twitter
    For Quick Alerts
    ALLOW NOTIFICATIONS  
    For Daily Alerts

    ನಟ ಜಗ್ಗೇಶ್ ಗೆ ಆಕ್ಷನ್ ಕಟ್ ಹೇಳಲು ಸಜ್ಜಾದ ಕವಿರಾಜ್

    By Naveen
    |

    Recommended Video

    ಜಗ್ಗೇಶ್ ತಮ್ಮ ಮುಂದಿನ ಸಿನಿಮಾದಲ್ಲಿ ಯಾವ ರೋಲ್ ನಲ್ಲಿ ಬರ್ತಾರೆ ಗೊತ್ತಾ ? | Filmibeat Kannada

    ಗೀತರಚನೆಕಾರ ಕವಿರಾಜ್ ಸಾವಿರಾರು ಹಿಟ್ ಹಾಡುಗಳನ್ನು ಬರೆದಿದ್ದಾರೆ. ಅದಕ್ಕೂ ಒಂದು ಹೆಚ್ಚು ಮುಂದೆ ಹೋಗಿ ಈ ಹಿಂದೆಯೇ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದರು. ತೂಗುದೀಪ ಪ್ರೊಡಕ್ಷನ್ಸ್ ನಲ್ಲಿ ಬಂದ 'ಮದುವೆಯ ಮಮತೆಯ ಕರೆಯೋಲೆ' ಚಿತ್ರವನ್ನು ಕವಿರಾಜ್ ನಿರ್ದೇಶನ ಮಾಡಿದ್ದರು. ಆದರೆ ಈ ಸಿನಿಮಾದ ನಂತರ ಮತ್ತೆ ಕವಿಗಳು ಡೈರೆಕ್ಟರ್ ಪಟ್ಟವನ್ನು ಅಲಂಕರಿಸಿದ್ದಾರೆ.

    ಕವಿರಾಜ್ ಈ ಬಾರಿ ನವರಸ ನಾಯಕ ಜಗ್ಗೇಶ್ ಅವರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ. ವಿಶೇಷ ಅಂದರೆ ಕವಿರಾಜ್ ಅವರ ಹೊಸ ಸಿನಿಮಾದಲ್ಲಿ ಜಗ್ಗೇಶ್ ಎನ್ ಕೌಂಟರ್ ಸ್ಪೆಷಲಿಸ್ಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. '8MM' ಸಿನಿಮಾದಲ್ಲಿಯೂ ಜಗ್ಗೇಶ್ ಗನ್ ಹಿಡಿದಿದ್ದು, ಕವಿರಾಜ್ ಚಿತ್ರದಲ್ಲಿಯೂ ಅದು ಮುಂದುವರೆಯಲಿದೆ. ಈ ಮೂಲಕ ಮತ್ತೊಂದು ಖಡಕ್ ಪಾತ್ರದಲ್ಲಿ ಜಗ್ಗೇಶ್ ಕಾಣಿಸಿಕೊಳ್ಳುತ್ತಿದ್ದಾರೆ. ಕವಿರಾಜ್ ಅವರ ಸಿನಿಮಾದ ಕಥೆ ಮತ್ತು ಪಾತ್ರ ಜಗ್ಗೇಶ್ ಅವರಿಗೆ ತುಂಬ ಇಷ್ಟ ಆಗಿದ್ದು, ಚಿತ್ರವನ್ನು ಒಪ್ಪಿಕೊಂಡಿದ್ದಾರಂತೆ.

    ''ದರ್ಶನ್ ಕನ್ನಡದ ರಜನಿಕಾಂತ್'' ಎಂದ ಸ್ಟಾರ್ ನಟ''ದರ್ಶನ್ ಕನ್ನಡದ ರಜನಿಕಾಂತ್'' ಎಂದ ಸ್ಟಾರ್ ನಟ

    Lyricist Kaviraj will be directing actor Jaggesh for his next movie

    ಅಂದಹಾಗೆ, ಕವಿರಾಜ್ ಮತ್ತು ಜಗ್ಗೇಶ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಸಿನಿಮಾಗೆ ಗುರುಕಿರಣ್ ಸಂಗೀತ ನೀಡಲಿದ್ದಾರೆ. ಗುರುಕಿರಣ್ ಸಂಗೀತದ 'ಕರಿಯ' ಚಿತ್ರದ ಮೂಲಕ ಕವಿರಾಜ್ ಸಿನಿಮಾ ಕೆರಿಯರ್ ಶುರು ಆಗಿದ್ದು, ಈಗ ಕವಿರಾಜ್ ನಿರ್ದೇಶಕದ ಚಿತ್ರಕ್ಕೆ ಗುರು ಸಂಗೀತ ನೀಡುತ್ತಿದ್ದಾರೆ. ಏಪ್ರಿಲ್ ನಿಂದ ಈ ಹೊಸ ಸಿನಿಮಾ ಶುರು ಆಗಲಿದೆ. ಕೃಷ್ಣ ಕುಮಾರ್ ಚಿತ್ರಕ್ಕೆ ಕ್ಯಾಮರಾ ಹಿಡಿಯಲಿದ್ದಾರೆ.

    'ನಟ ಸಾರ್ವಭೌಮ' ಪುನೀತ್ ಗೆ ಶುಭಕೋರಿದ ಜಗ್ಗೇಶ್'ನಟ ಸಾರ್ವಭೌಮ' ಪುನೀತ್ ಗೆ ಶುಭಕೋರಿದ ಜಗ್ಗೇಶ್

    English summary
    Lyricist Kaviraj will be directing actor Jaggesh for his next movie.
    Tuesday, March 20, 2018, 20:11
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X