Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 16 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇಮ್ರಾನ್ 'ಉಪ್ಪು-ಹುಳಿ'ಗೆ 'ಖಾರ' ಹಾಕಲಿರುವ ಹೊಸ ಹೀರೋ ಯಾರು.?
ಸ್ಯಾಂಡಲ್ ವುಡ್ ನ ಡ್ಯಾನ್ಸ್ ಮಾಸ್ಟರ್ ಇಮ್ರಾನ್ ಸರ್ದಾರಿಯಾ ಅವರು ನಟಿ ಮಾಲಾಶ್ರೀ ಅವರ ಜೊತೆ ಕೋಳಿ ಜಗಳ ಆಡಿ, ತದನಂತರ ಎಲ್ಲವೂ ಸುಖಾಂತ್ಯ ಕಂಡಿದ್ದು ಹಳೇ ವಿಷಯ.
ನಂತರ ಇಬ್ಬರು ಒಂದಾಗಿ 'ಜೀ ಕನ್ನಡ' ವಾಹಿನಿಯ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿದ್ದರು. ಇದೀಗ ಮತ್ತೆ 'ಉಪ್ಪು-ಹುಳಿ-ಖಾರ' ಟ್ರ್ಯಾಕ್ ಗೆ ಮರಳಿರುವ ಇಮ್ರಾನ್ ಅವರು ತಮ್ಮ ಚಿತ್ರಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಿದ್ದಾರೆ.
ಸದಾ ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಡ್ಯಾನ್ಸ್ ಮಾಸ್ಟರ್ ಕಮ್ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಅವರು ಈ ಬಾರಿ ಕೂಡ ಹೊಸ ಪ್ರತಿಭೆಯನ್ನು ತಮ್ಮ ಚಿತ್ರದ ಮೂಲಕ ಬೆಳ್ಳಿತೆರೆಗೆ ಪರಿಚಯಿಸುತ್ತಿದ್ದಾರೆ.['ಉಪ್ಪು ಹುಳಿ ಖಾರ' ತಿನ್ನೋಕೆ ರೆಡಿಯಾದ ಇಮ್ರಾನ್ ಸರ್ದಾರಿಯಾ]
ಈ ಮೊದಲು ಇಮ್ರಾನ್ ಅವರ ಗರಡಿಯಲ್ಲಿ ಪಳಗಿದ ನಟಿ ಶ್ರುತಿ ಹರಿಹರನ್ ಅವರು ಇದೀಗ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿ ಜನಪ್ರಿಯ ನಟಿಯಾಗಿ ಹೊರಹೊಮ್ಮಿದ್ದಾರೆ.
ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಶರತ್ ಎಸ್ ಅವರು. ಅಷ್ಟಕ್ಕೂ ಈ ಶರತ್ ಎಸ್ ಯಾರು?, ಅನ್ನೋದನ್ನ ನೋಡಿ ಕೆಳಗಿನ ಸ್ಲೈಡ್ಸ್ ಗಳಲ್ಲಿ.....

ಶರತ್ ಎಸ್
ಖ್ಯಾತ ನೃತ್ಯಪಟುವಾಗಿರುವ 26 ವರ್ಷ ವಯಸ್ಸಿನ ಶರತ್ ಎಸ್ ಅವರು ವೃತ್ತಿಯಲ್ಲಿ ಸತತ ಎಂಟು ವರ್ಷಗಳಿಂದ ನೃತ್ಯ ತರಬೇತುದಾರರಾಗಿದ್ದಾರೆ.[ಮಾಲಾಶ್ರೀ 'ಉಪ್ಪು ಹುಳಿ ಖಾರ'ದ 'ಕಹಿ' ಸತ್ಯ ಬಿಚ್ಚಿಟ್ಟ ಇಮ್ರಾನ್.!]

ಲೈಫ್ ಸೂಪರ್ ಗುರು ವಿನ್ನರ್
'ಜೀ ಕನ್ನಡ' ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಲೈಫ್ ಸೂಪರ್ ಗುರು' ರಿಯಾಲಿಟಿ ಶೋನ ವಿನ್ನರ್ ಪಟ್ಟವನ್ನು ಕೂಡ ಶರತ್ ಅವರು ತಮ್ಮ ಮುಡಿಗೇರಿಸಿಕೊಂಡಿದ್ದರು.[ಸಂಧಾನ ಸಕ್ಸಸ್: ಒಂದಾದ ಮಾಲಾಶ್ರೀ-ಇಮ್ರಾನ್ ಸರ್ದಾರಿಯಾ]

ನಿರೂಪಕ ಕೂಡ
ಅಲ್ಲದೇ 'ಜೀ ಕನ್ನಡ' ವಾಹಿನಿಯಲ್ಲಿ ಬರುತ್ತಿದ್ದ 'ನಮ್ ದೇಶದ್ ಕಥೆ' ಎಂಬ ಕಾರ್ಯಕ್ರಮಕ್ಕೆ ಕೂಡ ಶರತ್ ಅವರು ನಿರೂಪಕರಾಗಿ ಕಾಣಿಸಿಕೊಂಡಿದ್ದಾರೆ.

ಬೆಳ್ಳಿತೆರೆಗೆ ಪದಾರ್ಪಣೆ
ಇದೀಗ ಇಮ್ರಾನ್ ಸರ್ದಾರಿಯಾ ಅವರ 'ಉಪ್ಪು-ಹುಳಿ-ಖಾರ' ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡುತ್ತಿರುವ ಶರತ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಅನುಶ್ರೀ ಜೊತೆ ಡ್ಯುಯೆಟ್
ಈ ಚಿತ್ರದಲ್ಲಿ ನಟಿ ಕಮ್ ನಿರೂಪಕಿ ಅನುಶ್ರೀ ಅವರ ಜೊತೆ ಶರತ್ ಅವರು ಡ್ಯುಯೆಟ್ ಹಾಡಲಿದ್ದಾರೆ.

ಪ್ರೇಮ್ ಮತ್ತು ಮಾನ್ವಿತಾ ಹರಿಶ್ ಗೆ ಡ್ಯಾನ್ಸ್ ಮಾಸ್ಟರ್
ಅಂದಹಾಗೆ ಶರತ್ ಅವರು ನಟ ಪ್ರೇಮ್ ಮತ್ತು ನಟಿ ಮಾನ್ವಿತಾ ಹರೀಶ್ ಅವರಿಗೆ ವೈಯಕ್ತಿಕವಾಗಿ ನೃತ್ಯ ತರಬೇತಿಯನ್ನು ನೀಡಿದ್ದಾರೆ.

ಮೂರು 'ಶ್ರೀ'ಗಳ ಜೊತೆ ಇಮ್ರಾನ್
ಈ ಚಿತ್ರದಲ್ಲಿ ನಟಿ ಮಾಲಾಶ್ರಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಜೊತೆಗೆ ನಟಿ ಅನುಶ್ರೀ ಮತ್ತು ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಅವರು ಕೂಡ ಮುಖ್ಯ ನಾಯಕಿಯರಾಗಿ ಮಿಂಚಿದ್ದಾರೆ.