Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣಾ ಕಣಕ್ಕೆ ಸುಮಲತಾ : ಭಾರತಿ ವಿಷ್ಣುವರ್ಧನ್ ಏನಂತಾರೆ?
Recommended Video
ಸಕ್ಕರೆ ನಾಡು ಮಂಡ್ಯ ಈ ಬಾರಿಯ ಚುನಾವಣೆಯ ಕೇಂದ್ರ ಬಿಂದುವಾಗಿದೆ. ರಾಜಕೀಯ ದೃಷ್ಟಿಯಿಂದ ಮಾತ್ರವಲ್ಲದೆ ಸಿನಿಮಾರಂಗ ಕೂಡ ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಮೇಲೆ ಗಮನ ಇಟ್ಟಿದೆ. ಅದಕ್ಕೆ ಕಾರಣ ಮಂಡ್ಯ ಕ್ಷೇತ್ರದ ಸ್ಪರ್ಧಿಗಳು.
ನಟಿ ಸುಮಲತಾ ಅಂಬರೀಶ್ ಹಾಗೂ ನಟ ನಿಖಿಲ್ ಕುಮಾರ್ ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಬಯಕೆ ಹೊಂದಿದ್ದಾರೆ. ಅಂದಹಾಗೆ, ಸುಮಲತಾ ಚುನಾವಣೆ ಸ್ಪರ್ಧೆಯ ಬಗ್ಗೆ ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯದಲ್ಲಿ ಸುಮಲತಾ-ನಿಖಿಲ್ ಸ್ಪರ್ಧೆ: ದರ್ಶನ್, ಸುದೀಪ್, ಯಶ್ ನಿಲುವೇನು?
''ಚುನಾವಣೆಗಳ ಬಗ್ಗೆ ನಮಗೆ ಜಾಸ್ತಿ ಆಸಕ್ತಿ ಇಲ್ಲ. ನಮ್ಮ ಯಜಮಾನರು ಆಗ ಅಂಬರೀಶ್ ಅವರ ಜೊತೆಗೆ ಇದ್ದರು. ಅದು ಬಿಟ್ಟರೆ ನಾವು ಚುನಾವಣೆಗಳಿಂದ ದೂರ.'' ಎಂದು ಭಾರತಿ ವಿಷ್ಣುವರ್ಧನ್ ಹೇಳಿಕೆ ನೀಡಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ಈ ರೀತಿ ಪ್ರತಿಕ್ರಿಯೆಯನ್ನು ಭಾರತಿ ವಿಷ್ಣುವರ್ಧನ್ ನೀಡಿದ್ದಾರೆ.
ಅಂದಹಾಗೆ, 'ಪುನೀತ್ ರಾಜ್ ಕುಮಾರ್ ನಟನೆಯ ದೊಡ್ಮನೆ ಹುಡ್ಗ' ಸಿನಿಮಾದಲ್ಲಿ ಸುಮಲತಾ ಅಂಬರೀಶ್ ಹಾಗೂ ಭಾರತಿ ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ್ದರು.
ಚುನಾವಣೆಗಾಗಿ ಹೊಸ ಫೋಟೋಶೂಟ್ ಮಾಡಿಸಿದ ಸುಮಲತಾ
ಮತ್ತೊಂದು ಕಡೆ ಸುಮಲತಾ ಹಾಗೂ ನಿಖಿಲ್ ಇಬ್ಬರೂ ಮಂಡ್ಯದಿಂದ ಸ್ಪರ್ಧೆ ಮಾಡಿದರೇ, ಸ್ಯಾಂಡಲ್ ವುಡ್ ನಟರ ಸಾಥ್ ಯಾರ ಕಡೆ ಇರುತ್ತದೆ ಎನ್ನುವ ಪ್ರಶ್ನೆ ಮೂಡಿದೆ.