Don't Miss!
- Finance
Jio, Airtel 5G: ಕಳೆದ 4 ತಿಂಗಳಲ್ಲಿ ಎಷ್ಟು ಗ್ರಾಹಕರನ್ನು ಆಕರ್ಷಿಸಿವೆ ಟೆಲಿಕಾಂ ಕಂಪನಿಗಳು? ಇಲ್ಲಿದೆ ಮಾಹಿತಿ
- News
Jio, Airtel 5G: ಕೇವಲ 4 ತಿಂಗಳಲ್ಲಿ ಎಷ್ಟು ಕೋಟಿ ಗ್ರಾಹಕರು ಗೊತ್ತೇ? ದಾಖಲೆ ಅಂಕಿಅಂಶ- ಮಾಹಿತಿ ಇಲ್ಲಿದೆ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Automobiles
ಭಾರತದಲ್ಲಿ ದಾಖಲೆ ಮಟ್ಟದ ಬುಕ್ಕಿಂಗ್ ಪಡೆದುಕೊಳ್ಳುತ್ತಿವೆ ಮಾರುತಿ ಜಿಮ್ನಿ, ಫ್ರಾಂಕ್ಸ್
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಾಂಗ್ರೆಸ್ ರೋಡ್ ಶೋನಲ್ಲಿ ಯಡಿಯೂರಪ್ಪ ವಿರುದ್ಧ ಗುಡುಗಿದ ನಟ ಯೋಗೇಶ್
Recommended Video

ಚುನಾವಣೆ ಕಣ ರಂಗೇರುತ್ತಿದ್ದಂತೆ ಸಿನಿತಾರೆಯರು ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಇತ್ತೀಚಿಗಷ್ಟೆ ನಟ ಲೂಸ್ ಮಾದ ಯೋಗೇಶ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದು, ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ರಮೇಶ್ ಅವರ ಜೊತೆ ಪರಪ್ಪನ ಅಗ್ರಹಾರದ ರೋಡ್ ಶೋನಲ್ಲಿ ಭಾಗವಹಿಸಿದ್ದ ಲೂಸ್ ಮಾದ, ''ಕಾಂಗ್ರೆಸ್ ಗೆ ನಿಮ್ಮ ಮತ ನೀಡಿ, ಕಾಂಗ್ರೆಸ್ ಸರ್ಕಾರವನ್ನ ಮತ್ತೆ ಅಧಿಕಾರಕ್ಕೆ ತನ್ನಿ, ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ರಮೇಶ್ ಅವರನ್ನ ಗೆಲ್ಲಿಸಿ'' ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಬಿಜೆಪಿಯವರ ಬಗ್ಗೆ ಟೀಕೆ ಮಾಡಿದ ಯೋಗೇಶ್ ''ಬಿಜೆಪಿ ಸರ್ಕಾರದವರು ಯಾವತ್ತೂ ಅಚ್ಛೇ ದಿನ್ ಅಚ್ಛೇ ದಿನ್ ಅಂತ ಹೇಳ್ತಾನೆ ಇದ್ದಾರೆ. ಅಚ್ಛೇ ದಿನ್ ಯಾರಿಗೂ ಬಂದಿಲ್ಲ. ಅದು ಏನು ಅನ್ನೋದು ಅರ್ಥನೂ ಆಗಿಲ್ಲ ನಮಗೆ. ಎಲ್ಲರೂ ಕಾಂಗ್ರೆಸ್ ಗೆ ಸಪೋರ್ಟ್ ಮಾಡಿ. ನಾನು ಇರೋವರೆಗೂ ಕಾಂಗ್ರೆಸ್ ಗೇ ಸಪೋರ್ಟ್ ಮಾಡೋದು. ನೀವೂ ಕೂಡ ಕಾಂಗ್ರೆಸ್ ಗೆ ಬೆಂಬಲ ಕೊಡಿ'' ಎಂದು ಮನವಿ ಮಾಡಿದ್ದಾರೆ.
ಲೂಸ್
ಮಾದ
ಯೋಗಿ
ಸ್ಟೈಲ್:
ಈ
ಸಲಾ
ಕಪ್
ನಮ್ದೆ
ಇನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಲೂಸ್ ಮಾದ ''ಜೈಲಿನಲ್ಲಿದ್ದವರನ್ನು ಇಂದು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರೊಬ್ಬರು ಮುಖ್ಯಮಂತ್ರಿ ಅಭ್ಯರ್ಥಿಯಂತೆ. ಕಳ್ಳರಿಗೆಲ್ಲ ನೀವು ಮತ ಹಾಕಬೇಡಿ'' ಎಂದು ಟೀಕಿಸಿದರು.
''ಬಿಜೆಪಿಯವರು ಯಾವ ಕೆಲಸನೂ ಮಾಡಿಕೊಟ್ಟಿಲ್ಲ. ನಿಮ್ಮಲ್ಲರನ್ನೂ ಮೆಚ್ಚಿಸಬೇಕು ಅಂತ ನಾನು ಇದನ್ನು ಹೇಳುತ್ತಿಲ್ಲ. ನನ್ನ ಸ್ವಂತ ಅನುಭವ ಇದು. ಹೀಗಾಗಿ ನಾನು ನೋಡಿರೋ ವಿಚಾರವನ್ನು ನಿಮಗೆ ಹೇಳಬೇಕು. ಅವರು ಯಾವ ಕೆಲಸನೂ ಮಾಡಲ್ಲ'' ಎಂದು ಕ್ಷೇತ್ರ ಜನರಲ್ಲಿ ಕೇಳಿಕೊಂಡರು. ಈ ವೇಳೆ ರೋಡ್ ಶೋನಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಅಭ್ಯರ್ಥಿ ಆರ್.ಕೆ.ರಮೇಶ್ ಇದ್ದರು.