Don't Miss!
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ 3 ಹಾಡಿಗೆ ರಾಜ್ಯ ಪ್ರಶಸ್ತಿ, 1 ರಾಷ್ಟ್ರಪ್ರಶಸ್ತಿ ಪಡೆದಿರುವ ಎಸ್ಪಿಬಿ, ಯಾವುದು ಆ ಹಾಡುಗಳು?
ಸುಮಾರು 16 ಭಾಷೆಗಳು, 40 ಸಾವಿರಕ್ಕೂ ಅಧಿಕ ಹಾಡುಗಳು ಹಾಡಿರುವ ದಿಗ್ಗಜ ಗಾಯಕನಿಗೆ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿದೆ. ಎಸ್ಪಿಬಿ ಗಾಯನಕ್ಕಾಗಿ ಆರು ರಾಷ್ಟ್ರ ಪ್ರಶಸ್ತಿಗಳು, ಕರ್ನಾಟಕ, ಆಂಧ್ರ, ತಮಿಳುನಾಡು ರಾಜ್ಯ ಸರ್ಕಾರಗಳಿಂದ ಒಟ್ಟು ಇಪತ್ಮೂರು ರಾಜ್ಯ ಪ್ರಶಸ್ತಿಗಳು ಬಂದಿವೆ.
ಬಾರದ ಊರಿಗೆ ಎಸ್ಪಿಬಿ: ಚೆನ್ನೈನಿಂದ ಬೆಂಗಳೂರಿಗೆ ಹಾಡಲು ಬಂದಾಗ ನಡೆದ ಘಟನೆ
ಒಂದೇ ದಿನದಲ್ಲಿ ಕನ್ನಡದಲ್ಲಿ 17 ಹಾಡುಗಳು, ಒಂದೇ ದಿನದಲ್ಲಿ ತೆಲುಗು ಹಾಗೂ ತಮಿಳಿನಲ್ಲಿ 19 ಹಾಡುಗಳು, ಒಂದೇ ದಿನದಲ್ಲಿ ಹಿಂದಿಯಲ್ಲಿ 16 ಹಾಡುಗಳು ರೆಕಾರ್ಡ್ ಮಾಡಿದ ಪ್ಲೇ ಬ್ಯಾಕ್ ಸಿಂಗರ್ ಎಸ್.ಪಿ.ಬಾಲಸುಬ್ರಹ್ಮಣ್ಯಂ. ಕನ್ನಡದಲ್ಲಿ ಮೂರು ರಾಜ್ಯ ಪ್ರಶಸ್ತಿ ಹಾಗೂ ಕನ್ನಡದ ಹಾಡಿಗಾಗಿ ಒಂದು ರಾಷ್ಟ್ರ ಪ್ರಶಸ್ತಿ ಎಸ್ಪಿಬಿಗೆ ಸಿಕ್ಕಿದೆ. ಹಾಗಾದ್ರೆ, ಬಾಲುಗೆ ಪ್ರಶಸ್ತಿ ತಂದು ಕೊಟ್ಟು ಆ ಹಾಡುಗಳು ಯಾವುದು?
'ಓ ಮಲ್ಲಿಗೆ' ಚಿತ್ರದ ಹಾಡಿಗೆ ಮೊದಲ ರಾಜ್ಯ ಪ್ರಶಸ್ತಿ
1997ರಲ್ಲಿ ಬಿಡುಗಡೆಯಾಗಿದ್ದ 'ಓ ಮಲ್ಲಿಗೆ' ಚಿತ್ರದ ಹಾಡಿಗಾಗಿ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ವಿ ಮನೋಹರ್ ಈ ಚಿತ್ರ ನಿರ್ದೇಶಿಸಿ, ಸಂಗೀತ ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಎಸ್ಪಿಬಿ ಹಾಡಿದ್ದರು. 'ಗಿರಿ ಸಿರಿ ಝರಿ ತೊರೆ' ಎಂಬ ಹಾಡಿಗೆ ಪ್ರಶಸ್ತಿ ಸಿಕ್ಕಿತ್ತು.
'ಸೃಷ್ಟಿ' ಚಿತ್ರದ ಹಾಡಿಗಾಗಿ ಎರಡನೇ ಸಲ
ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಎರಡನೇ ಸಲ ರಾಜ್ಯ ಪ್ರಶಸ್ತಿ ಸಿಕ್ಕಿದ್ದು 2004-05ನೇ ಸಾಲಿನಲ್ಲಿ. ಸೃಷ್ಟಿ ಎಂಬ ಚಿತ್ರದ 'ಹೃದಯದ ತುಂಬಾ....' ಹಾಡಿಗಾಗಿ ಬಾಲು ಅವರಿಗೆ ಅತ್ಯುತ್ತುಮ ಹಿನ್ನೆಲೆ ಗಾಯಕ ರಾಜ್ಯ ಪ್ರಶಸ್ತಿ ಲಭಿಸಿತ್ತು.
ದಿಗ್ಗಜ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಬಗ್ಗೆ ನೀವು ತಿಳಿಯಬೇಕಾದ ಆಸಕ್ತಿಕರ ಅಂಶಗಳು
ಮೂರನೇ ರಾಜ್ಯ ಪ್ರಶಸ್ತಿ ಯಾವಾಗ?
2007-08ನೇ ಸಾಲಿನಲ್ಲಿ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮೂರನೇ ಸಲ ರಾಜ್ಯ ಪ್ರಶಸ್ತಿ ದೊರೆಯಿತು. ಸಂತೋಷ್ ರೈ ಪತಾಜೆ ನಿರ್ದೇಶನದ ಸವಿ ಸವಿ ನೆನಪು ಚಿತ್ರದ 'ನೆನೆಪು ನೆನೆಪು.....' ಹಾಡಿಗಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆರ್ ಆರ್ ಪಟ್ನಾಯಕ್ ಸಂಗೀತ ನೀಡಿದ್ದರು. ಲವ್ಲಿಸ್ಟಾರ್ ಪ್ರೇಮ್ ನಾಯಕರಾಗಿದ್ದರು.
Recommended Video
ಒಂದೇ ಒಂದು ರಾಷ್ಟ್ರ ಪ್ರಶಸ್ತಿ
'ಸಂಗೀತ ಸಾಗರ ಗಾನಯೋಗಿ ಪಂಚಾಕ್ಷರ ಗವಾಯಿ' ಚಿತ್ರದ ಹಾಡಿಗಾಗಿ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಕನ್ನಡ ಹಾಡಿಗಾಗಿ ಎಸ್ಪಿಬಿ ಅವರಿಗೆ ಸಿಕ್ಕಿರುವ ಒಂದೇ ಒಂದು ರಾಷ್ಟ್ರ ಪ್ರಶಸ್ತಿ ಇದಾಗಿದೆ. 1995ರಲ್ಲಿ ತೆರೆಕಂಡಿದ್ದ ಈ ಚಿತ್ರಕ್ಕೆ ಹಂಸಲೇಖ ಸಂಗೀತ ನೀಡಿದ್ದರು.