'ಇಕ್ಕಟ್'ನಲ್ಲಿ ಸಿಲುಕಿದವರ ಬೆಂಬಲಕ್ಕೆ ನಿಂತ ಲೂಸಿಯ ಪವನ್ ಕುಮಾರ್
ಸ್ಟುಡಿಯೋಸ್ ನಿಂದ- ಸ್ಟುಡಿಯೋಸ್ನಿಂದ
ಲೂಸಿಯ ಖ್ಯಾತಿಯ ಪವನ್ ಕುಮಾರ್ ಈಗ ಇಕ್ಕಟ್ನಲ್ಲಿ ಸಿಲುಕಿದವರ ಬೆಂಬಲಕ್ಕೆ ನಿಂತಿದ್ದಾರೆ. ಅಷ್ಟಕ್ಕು ಇಕ್ಕಟ್ ನಲ್ಲಿ ಸಿಲುಕಿದ್ದು ಯಾರು? ಏನಿದು ಅಂತ ಯೋಚಿಸುತ್ತಿದ್ದೀರಾ. ಚಂದನವನದಲ್ಲಿ ಇಕ್ಕಟ್ ಎನ್ನುವ ಹೊಸ ಸಿನಿಮಾ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಹೊಸಬರ ಹೊಸ ಸಿನಿಮಾಗೆ ಲೂಸಿಯ ಪವನ್ ಕುಮಾರ್ ಸಾಥ್ ನೀಡಿದ್ದಾರೆ.
ಇಕ್ಕಟ್ ಸಿನಿಮಾ ನೋಡಿ ಇಂಪ್ರೆಸ್ ಆದ ಪವನ್ ಕುಮಾರ್ ತನ್ನ ಪವನ್ ಸ್ಟುಡಿಯೋಸ್ನಿಂದ ಸಿನಿಮಾವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಅಂದಹಾಗೆ ಇಕ್ಕಟ್ ಇಶಮ್ ಮತ್ತು ಹಸೀನ್ ಖಾನ್ ನಿರ್ದೇಶನದಲ್ಲಿ ಮೂಡಿಬಂದ ಸಿನಿಮಾ.
ರಾಜ್ ಬಿ ಶೆಟ್ಟಿ ಅವರ ಒಂದು ಮೊಟ್ಟೆಯ ಕಥೆ ಸಿನಿಮಾ ಬಳಿಕ ಪವನ್ ಇಕ್ಕಟ್ ಸಿನಿಮಾವನ್ನು ರಿಲೀಸ್ ಮಾಡಲು ಮುಂದಾಗಿದ್ದಾರೆ. ಇಕ್ಕಟ್ ಪೋಸ್ಟರ್ ಮೂಲಕವೇ ಎಲ್ಲರ ಗಮನ ಸೆಳೆಯುತ್ತಿದೆ. ಲೈಟ್ ಹಾರ್ಟ್ ಕಾಮಿಡಿ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ವಿಶೇಷ ಎಂದರೆ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಭೂಮಿ ಶೆಟ್ಟಿ ನಟನೆಯ ಮೊದಲನೆ ಸಿನಿಮಾ ಇದಾಗಿದೆ.

ಈ ಬಗ್ಗೆ ನಿರ್ದೇಶಕ ಪವನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇಕ್ಕಟ್ ಸಿನಿಮಾವನ್ನು ಬಿಡುಗಡೆ ಮಾಡುತ್ತಿರುವುದು ಸಂತೋಷವಾಗುತ್ತಿದೆ. ಇದು ನಿಜವಾದ ನಗುವಿನ ಸಿನಿಮಾ. ಶೀಘ್ರದಲ್ಲೇ ಸಿನಿಮಾ ಟ್ರೈಲರ್ ಬಿಡುಗಡೆ ಮಾಡುತ್ತೇವೆ. ನೀವೆಲ್ಲರೂ ಈ ಚಿತ್ರಕ್ಕೆ ಪ್ರೀತಿ ಮತ್ತು ಗಮನ ನೀಡುತ್ತೀರಿ ಎಂದು ಭಾವಿಸುತ್ತೇನೆ' ಎಂದು ಹೇಳಿದ್ದಾರೆ.
ಇಕ್ಕಟ್ ಈಗ ಸೆನ್ಸಾರ್ ಅಂಗಳಕ್ಕೆ ಹೋಗಲು ಸಜ್ಜಾಗಿದೆ. ಸೆನ್ಸಾರ್ ಬಳಿಕ ಸಿನಿಮಾ ಬಿಡುಗಡೆ ದಿನಾಂಕ ಫೈನಲ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಸದ್ಯ ಸಿನಿಮಾತಂಡ ಅಂದುಕೊಂಡ ಪ್ರಕಾರ ಮೇ ತಿಂಗಳಲ್ಲಿ ಚಿತ್ರಮಂದಿರಕ್ಕೆ ಕರೆತರುವ ಪ್ಲಾನ್ ಮಾಡಿದೆ. ಪವನ್ ಸಾಥ್ ನೀಡಿರುವ ಹೊಸಬರ ಇಕ್ಕಟ್ ಹೇಗಿದೆ ಎಂದು ನೋಡಲು ಇನ್ನು ಸ್ವಲ್ಪ ಸಮಯ ಕಾಯಬೇಕು.


Click it and Unblock the Notifications











