Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್ 'ಆರೆಂಜ್' ಚಿತ್ರಕ್ಕಾಗಿ ಮತ್ತೆ ಒಂದಾದ ಯಶಸ್ವಿ ಜೋಡಿ
ಗಣೇಶ್ ಜೊತೆ 'ಜೂಮ್' ಚಿತ್ರ ಮಾಡಿದ್ದ ಪ್ರಶಾಂತ್ ರಾಜ್ ಈಗ ಅವರೊಂದಿಗೆ 'ಆರೆಂಜ್' ಚಿತ್ರ ಮಾಡಲು ಮುಂದಾಗಿದ್ದಾರೆ. ಅಲ್ಲದೇ ಗಣೇಶ್ ರವರ ಹುಟ್ಟುಹಬ್ಬ ದಿನದಂದು ಸಿನಿಮಾ ಟೈಟಲ್ ಲಾಂಚ್ ಮಾಡಲು ಅದ್ಧೂರಿ ತಯಾರಿ ನಡೆಸಿದ್ದಾರೆ. ಇದರ ಹಿಂದೆಯೇ ಈಗ ಇನ್ನೊಂದು ಹೊಸ ವಿಷಯ ಚಿತ್ರದ ಬಗ್ಗೆ ಕೇಳಿಬಂದಿದೆ.
ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ 'ಆರೆಂಜ್' ಗಿಫ್ಟ್
ಅದೇನಂದ್ರೆ 'ಆರೆಂಜ್' ಚಿತ್ರಕ್ಕಾಗಿ ಈಗ ಯಶಸ್ವಿ ಜೋಡಿ ಮತ್ತೆ ಒಂದಾಗುತ್ತಿದೆಯಂತೆ. ಈಗಾಗಲೇ ತಿಳಿದಿರುವಂತೆ ಈ ಹಿಂದೆ 'ಜೂಮ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಪ್ರಶಾಂತ್ ರಾಜ್ ಮತ್ತೆ ಗಣೇಶ್ ರೊಂದಿಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಇವರ ಜೊತೆಗೆ ಜೋಶ್ವ ಶ್ರೀಧರ್ ರವರು ಕೈಜೋಡಿಸುತ್ತಿದ್ದು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂಬುದು ಮೂಲಗಳಿಂದ ತಿಳಿದಿದೆ.
ಅಂದಹಾಗೆ ಜೋಶ್ವ ಶ್ರೀಧರ್ ರವರು ಈ ಹಿಂದೆ ಪ್ರಶಾಂತ್ ರಾಜ್ ನಿರ್ದೇಶನದ 'ಲವ್ ಗುರು' ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು. ಹಾಡುಗಳು ಸಹ ಸೂಪರ್ ಹಿಟ್ ಆಗಿದ್ದವು. ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಬಂದಿತ್ತು. ಯಶಸ್ವಿ ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿರುವ ಪ್ರಶಾಂತ್ ರಾಜ್, ಗಣೇಶ್ ಮತ್ತು ಜೋಶ್ವ ಶ್ರೀಧರ್ ಮತ್ತೆ 'ಆರೆಂಜ್' ಚಿತ್ರಕ್ಕಾಗಿ ಒಂದಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ಬಗ್ಗೆ ಕುತೂಹಲ ಈಗಿನಿಂದಲೇ ಹೆಚ್ಚಾಗಿದೆ.
ಸದ್ಯದಲ್ಲಿ ಗಣೇಶ್ ರವರು ಸಿಂಪಲ್ ಸುನಿಯ 'ಚಮಕ್' ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ಮುಗಿದ ನಂತರ 'ಆರೆಂಜ್' ಚಿತ್ರದಲ್ಲಿ ಗಣೇಶ್ ಅಭಿನಯಿಸಲಿದ್ದಾರೆ. 'ಆರೆಂಜ್' ಚಿತ್ರಕ್ಕೆ ಸಂಗೀತ ನಿರ್ದೇಶಕ ಮತ್ತು ನಟ ಮಾತ್ರ ಅಂತಿಮವಾಗಿದ್ದು, ಉಳಿದ ತಾರಾಬಳಗದ ಆಯ್ಕೆ ಇನ್ನು ಆಗಿಲ್ಲ ಎಂಬುದು ತಿಳಿದಿದೆ.