂತರಾಂ, ಶಿವಕುಮಾರ್, ಸಂತೋಷ್ ಮೇದಪ್ಪ, ರೂಪಸಿಂಗ್ ಬಿಜಾಪುರ, ಮೋಹನ್, ಮಾ. ಅಬ್ದುಲ್ ತಾರಾಬಳಗದಲ್ಲಿದ್ದಾರೆ. ಈ ಚಿತ್ರವನ್ನು ಇದೇ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. (ಫಿಲ್ಮಿಬೀಟ್ ಕನ್ನಡ)