Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣಾ ಕಣಕ್ಕೆ ಸುಮಲತಾ : ಭಾರತಿ ವಿಷ್ಣುವರ್ಧನ್ ಏನಂತಾರೆ?
Recommended Video
ಸಕ್ಕರೆ ನಾಡು ಮಂಡ್ಯ ಈ ಬಾರಿಯ ಚುನಾವಣೆಯ ಕೇಂದ್ರ ಬಿಂದುವಾಗಿದೆ. ರಾಜಕೀಯ ದೃಷ್ಟಿಯಿಂದ ಮಾತ್ರವಲ್ಲದೆ ಸಿನಿಮಾರಂಗ ಕೂಡ ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಮೇಲೆ ಗಮನ ಇಟ್ಟಿದೆ. ಅದಕ್ಕೆ ಕಾರಣ ಮಂಡ್ಯ ಕ್ಷೇತ್ರದ ಸ್ಪರ್ಧಿಗಳು.
ನಟಿ ಸುಮಲತಾ ಅಂಬರೀಶ್ ಹಾಗೂ ನಟ ನಿಖಿಲ್ ಕುಮಾರ್ ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಬಯಕೆ ಹೊಂದಿದ್ದಾರೆ. ಅಂದಹಾಗೆ, ಸುಮಲತಾ ಚುನಾವಣೆ ಸ್ಪರ್ಧೆಯ ಬಗ್ಗೆ ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯದಲ್ಲಿ ಸುಮಲತಾ-ನಿಖಿಲ್ ಸ್ಪರ್ಧೆ: ದರ್ಶನ್, ಸುದೀಪ್, ಯಶ್ ನಿಲುವೇನು?
''ಚುನಾವಣೆಗಳ ಬಗ್ಗೆ ನಮಗೆ ಜಾಸ್ತಿ ಆಸಕ್ತಿ ಇಲ್ಲ. ನಮ್ಮ ಯಜಮಾನರು ಆಗ ಅಂಬರೀಶ್ ಅವರ ಜೊತೆಗೆ ಇದ್ದರು. ಅದು ಬಿಟ್ಟರೆ ನಾವು ಚುನಾವಣೆಗಳಿಂದ ದೂರ.'' ಎಂದು ಭಾರತಿ ವಿಷ್ಣುವರ್ಧನ್ ಹೇಳಿಕೆ ನೀಡಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ಈ ರೀತಿ ಪ್ರತಿಕ್ರಿಯೆಯನ್ನು ಭಾರತಿ ವಿಷ್ಣುವರ್ಧನ್ ನೀಡಿದ್ದಾರೆ.
ಅಂದಹಾಗೆ, 'ಪುನೀತ್ ರಾಜ್ ಕುಮಾರ್ ನಟನೆಯ ದೊಡ್ಮನೆ ಹುಡ್ಗ' ಸಿನಿಮಾದಲ್ಲಿ ಸುಮಲತಾ ಅಂಬರೀಶ್ ಹಾಗೂ ಭಾರತಿ ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ್ದರು.
ಚುನಾವಣೆಗಾಗಿ ಹೊಸ ಫೋಟೋಶೂಟ್ ಮಾಡಿಸಿದ ಸುಮಲತಾ
ಮತ್ತೊಂದು ಕಡೆ ಸುಮಲತಾ ಹಾಗೂ ನಿಖಿಲ್ ಇಬ್ಬರೂ ಮಂಡ್ಯದಿಂದ ಸ್ಪರ್ಧೆ ಮಾಡಿದರೇ, ಸ್ಯಾಂಡಲ್ ವುಡ್ ನಟರ ಸಾಥ್ ಯಾರ ಕಡೆ ಇರುತ್ತದೆ ಎನ್ನುವ ಪ್ರಶ್ನೆ ಮೂಡಿದೆ.