Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿನಯ್ ರಾಜ್ ಕುಮಾರ್ ಚಿತ್ರದ ವಿರುದ್ಧ ಹೈಕೋರ್ಟ್ ನಲ್ಲಿ ಅರ್ಜಿ
ನಟ ವಿನಯ್ ರಾಜ್ ಕುಮಾರ್ ಅಭಿನಯದ 'ಅನಂತು v/s ನುಸ್ರತ್' ಸಿನಿಮಾದ ವಿರುದ್ಧ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಕೀಲರಾದ ಎನ್.ಪಿ.ಅಮೃತೇಶ್ ಸಿನಿಮಾದ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸುವಂತೆ ಹೈ ಕೋರ್ಟ್ ಮೊರೆ ಹೋಗಿದ್ದಾರೆ.
'ರಾಜವಂಶ'ದಿಂದ ಬಂತು ಹೊಸ ವರ್ಷದ ಉಡುಗೊರೆ
'ಅನಂತು v/s ನುಸ್ರತ್' ಸಿನಿಮಾದಲ್ಲಿ ನಟ ವಿನಯ್ ರಾಜ್ ಕುಮಾರ್ ಲಾಯರ್ ಪಾತ್ರವನ್ನು ಮಾಡಿದ್ದರು. ಕೆಲ ತಿಂಗಳ ಹಿಂದೆ ಚಿತ್ರದ ಫೋಟೋ ಶೂಟ್ ನಡೆದಿದ್ದು, ಅದನ್ನು ಹೈಕೋರ್ಟ್ ಆವರಣದಲ್ಲಿ ಮಾಡಲಾಗಿತ್ತು. ಈಗ ಅದೇ ವಿಷಯ ಚಿತ್ರತಂಡಕ್ಕೆ ತಲೆನೋವಾಗಿದೆ. ರಾಷ್ಟ್ರೀಯ ಸ್ಮಾರಕ ರಕ್ಷಣಾ ಕಾಯ್ದೆ ಪ್ರಕಾರ ಹೈಕೋರ್ಟ್ ಸೇರಿದಂತೆ ಕೆಲವು ಸ್ಥಳಗಳು ನಿರ್ಭಂಧಿತ ಪ್ರದೇಶಗಳಾಗಿರುತ್ತದೆ. ಇಂತಹ ಸ್ಥಳದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಅವಕಾಶ ನೀಡುವುದಿಲ್ಲ. ಆದರೆ 'ಅನಂತು v/s ನುಸ್ರತ್' ಸಿನಿಮಾದ ಫೋಟೋ ಶೂಟ್ ಹೈಕೋರ್ಟ್ ನಲ್ಲಿ ಮಾಡಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಅನೇಕ ದಿನಗಳಿಂದ ಹರಿದಾಡಿದೆ.
ವಕೀಲ ಎನ್.ಪಿ.ಅಮೃತೇಶ್ ಎಂಬುವವರು ಮೊದಲು ಈ ಬಗ್ಗೆ ವಿಧಾನಸೌಧ ಪೋಲೀಸರಿಗೆ ದೂರು ನೀಡಿದ್ದರು. ಆದರೆ ಇನ್ನು ಕೂಡ ಚಿತ್ರತಂಡದ ವಿರುದ್ಧ ಎಫ್.ಐ.ಆರ್ ದಾಖಲಾಗಿಲ್ಲ. ಈ ಕಾರಣ ವಕೀಲ ಎನ್.ಪಿ.ಅಮೃತೇಶ್ ಇಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅಂದಹಾಗೆ, ವಿನಯ್ ರಾಜ್ ಕುಮಾರ್ ಅವರ 'ಅನಂತು v/s ನುಸ್ರತ್' ಸಿನಿಮಾದ ಎರಡನೇ ಪೋಸ್ಟರ್ ನಿನ್ನೆ ಹೊರಬಂದಿದೆ. ವಿನಯ್ ರಾಜ್ ಕುಮಾರ್ ಇಲ್ಲಿ ಪಕ್ಕಾ ಬ್ರಾಹ್ಮಣ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪಂಚೆ ತೊಟ್ಟು ವಿನಯ್ ಪೋಸ್ ಕೊಟ್ಟಿದ್ದಾರೆ. ಅಂದಹಾಗೆ, ಈ ಚಿತ್ರವನ್ನು ಸುಧೀರ್ ಶಾನುಭೋಗ್ ಎಂಬುವವರು ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಲತಾ ಹೆಗಡೆ ನಾಯಕಿ ಆಗಿದ್ದಾರೆ