Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಗಸ್ಟ್ 10 ರಂದು 'ಲೌಡ್ ಸ್ಪೀಕರ್' ಆನ್ ಆಗುತ್ತೆ
ಈ ಹಿಂದೆ 'ಮಳೆ' ಹಾಗೂ 'ಧೈರ್ಯಂ' ಸಿನಿಮಾ ಮಾಡಿದ್ದ ನಿರ್ದೇಶಕ ಶಿವ ತೇಜಸ್ ಈಗ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಅವರ ನಿರ್ದೇಶನದ ಹೊಸ ಸಿನಿಮಾ 'ಲೌಡ್ ಸ್ಪೀಕರ್' ಆಗಸ್ಟ್ 10 ರಂದು ಬಿಡುಗಡೆಯಾಗಲಿದೆ.
'ಲೌಡ್ ಸ್ಪೀಕರ್' ಇಂದಿನ ದಿನನಿತ್ಯದ ಜೀವನಕ್ಕೆ ಹತ್ತಿರದ ಸಿನಿಮಾವಾಗಿದೆ. ಹೇಗೆ ಇಂದು ಎಲ್ಲರೂ ಮೊಬೈಲ್ ಗೆ ಅಂಟಿಕೊಂಡಿದ್ದಾರೆ, ಇಂದು ಸಂಬಂಧಗಳಿಗಿಂತ ಮೊಬೈಲ್ ಜಾಸ್ತಿ ಆಗಿದೆ, 'ನಾವು ಮೊಬೈಲ್ ಅನ್ನು ಉಪಯೋಗಿಸುತ್ತಿಲ್ಲ, ಮೊಬೈಲೇ ನಮ್ಮನ್ನು ಉಪಯೋಗಿಸುತ್ತಿದೆ' ಎಂಬ ವಿಷಯಗಳನ್ನು ಇಟ್ಟುಕೊಂಡು ಈ ಚಿತ್ರವನ್ನು ಮಾಡಲಾಗಿದೆ.
'ಸೀತಾರಾಮ ಕಲ್ಯಾಣೋತ್ಸವಕ್ಕೆ ಸಿದ್ಧವಾಯ್ತು ರಾಮನಗರ
ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ರಂಗಾಯಣ ರಘು ಹಾಗೂ ದತ್ತಣ್ಣ ಕಾಣಿಸಿಕೊಂಡಿದ್ದಾರೆ. ಲೀಡ್ ರೋಲ್ ನಲ್ಲಿ ಸುಮಂತ್ ಭಟ್, ಕಾರ್ತಿಕ್ ರಾವ್, ನೀನಾಸಂ ಭಾಸ್ಕರ್, ಕಾವ್ಯಾ ಶಾ, ಅನುಷಾ, ದಿಶಾ ನಟಿಸಿದ್ದಾರೆ. ಚಿತ್ರದ ಪ್ರತಿ ಪಾತ್ರಗಳು ಮುಖ್ಯವಾಗಿದ್ದು, ಇಲ್ಲಿ ಕಥೆಯೇ ಹೀರೋ ಎನ್ನುತ್ತಾರೆ ನಿರ್ದೇಶಕರು.
ಹಂಸಲೇಖ ಅವರ ಶಿಷ್ಯ ಹರ್ಷವರ್ಧನ್ ಸಿನಿಮಾಗೆ ಸಂಗೀತ ನೀಡಿದ್ದಾರೆ, ಡಾ.ಕೆ.ಆರ್ ರಾಜು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಶೇಷ ಅಂದರೆ, ಆಗಸ್ಟ್ 10 ರಂದೇ ಸಿನಿಮಾ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಸಹ ತೆರೆಗೆ ಬರಲಿದೆ.