Don't Miss!
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- News ವಸೂಲಿ ಟೈಟಾನ್ಸ್, ಇಂಪ್ಯಾಕ್ಟ್ ಪ್ಲೇಯರ್ ಇ.ಡಿ; ಮೋದಿ, ಬಿಜೆಪಿಯನ್ನು ಅಣಕಿಸಿದ ಮಹಿಳಾ ಕ್ರಿಕೆಟರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯ ಸನಿಹದಲ್ಲಿ '99' ಚಿತ್ರಕ್ಕೆ ಎದುರಾಯ್ತು ಸಂಕಷ್ಟ
Recommended Video
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 99 ಸಿನಿಮಾ ಇದೇ ವಾರ ತೆರೆಕಾಣುತ್ತಿದೆ. ಮೇ1 ಕಾರ್ಮಿಕರ ದಿನದಂದು ಚಿತ್ರಮಂದಿರಕ್ಕೆ ಎಂಟ್ರಿಯಾಗುತ್ತಿದೆ. ಹೀಗಿರುವಾಗ ಹರೀಶ್ ಕುಮಾರ್ ವ್ಯಕ್ತಿ ಚಿತ್ರದ ಬಿಡುಗಡೆಗೆ ತಡೆ ನೀಡಬೇಕೆಂದು ಕೋರ್ಟ್ ಮೊರೆ ಹೋಗಿದ್ದಾರೆ.
ಚಿತ್ರದ ನಿರ್ಮಾಪಕ ತನ್ನ ಬಳಿ ಸಾಲ ಪಡೆದಿದ್ದು ಹಿಂತಿರುಗಿಸಿಲ್ಲ. ಹಾಗಾಗಿ, ಅವರ ಸಿನಿಮಾ ರಿಲೀಸ್ ಗೆ ತಡೆ ನೀಡಬೇಕೆಂದು ಕೆಳಹಂತದ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ.
ಪ್ರಕರಣ ಕೈಗೆತ್ತಿಕೊಂಡ ಕೋರ್ಟ್ ಚಿತ್ರಕ್ಕೆ ತಡೆ ನೀಡಲು ನಿರಾಕರಿಸಿದೆ. ಆದ್ರೆ, ನಿರ್ಮಾಪಕ ರಾಮು ಅವರಿಗೆ ತುರ್ತು ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಸಂಬಂಧ ನಾಳೆ ಮತ್ತೆ ವಿಚಾರಣೆ ನಡೆಯಲಿದೆ.
'ಅಣ್ಣಾಬಾಂಡ್' ಆದ್ಮೇಲೆ '99' ಚಿತ್ರದಿಂದ ಅಪರೂಪದ ಬಿಡುಗಡೆ
ಗಂಗಾ ಸಿನಿಮಾ ಮಾಡಬೇಕಾದರೇ, ಲಕ್ಷ್ಮಿ ಫೈನಾನ್ಸ, ಪಲ್ಲವಿ ಚಿತ್ರಮಂದಿರದ ಮಾಲೀಕರಾದ ಹರೀಶ್ ಕುಮಾರ್ ಅವರಿಂದ 65 ಲಕ್ಷ ಸಾಲ ಪಡೆದಿದ್ದರಂತೆ. ಈ ಸಾಲವನ್ನ ಮರುಪಾವತಿ ಮಾಡಿಲ್ಲ ಎಂದು ಆರೋಪ ಈಗ ಕೇಳಿಬಂದಿದೆ.
ಅಂದ್ಹಾಗೆ, 2015ರಲ್ಲಿ ತೆರೆಕಂಡಿದ್ದ ಗಂಗಾ ಚಿತ್ರವನ್ನ ರಾಮು ನಿರ್ಮಿಸಿದ್ದರು. ಮಾಲಾಶ್ರೀ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಈ ಚಿತ್ರವನ್ನ ಸಾಯಿ ಪ್ರಕಾಶ್ ನಿರ್ದೇಶನ ಮಾಡಿದ್ದರು. ಈ ಚಿತ್ರದ ಅಭಿನಯಕ್ಕೆ ಮಾಲಾಶ್ರೀ ಅವರಿಗೆ ರಾಜ್ಯ ಪ್ರಶಸ್ತಿ ಲಭಿಸಿತ್ತು.
99 ಟ್ರೈಲರ್: ಭಾವನಾತ್ಮಕವಾಗಿ ಕಟ್ಟಿಹಾಕುವ ರಾಮ್-ಜಾನು
ಇನ್ನು 99 ಸಿನಿಮಾ ತಮಿಳಿನ 96 ಚಿತ್ರದ ರೀಮೇಕ್. ಪ್ರೀತಂ ಗುಬ್ಬಿ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ರಾಮು ನಿರ್ಮಿಸಿದ್ದಾರೆ. ಗಣೇಶ್, ಭಾವನಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಅರ್ಜುನ್ ಜನ್ಯ ಅವರಿಗೆ ಇದು 100ನೇ ಚಿತ್ರವಾಗಿದೆ.