Don't Miss!
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಮೀನು ವಿವಾದ: ಕೂತು ಬಗೆಹರಿಸಿಕೊಂಡ ಯಶ್ ಕುಟುಂಬ ಮತ್ತು ಗ್ರಾಮಸ್ಥರು
ಚಿತ್ರನಟ ರಾಕಿಂಗ್ ಸ್ಟಾರ್ ಯಶ್ ಜಮೀನಿಗೆ ತೆರಳುವ ರಸ್ತೆ ವಿಚಾರವಾಗಿ ಹಾಸನ ತಾಲ್ಲೂಕಿನ ತಿಮ್ಲಾಪುರ ಗ್ರಾಮಸ್ಥರು ಹಾಗೂ ಯಶ್ ಕುಟುಂಬದೊಂದಿಗೆ ಮಾರ್ಚ್ 9 ರಂದು ನಡೆದಿದ್ದ ಗಲಾಟೆ ಸುಖಾಂತ್ಯ ಕಂಡಿದೆ.
Recommended Video
ರೈತರಿಗೆ ನಾವು ಅನ್ಯಾಯ ಮಾಡಲ್ಲ ಎಂದು ಯಶ್ ಹೇಳಿದ್ದರು. ಅದರಂತೆ ಗ್ರಾಮಕ್ಕೆ ತಮ್ಮ ಮ್ಯಾನೇಜರ್ ಕಳುಹಿಸಿದ್ದು ಅವರು ಗ್ರಾಮಸ್ಥರೊಂದಿಗೆ ಚರ್ಚಿಸಿ ರಸ್ತೆ ಸಮಸ್ಯೆ ಬಗೆಹರಿದಿದೆ.
ರಸ್ತೆ ಗಲಾಟೆ: ನಾವು ಅಪ್ಪ-ಅಮ್ಮನಿಗೆ ಹುಟ್ಟಿದ ಮಕ್ಕಳೇ ಎಂದ ಯಶ್
ಹಾಸನ ತಾಲ್ಲೂಕಿನ ತಿಮ್ಲಾಪುರ ಬಳಿ ರಾಂಕಿಂಗ್ ಸ್ಟಾರ್ ಯಶ್ ಜಮೀನು ಖರೀದಿಸಿದ್ದಾರೆ. ಈ ಜಮೀನಿಗೆ ತೆರಳಲು ರಸ್ತೆ ನಿರ್ಮಾಣ ವಿಚಾರವಾಗಿ ಯಶ್ ಪೋಷಕರು ಹಾಗೂ ಗ್ರಾಮಸ್ಥರೊಂದಿಗೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸಿದ್ದರು. ನಂತರ ಈ ರಸ್ತೆ ವಿವಾದ ದುದ್ದ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.
ಮಾರ್ಚ್ 9 ರಂದು ರಾಕಿ ಭಾಯ್ ಖುದ್ದು ಪೊಲೀಸ್ ಠಾಣೆಗೆ ಬಂದು ಗ್ರಾಮಸ್ಥರ ವಿರುದ್ದ ದೂರು ನೀಡಿದ್ದರು. ಗ್ರಾಮಸ್ಥರಾದ ರಮೇಶ್ ಹಾಗೂ ಕೃಷ್ಣೇಗೌಡ ಯಶ್ ಪೋಷಕರ ವಿರುದ್ದ ಠಾಣೆಗೆ ದೂರು ನೀಡಿದ್ದರು. ಈ ವ್ಯಾಜ್ಯ ಕಂದಾಯ ಇಲಾಖೆ ವ್ಯಾಪ್ತಿಗೆ ಬರುತ್ತದೆ ಅಧಿಕಾರಿಗಳಿಂದ ಸರ್ವೆ ಮಾಡಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ ಅಲ್ಲಿಯವರೆಗು ಎರಡು ಕಡೆಯವರು ಗಲಾಟೆ ಮಾಡಿಕೊಳ್ಳಬಾರದೆಂದು ದುದ್ದ ಪೊಲೀಸರು ಎರಡು ಕಡೆಯವರಿಗೂ ಸೂಚನೆ ನೀಡಿದ್ದರು.
'ಯಶ್ ಗೆ ಧಿಕ್ಕಾರ...' ರಾಕಿಂಗ್ ಸ್ಟಾರ್ ವಿರುದ್ಧ ಗ್ರಾಮಸ್ಥರ ಆಕ್ರೋಶ
ಇಂದು ತಿಮ್ಲಾಪುರ ಗ್ರಾಮದ ಹೊರಗಿರುವ ಕಾಲಭೈರವೇಶ್ವರ ದೇವಾಲಯದ ಆವರಣದಲ್ಲಿ ಎರಡು ಕಡೆಯವರು ಚರ್ಚಿಸಿ ಸಮಸ್ಯೆಗೆ ಇತಿಶ್ರೀ ಹಾಡಿದ್ದಾರೆ. ತಪ್ಪು ಮಾಹಿತಿಯಿಂದ ಯಶ್ ಪೋಷಕರೊಂದಿಗೆ ಗಲಾಟೆ ನಡೆದಿತ್ತು. ನಂತರ ಗ್ರಾಮದ ಹಿರಿಯರು ವಾಸ್ತವಾಂಶ ತಿಳಿಸಿದ್ದಾರೆ.