Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಿಗ್ಗಜ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ
ದಿಗ್ಗಜ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೇಂದ್ರ ಸರ್ಕಾರ ಪದ್ಮವಿಭೂಷಣ ಪ್ರಶಸ್ತಿ ಘೋಷಣೆ ಮಾಡಿದೆ. 72ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಸಾಧಕರಿಗೆ ಪದ್ಮವಿಭೂಷಣ ಮತ್ತು ಪದ್ಮಭೂಷಣ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.
ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಕಟ ಮಾಡಲಾಗಿದೆ. ಎಸ್ಪಿಬಿಗೆ ಕೇಂದ್ರ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಎಸ್ ಪಿ ಬಿಗೆ 'ಸ್ವೀಟ್' ಗೌರವ; ಚಾಕೋಲೇಟ್ ನಲ್ಲಿ ಗಾನ ಗಂಧರ್ವನ ಪ್ರತಿಮೆ
ಎಸ್ ಪಿ ಬಾಲಸುಬ್ರಹ್ಮಣ್ಯಂ ಜೊತೆಗೆ ಜಪಾನ್ ದೇಶ ಮಾಜಿ ಪ್ರಧಾನಿ ಶಿಂಜೋ ಅಬೆ, ಡಾ.ಬೆಳ್ಳೆ ಮೋನಪ್ಪ ಹೆಗ್ಡೆ (ವೈದ್ಯಕೀಯ) ಮರಳು ಶಿಲ್ಪಿ ಸುದರ್ಶನ್ ಸಾಹೋ, ವಾಸ್ತುಶಿಲ್ಪಿ ಬಿಬಿ ಲಾಲ್, ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ನರೀಂದರ್ ಸಿಂಗ್ ಕಪನಿ (ಮರಣೋತ್ತರ), ಆಧಾತ್ಮ ಕ್ಷೇತ್ರದಲ್ಲಿ ಮೌಲಾನಾ ವಹಿದುದ್ದೀನ್ ಖಾನ್ ಅವರಿಗೂ ಪದ್ಮವಿಭೂಷಣ ನೀಡಲಾಗುತ್ತಿದೆ.
ವಿವಿಧ ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಸಾಧಕರು
ಪದ್ಮವಿಭೂಷಣ: ಡಾ. ಬಿ. ಎಂ ಹೆಗ್ಡೆ (ವೈದ್ಯಕೀಯ)
ಪದ್ಮ ಭೂಷಣ: ಡಾ. ಚಂದ್ರಶೇಖರ ಕಂಬಾರ (ಸಾಹಿತ್ಯ ಮತ್ತು ಶಿಕ್ಷಣ)
ಪದ್ಮಶ್ರೀ: ಮಾತಾ ಬಿ ಮಂಜಮ್ಮ ಜೋಗತಿ (ಕಲೆ)
ಪದ್ಮಶ್ರೀ: ರಂಗಸ್ವಾಮಿ ಲಕ್ಷ್ಮಿನಾರಾಯಣ ಕಶ್ಯಪ್ (ಸಾಹಿತ್ಯ ಮತ್ತು ಶಿಕ್ಷಣ)
ಪದ್ಮಶ್ರೀ: ಕೆವೈ ವೆಂಕಟೇಶ್ (ಕ್ರೀಡೆ)
ಸಂಗೀತ, ನೃತ್ಯ ಶಾಲೆಗೆ ಎಸ್ಪಿ ಬಾಲಸುಬ್ರಹ್ಮಣ್ಯಂ ಹೆಸರಿಟ್ಟ ಆಂಧ್ರ ಸರ್ಕಾರ
ಅಂದ್ಹಾಗೆ, ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಸುಮಾರು 50 ವರ್ಷಗಳ ಸಂಗೀತ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. ಅತ್ಯುತ್ತಮ ಗಾಯನಕ್ಕಾಗಿ ಆರು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ನೀಡುವ ಪದ್ಮಶ್ರೀ ಹಾಗೂ ಪದ್ಮ ಭೂಷಣ ಗೌರವಕ್ಕೆ ಸಹ ಪಾತ್ರರಾಗಿದ್ದರು.
Recommended Video
ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು 2020 ಸೆಪ್ಟೆಂಬರ್ 25 ರಂದು ಚೆನ್ನೈ ಎಂಜಿಎಂ ಹೆಲ್ತ್ ಕೇರ್ನಲ್ಲಿ ನಿಧನರಾದರು. ಕೊರೊನಾ ವೈರಸ್ ತಗುಲಿದ ಕಾರಣ ಆಸ್ಪತ್ರೆಗೆ ದಾಖಲಾದ ಎಸ್ಪಿಬಿ ಸುಮಾರು 50 ದಿನಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅಂತಿಮವಾಗಿ ಗುಣಮುಖರಾಗದೇ ವಿಧಿವಶರಾದರು.