Don't Miss!
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೀತರಚನೆಕಾರ, ನಿರ್ದೇಶಕ ಕವಿರಾಜ್ ತಂದೆ ನಿಧನ
ಕನ್ನಡ ಚಿತ್ರರಂಗದ ಗೀತರಚನೆಕಾರ, ನಿರ್ದೇಶಕ ಕವಿರಾಜ್ ತಂದೆ ನಿಧನ ಹೊಂದಿದ್ದಾರೆ. ಕವಿರಾಜ್ ತಂದೆ ಹರಿಯಪ್ಪ ನಾಯ್ಕ (65) ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಹರಿಯಪ್ಪ ನಾಯ್ಕ (65) ಹಲವು ತಿಂಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲ ನೀಡದೆ ಇಹಲೋಕ ತ್ಯಜಿಸಿದ್ದಾರೆ. ಇವರ ಅಂತ್ಯ ಸಂಸ್ಕಾರ ಇಂದು (ಮಂಗಳವಾರ) ಮಧ್ಯಾಹ್ನ 12ಕ್ಕೆ ಮಂಡಗದ್ದೆ ಬಳಿ ಇರುವತ್ತಿಯಲ್ಲಿ ನಡೆಯಲಿದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಹರಿಯಪ್ಪ ನಾಯ್ಕ ಸಮಾಜವಾದಿ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ಸಿನಿಮಾ ಸಾಹಿತಿ ಕ ಬಂಗಾರಪ್ಪ ಅವರ ಶಿಷ್ಯರಾಗಿದ್ದರು. ಹರಿಯಪ್ಪ ನಾಯ್ಕ ಪತ್ನಿ, ಪುತ್ರ ಕವಿರಾಜ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Recommended Video
ಕವಿರಾಜ್ 'ಕರಿಯ' ಸಿನಿಮಾ ಮೂಲಕ ಗೀತರಚನೆಕಾರನಾಗಿ ಚಿತ್ರರಂಗಕ್ಕೆ ಬಂದರು. ಗುರುಕಿರಣ್ ಅವರಿಗೆ ಮೊದಲ ಅವಕಾಶ ನೀಡಿದರು. ಆ ನಂತರ ಸಾಕಷ್ಟು ಸಿನಿಮಾಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದರು.
'ಮದುವೆಯ ಮಮತೆಯ ಕರೆಯೋಲೆ' ಕವಿರಾಜ್ ನಿರ್ದೇಶನದ ಮೊದಲ ಸಿನಿಮಾ. ಸದ್ಯಕ್ಕೆ, 'ಕನ್ನಡ ಮೇಷ್ಟ್ರು ಕಾಳಿದಾಸ' ಸಿನಿಮಾಗೆ ಕವಿರಾಜ್ ಡೈರೆಕ್ಷನ್ ಮಾಡುತ್ತಿದ್ದಾರೆ. ಜಗ್ಗೇಶ್ ಈ ಸಿನಿಮಾದ ನಾಯಕ.