Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಜ್ಜನಿಗೆ ತಕ್ಕ ಮೊಮ್ಮಗ ವಿನಯ್ ರಾಜ್ ಕುಮಾರ್
ವರನಟ ಡಾ.ರಾಜ್ ಕುಮಾರ್ ಕುಟುಂಬದ ವ್ಯಕ್ತಿಗಳಲ್ಲಿ ಸಹಜವಾಗಿ ಸದ್ಗುಣ ಸಂಪನ್ನತೆ ಕೂಡಿ ಬರುತ್ತೆ ಅಂತ ಸ್ಯಾಂಡಲ್ ವುಡ್ ಕೊಂಡಾಡ್ತಿದೆ. ಇದಕ್ಕೆ ಕಾರಣವಾಗಿರೋದು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್.
ಮೇ 7ಕ್ಕೆ ತಮ್ಮ 25ನೇ ಹುಟ್ಟುಹಬ್ಬ ಆಚರಿಸಿಕೊಂಡ ವಿನಯ್ ರಾಜ್ ಕುಮಾರ್ ಗೆ ತಂದೆ ರಾಘವೇಂದ್ರ ರಾಜ್ ಕುಮಾರ್ ರು.5 ಲಕ್ಷ ರುಪಾಯಿ ಕೊಡ್ತೀನಿ ಮಗನೆ ಹುಟ್ಟಿದ ಹಬ್ಬಕ್ಕೆ ಏನಾದ್ರೂ ನಿನಗಿಷ್ಟವಾಗಿದ್ದು ತೆಗೆದುಕೋ ಅಂದ್ರಂತೆ. [ಭೂಕಂಪ ಸಂತ್ರಸ್ತರಿಗೆ ಶಿವಣ್ಣ, ವಿನಯ್ ನೆರವಿನ ಹಸ್ತ]
ಸ್ವಲ್ಪ ಹೊತ್ತು ಯೋಚಿಸಿದ ವಿನಯ್ ರಾಜ್ ಕುಮಾರ್, ಆ ದುಡ್ಡು ನನಗೇನು ಬೇಡ. ಅದನ್ನು ನೇಪಾಳದ ಭೂಕಂಪ ಸಂತ್ರಸ್ತರಿಗೆ ಕೊಟ್ಟು ಬಿಡೋಣ ಅಂತ ಹೇಳಿದ್ರಂತೆ. ಮಗನ ನಿರ್ಧಾರ ನೋಡಿ ಖುಷಿಯಾದ ರಾಘಣ್ಣ, ಶಿವರಾಜ್ ಕುಮಾರ್ ಮತ್ತು ಪುನೀತ್ ಜೊತೆ ಮಾತನಾಡಿ ರಾಜ್ ಕುಟುಂಬದ ಕಡೆಯಿಂದ ರು.10 ಲಕ್ಷ ಹಣವನ್ನ ಕೊಡೋ ನಿರ್ಧಾರ ಮಾಡಿದ್ದಾರೆ.
ಶಿವಣ್ಣ, ರಾಘಣ್ಣ ಹಾಗೂ ಅವರ ಪುತ್ರ ವಿನಯ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ (ಮೇ.7) ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ, ಪ್ರಧಾನಮಂತ್ರಿಗಳ ಪರಿಹಾರ ನಿಧಿ ಹೆಸರಿಗೆ ಬರೆದ ರು.10 ಲಕ್ಷದ ಚೆಕ್ (ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ವಿನಯ್ ರಾಜ್ ಕುಮಾರ್ ಅವರು ತಲಾ ರು.5 ಲಕ್ಷ) ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಒಟ್ಟಾರೆಯಾಗಿ ವಿನಯ್ ರಾಜ್ ಅವರ ಅರ್ಥಪೂರ್ಣ ಹುಟ್ಟುಹಬ್ಬ ಅಲ್ಲವೇ?