Don't Miss!
- News ‘ದೇವೇಗೌಡ್ರು ಕೋಲಾರದಲ್ಲಿ ಕುಟುಂಬದವರಿಗೆ ಬಿಟ್ಟು ಕಾರ್ಯಕರ್ತರಿಗೆ ಟಿಕೆಟ್ ಯಾಕೆ ಕೊಟ್ರು ಗೊತ್ತಾ?’
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳೆದ ವರ್ಷ ಜನವರಿ 25 ರಂದು ಸ್ಯಾಂಡಲ್ವುಡ್ನಲ್ಲಿ ಏನಾಗಿತ್ತು?
ಜನವರಿ 25, 2019ರಲ್ಲಿ ಕನ್ನಡ ಇಂಡಸ್ಟ್ರಿಯಲ್ಲಿ ಏನಾಗಿತ್ತು? ಒಂದು ವರ್ಷದ ಹಿಂದಿನ ಫ್ಲಾಶ್ ಬ್ಯಾಕ್ ಕುರಿತು ಒಂದು ನೆನಪು ಮೆಲುಕು ಹಾಕೋಣ. ಕಳೆದ ವರ್ಷ ಈ ದಿನಕ್ಕೆ ಪುನೀತ್ ರಾಜ್ ಕುಮಾರ್ ಅಭಿನಯಿಸಿದ್ದ ನಟಸಾರ್ವಭೌಮ ಟ್ರೈಲರ್ ಬಿಡುಗಡೆಯಾಗಿತ್ತು.
ಪವನ್ ಒಡೆಯರ್ ನಿರ್ದೇಶನ ಮಾಡಿದ್ದ ನಟಸಾರ್ವಭೌಮ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ, ಮೊದಲ ದಿನವೇ ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿ ಟಾಪ್ ಗೆ ಹೋಗಿತ್ತು. 15 ನಿಮಿಷದಲ್ಲಿ 1 ಲಕ್ಷ ವೀವ್ಸ್ ಕಂಡಿತ್ತು. 110 ನಿಮಿಷದಲ್ಲಿ 4 ಲಕ್ಷ ವೀಕ್ಷಣೆ ಕಂಡಿತ್ತು.
ಬಂದ ನೋಡೋ 'ನಟಸಾರ್ವಭೌಮ', ದಾಖಲೆಗಳೆಲ್ಲಾ ನೆಲಸಮ
ಅದೇ ದಿನ ನಿಖಿಲ್ ಕುಮಾರ್ ಅಭಿನಯಿಸಿದ್ದ ಸೀತಾರಾಮ ಕಲ್ಯಾಣ ಚಿತ್ರವೂ ಬಿಡುಗಡೆಯಾಗಿತ್ತು. ಹರ್ಷ ನಿರ್ದೇಶನ ಮಾಡಿದ್ದ ಈ ಚಿತ್ರದಲ್ಲಿ ರಚಿತಾ ರಾಮ್ ನಾಯಕಿಯಾಗಿದ್ದರು.
ಸೀತಾರಾಮ ಕಲ್ಯಾಣ ಚಿತ್ರದ ಜೊತೆಗೆ ಮಿಸ್ಡ್ ಕಾಲ್ ಮತ್ತು ಸಪ್ಲಿಮೆಂಟರಿ ಎಂಬ ಚಿತ್ರಗಳು ಕೂಡ ತೆರೆಗೆ ಬಂದಿತ್ತು.
Seetharama Kalyana Review : 'ಸೀತಾರಾಮ ಕಲ್ಯಾಣ', ಇದು ಎಲ್ಲದರ ಮಿಶ್ರಣ
ಇನ್ನು ಮದುವೆ ಕುರಿತು ರಚಿತಾ ರಾಮ್ ಹೇಳಿದ್ದ ಮಾತು ಭಾರಿ ಚರ್ಚೆಗೆ ಕಾರಣವಾಗಿತ್ತು. ಸೀತಾರಾಮ ಕಲ್ಯಾಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಚ್ಚು, 'ನಾನು ಗೌಡರ ಮಗನನ್ನೇ ಮದುವೆ ಆಗ್ತೀನಿ' ಎಂದಿದ್ದರು. ಅಂದು ರಚಿತಾ ರಾಮ್ ಹೇಳಿದ್ದ ಆ ಮಾತು ಈಗಲೂ ಸದ್ದು ಮಾಡ್ತಿದೆ.