Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಯೋಗೇಶ್ 'ಅಂಬರ'ಕ್ಕೆ ಏಣಿ ಹಾಕುವ ಸಮಯ
ಹಲವಾರು ಸಂಕಷ್ಟಗಳನ್ನು ಎದುರಿಸಿರುವ 'ಅಂಬರ' ಚಿತ್ರ ಕಡೆಗೂ ಕಣ್ಬಿಡುತ್ತಿದೆ. ಈ ಚಿತ್ರದ ಸಹಾಯಕ ಕಲಾ ನಿರ್ದೇಶಕ ಸದಾಶಿವಯ್ಯ ಚಿತ್ರೀಕರಣದ ವೇಳೆ ಗಂಗಾನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದರು. ಇತ್ತೀಚೆಗೆ ಈ ಚಿತ್ರದ ಸ್ಟಿಲ್ ಫೋಟೋಗ್ರಾಫರ್ ಬಸವರಾಜ್ ಕ್ಯಾನ್ಸರ್ ಗೆ ಬಲಿಯಾಗಿದ್ದರು.
ಇಷ್ಟೆಲ್ಲಾ ದುರಂತಗಳನ್ನು ಅನುಭವಿಸಿದ ಚಿತ್ರ ಈಗ ಬಿಡುಗಡೆಯಾಗುತ್ತಿದೆ. ಇದೇ ವಾರ (ನ.15) ಲೂಸ್ ಮಾದ ಯೋಗೇಶ್ ಹಾಗೂ ಭಾಮಾ ಮುಖ್ಯಭೂಮಿಕೆಯಲ್ಲಿರುವ ಅಂಬರ ಚಿತ್ರ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಯೋಗಿ ಕಾಲೇಜು ವಿದ್ಯಾರ್ಥಿ ಕಮ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿ ಕಾಣಿಸುತ್ತಿದ್ದಾರೆ.
ಸಾಧುಕೋಕಿಲಾ, ತಿಲಕ್, ವಿಶ್ವ, ಬ್ಯಾಂಕ್ ಜನಾರ್ದನ್, ರಾಮಕೃಷ್ಣ, ಜೈಜಗದೀಶ್, ಪದ್ಮಾವಾಸಂತಿ, ಹರೀಶ್ ರಾಜ್, ವಿನಾಯಕ ಜೋಶಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸೇನ್ ಪ್ರಕಾಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ 'ಅಂಬರ'ಕ್ಕೆ ನಾಗರಾಜ್ ಕೋಟೆ ಸಂಭಾಷಣೆ ಬರೆದಿದ್ದಾರೆ. ಅಭಿಮಾನ್ ರಾಯ್ ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ, ರವಿಕುಮಾರ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ, ಯೋಗರಾಜ್ ಭರಣಿ ಸಹ ನಿರ್ದೇಶನ, ಅನಿಲ್ ಕುಮಾರ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರಕ್ಕೆ ರಾಜು ಸಹ ನಿರ್ಮಾಪಕರಾಗಿದ್ದಾರೆ. (ಒನ್ಇಂಡಿಯಾ ಕನ್ನಡ)