Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕೊಲ್ಲುವುದಾಗಿ ಬೆದರಿಕೆ ಪತ್ರ
ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಪತ್ರವೊಂದು ಬಂದಿದೆ. ಈ ವಿಷಯವನ್ನು ಸಾಹಿತಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಕಾರ್ಯಕ್ರಮವೊಂದರಲ್ಲಿ ಬಹಿರಂಗಗೊಳಿಸಿದ್ದಾರೆ.
ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಾಹಿತಿ ಲಲಿತಾ ನಾಯಕ್ ಶಿವರಾಜ್ ಕುಮಾರ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಪತ್ರ ಬಂದಿರುವುದಾಗಿ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಭೇಟಿ ಮಾಡಿದ ಶಿವಣ್ಣ: ಕಾಂಗ್ರೆಸ್ ಪಕ್ಷಕ್ಕೆ ಗೀತಾ ಸೇರ್ಪಡೆ?
''ಮೇ. 1 ರಂದು ನನ್ನನ್ನು ಕೊಲೆ ಮಾಡುತ್ತಾರಂತೆ. ಈ ಕುರಿತ ಪತ್ರ ನನಗೆ ಬಂದಿದೆ. ಬಿಜೆಪಿ ಶಾಸಕ ಸಿ.ಟಿ. ರವಿ, ಸಂಪಾದಕ ರಂಗನಾಥ್(ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುತ್ತಾರಂತೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ, ಪೊಲೀಸರು ಈ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ'' ಎಂದು ಹೇಳಿದ್ದಾರೆ ಲಲಿತಾ ನಾಯಕ್.
ನಟ ಶಿವರಾಜ್ ಕುಮಾರ್ ಹಾಗೂ ರಾಜ್ಯದ ಇನ್ನಿತರೆ ಗಣ್ಯರನ್ನು ಕೊಲೆ ಮಾಡುವ ಯೋಚನೆ ಹೊಂದಿರುವುದರ ಉದ್ದೇಶ ಏನು? ಪತ್ರ ಬರೆದವರು ಯಾರು? ಎಂಬುದು ಸ್ಪಷ್ಟವಾಗಿಲ್ಲ.
ಮುಂದುವರೆದು ಕಾರ್ಯಕ್ರಮದಲ್ಲಿ ಮಾತನಾಡಿದ ಬಿಟಿ.ಲಲಿತಾ ನಾಯಕ್, 'ಈ ಬೆದರಿಕೆಗಳಿಗೆ ನಾನು ಹೆದರುವಳು ಅಲ್ಲ. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಸಿಟಿ ರವಿ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಕೊಲೆ ಮಾಡುವರು ಎಲ್ಲಿದ್ದರೂ ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೇ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ'' ಎಂದು ಲಲಿತಾ ನಾಯಕ್ ತಿಳಿಸಿದ್ದಾರೆ.
ಶಿವರಾಜ್ ಕುಮಾರ್ಗೆ ನಂದಕಿಶೋರ್ ನಿರ್ದೇಶನ; ಎರಡು ಭಾಷೆಯಲ್ಲಿ ತಯಾರಾಗುತ್ತಿದೆ ಸಿನಿಮಾ
Recommended Video
ಬಿಟಿ.ಲಲಿತಾ ನಾಯಕ್ ಅವರಿಗೆ ಬಂದಿರುವ ಪತ್ರದಲ್ಲಿ ಮಾತ್ರವೇ ಶಿವರಾಜ್ ಕುಮಾರ್ ಹಾಗೂ ಇನ್ನಿತರ ಗಣ್ಯರನ್ನು ಕೊಲ್ಲುವ ಬೆದರಿಕೆ ಹಾಕಲಾಗಿದೆಯೇ ಅಥವಾ ಬಿಟಿ ಲಲಿತಾ ನಾಯಕ್ ಅಂತೆಯೇ ಇತರೆ ಗಣ್ಯರಿಗೂ ಈ ರೀತಿಯ ಪತ್ರಗಳು ಬಂದಿದೆಯೇ ತಿಳಿಯಬೇಕಿದೆ.