Don't Miss!
- News ಎನ್ಡಿಎ ಸೇರಿದ ಪ್ರಫುಲ್ ಪಟೇಲ್ ಮೇಲಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಿಬಿಐ ಎಳ್ಳುನೀರು!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಇಕ್ಕಟ್'ನಲ್ಲಿ ಸಿಲುಕಿದವರ ಬೆಂಬಲಕ್ಕೆ ನಿಂತ ಲೂಸಿಯ ಪವನ್ ಕುಮಾರ್
ಸ್ಟುಡಿಯೋಸ್ ನಿಂದ- ಸ್ಟುಡಿಯೋಸ್ನಿಂದ
ಲೂಸಿಯ ಖ್ಯಾತಿಯ ಪವನ್ ಕುಮಾರ್ ಈಗ ಇಕ್ಕಟ್ನಲ್ಲಿ ಸಿಲುಕಿದವರ ಬೆಂಬಲಕ್ಕೆ ನಿಂತಿದ್ದಾರೆ. ಅಷ್ಟಕ್ಕು ಇಕ್ಕಟ್ ನಲ್ಲಿ ಸಿಲುಕಿದ್ದು ಯಾರು? ಏನಿದು ಅಂತ ಯೋಚಿಸುತ್ತಿದ್ದೀರಾ. ಚಂದನವನದಲ್ಲಿ ಇಕ್ಕಟ್ ಎನ್ನುವ ಹೊಸ ಸಿನಿಮಾ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಹೊಸಬರ ಹೊಸ ಸಿನಿಮಾಗೆ ಲೂಸಿಯ ಪವನ್ ಕುಮಾರ್ ಸಾಥ್ ನೀಡಿದ್ದಾರೆ.
ಇಕ್ಕಟ್ ಸಿನಿಮಾ ನೋಡಿ ಇಂಪ್ರೆಸ್ ಆದ ಪವನ್ ಕುಮಾರ್ ತನ್ನ ಪವನ್ ಸ್ಟುಡಿಯೋಸ್ನಿಂದ ಸಿನಿಮಾವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಅಂದಹಾಗೆ ಇಕ್ಕಟ್ ಇಶಮ್ ಮತ್ತು ಹಸೀನ್ ಖಾನ್ ನಿರ್ದೇಶನದಲ್ಲಿ ಮೂಡಿಬಂದ ಸಿನಿಮಾ.
'ಲೂಸಿಯಾ' ಪವನ್ ಕುಮಾರ್ ವೆಬ್ ಸರಣಿಯಲ್ಲಿ ಅಮಲಾ ಪೌಲ್
ರಾಜ್ ಬಿ ಶೆಟ್ಟಿ ಅವರ ಒಂದು ಮೊಟ್ಟೆಯ ಕಥೆ ಸಿನಿಮಾ ಬಳಿಕ ಪವನ್ ಇಕ್ಕಟ್ ಸಿನಿಮಾವನ್ನು ರಿಲೀಸ್ ಮಾಡಲು ಮುಂದಾಗಿದ್ದಾರೆ. ಇಕ್ಕಟ್ ಪೋಸ್ಟರ್ ಮೂಲಕವೇ ಎಲ್ಲರ ಗಮನ ಸೆಳೆಯುತ್ತಿದೆ. ಲೈಟ್ ಹಾರ್ಟ್ ಕಾಮಿಡಿ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ವಿಶೇಷ ಎಂದರೆ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಭೂಮಿ ಶೆಟ್ಟಿ ನಟನೆಯ ಮೊದಲನೆ ಸಿನಿಮಾ ಇದಾಗಿದೆ.
ಈ ಬಗ್ಗೆ ನಿರ್ದೇಶಕ ಪವನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇಕ್ಕಟ್ ಸಿನಿಮಾವನ್ನು ಬಿಡುಗಡೆ ಮಾಡುತ್ತಿರುವುದು ಸಂತೋಷವಾಗುತ್ತಿದೆ. ಇದು ನಿಜವಾದ ನಗುವಿನ ಸಿನಿಮಾ. ಶೀಘ್ರದಲ್ಲೇ ಸಿನಿಮಾ ಟ್ರೈಲರ್ ಬಿಡುಗಡೆ ಮಾಡುತ್ತೇವೆ. ನೀವೆಲ್ಲರೂ ಈ ಚಿತ್ರಕ್ಕೆ ಪ್ರೀತಿ ಮತ್ತು ಗಮನ ನೀಡುತ್ತೀರಿ ಎಂದು ಭಾವಿಸುತ್ತೇನೆ' ಎಂದು ಹೇಳಿದ್ದಾರೆ.
Recommended Video
ಇಕ್ಕಟ್ ಈಗ ಸೆನ್ಸಾರ್ ಅಂಗಳಕ್ಕೆ ಹೋಗಲು ಸಜ್ಜಾಗಿದೆ. ಸೆನ್ಸಾರ್ ಬಳಿಕ ಸಿನಿಮಾ ಬಿಡುಗಡೆ ದಿನಾಂಕ ಫೈನಲ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಸದ್ಯ ಸಿನಿಮಾತಂಡ ಅಂದುಕೊಂಡ ಪ್ರಕಾರ ಮೇ ತಿಂಗಳಲ್ಲಿ ಚಿತ್ರಮಂದಿರಕ್ಕೆ ಕರೆತರುವ ಪ್ಲಾನ್ ಮಾಡಿದೆ. ಪವನ್ ಸಾಥ್ ನೀಡಿರುವ ಹೊಸಬರ ಇಕ್ಕಟ್ ಹೇಗಿದೆ ಎಂದು ನೋಡಲು ಇನ್ನು ಸ್ವಲ್ಪ ಸಮಯ ಕಾಯಬೇಕು.