twitter
    For Quick Alerts
    ALLOW NOTIFICATIONS  
    For Daily Alerts

    ಚುನಾವಣಾ ಕಣಕ್ಕೆ ಸುಮಲತಾ : ಭಾರತಿ ವಿಷ್ಣುವರ್ಧನ್ ಏನಂತಾರೆ?

    |

    Recommended Video

    Lok Sabha Elections 2019 : ಚುನಾವಣಾ ಕಣಕ್ಕೆ ಇಳಿಯುತ್ತಿರುವ ಸುಮಲತಾ ಬಗ್ಗೆ ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ

    ಸಕ್ಕರೆ ನಾಡು ಮಂಡ್ಯ ಈ ಬಾರಿಯ ಚುನಾವಣೆಯ ಕೇಂದ್ರ ಬಿಂದುವಾಗಿದೆ. ರಾಜಕೀಯ ದೃಷ್ಟಿಯಿಂದ ಮಾತ್ರವಲ್ಲದೆ ಸಿನಿಮಾರಂಗ ಕೂಡ ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಮೇಲೆ ಗಮನ ಇಟ್ಟಿದೆ. ಅದಕ್ಕೆ ಕಾರಣ ಮಂಡ್ಯ ಕ್ಷೇತ್ರದ ಸ್ಪರ್ಧಿಗಳು.

    ನಟಿ ಸುಮಲತಾ ಅಂಬರೀಶ್ ಹಾಗೂ ನಟ ನಿಖಿಲ್ ಕುಮಾರ್ ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಬಯಕೆ ಹೊಂದಿದ್ದಾರೆ. ಅಂದಹಾಗೆ, ಸುಮಲತಾ ಚುನಾವಣೆ ಸ್ಪರ್ಧೆಯ ಬಗ್ಗೆ ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ.

    ಮಂಡ್ಯದಲ್ಲಿ ಸುಮಲತಾ-ನಿಖಿಲ್ ಸ್ಪರ್ಧೆ: ದರ್ಶನ್, ಸುದೀಪ್, ಯಶ್ ನಿಲುವೇನು? ಮಂಡ್ಯದಲ್ಲಿ ಸುಮಲತಾ-ನಿಖಿಲ್ ಸ್ಪರ್ಧೆ: ದರ್ಶನ್, ಸುದೀಪ್, ಯಶ್ ನಿಲುವೇನು?

    ''ಚುನಾವಣೆಗಳ ಬಗ್ಗೆ ನಮಗೆ ಜಾಸ್ತಿ ಆಸಕ್ತಿ ಇಲ್ಲ. ನಮ್ಮ ಯಜಮಾನರು ಆಗ ಅಂಬರೀಶ್ ಅವರ ಜೊತೆಗೆ ಇದ್ದರು. ಅದು ಬಿಟ್ಟರೆ ನಾವು ಚುನಾವಣೆಗಳಿಂದ ದೂರ.'' ಎಂದು ಭಾರತಿ ವಿಷ್ಣುವರ್ಧನ್ ಹೇಳಿಕೆ ನೀಡಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ಈ ರೀತಿ ಪ್ರತಿಕ್ರಿಯೆಯನ್ನು ಭಾರತಿ ವಿಷ್ಣುವರ್ಧನ್ ನೀಡಿದ್ದಾರೆ.

    lok sabha election : bharathi vishnuvardhan reaction about sumalatha

    ಅಂದಹಾಗೆ, 'ಪುನೀತ್ ರಾಜ್ ಕುಮಾರ್ ನಟನೆಯ ದೊಡ್ಮನೆ ಹುಡ್ಗ' ಸಿನಿಮಾದಲ್ಲಿ ಸುಮಲತಾ ಅಂಬರೀಶ್ ಹಾಗೂ ಭಾರತಿ ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ್ದರು.

    lok sabha election : bharathi vishnuvardhan reaction about sumalatha

    ಚುನಾವಣೆಗಾಗಿ ಹೊಸ ಫೋಟೋಶೂಟ್ ಮಾಡಿಸಿದ ಸುಮಲತಾ ಚುನಾವಣೆಗಾಗಿ ಹೊಸ ಫೋಟೋಶೂಟ್ ಮಾಡಿಸಿದ ಸುಮಲತಾ

    ಮತ್ತೊಂದು ಕಡೆ ಸುಮಲತಾ ಹಾಗೂ ನಿಖಿಲ್ ಇಬ್ಬರೂ ಮಂಡ್ಯದಿಂದ ಸ್ಪರ್ಧೆ ಮಾಡಿದರೇ, ಸ್ಯಾಂಡಲ್ ವುಡ್ ನಟರ ಸಾಥ್ ಯಾರ ಕಡೆ ಇರುತ್ತದೆ ಎನ್ನುವ ಪ್ರಶ್ನೆ ಮೂಡಿದೆ.

    English summary
    Lok Sabha Election 2019: Senior Kannada actress Bharathi Vishnuvardhan reaction about Sumalatha participation in Mandya.
    Wednesday, March 6, 2019, 19:27
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X