Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೀತರಚನೆಕಾರ, ನಿರ್ದೇಶಕ ಕವಿರಾಜ್ ತಂದೆ ನಿಧನ
ಕನ್ನಡ ಚಿತ್ರರಂಗದ ಗೀತರಚನೆಕಾರ, ನಿರ್ದೇಶಕ ಕವಿರಾಜ್ ತಂದೆ ನಿಧನ ಹೊಂದಿದ್ದಾರೆ. ಕವಿರಾಜ್ ತಂದೆ ಹರಿಯಪ್ಪ ನಾಯ್ಕ (65) ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಹರಿಯಪ್ಪ ನಾಯ್ಕ (65) ಹಲವು ತಿಂಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲ ನೀಡದೆ ಇಹಲೋಕ ತ್ಯಜಿಸಿದ್ದಾರೆ. ಇವರ ಅಂತ್ಯ ಸಂಸ್ಕಾರ ಇಂದು (ಮಂಗಳವಾರ) ಮಧ್ಯಾಹ್ನ 12ಕ್ಕೆ ಮಂಡಗದ್ದೆ ಬಳಿ ಇರುವತ್ತಿಯಲ್ಲಿ ನಡೆಯಲಿದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಹರಿಯಪ್ಪ ನಾಯ್ಕ ಸಮಾಜವಾದಿ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ಸಿನಿಮಾ ಸಾಹಿತಿ ಕ ಬಂಗಾರಪ್ಪ ಅವರ ಶಿಷ್ಯರಾಗಿದ್ದರು. ಹರಿಯಪ್ಪ ನಾಯ್ಕ ಪತ್ನಿ, ಪುತ್ರ ಕವಿರಾಜ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Recommended Video
ಕವಿರಾಜ್ 'ಕರಿಯ' ಸಿನಿಮಾ ಮೂಲಕ ಗೀತರಚನೆಕಾರನಾಗಿ ಚಿತ್ರರಂಗಕ್ಕೆ ಬಂದರು. ಗುರುಕಿರಣ್ ಅವರಿಗೆ ಮೊದಲ ಅವಕಾಶ ನೀಡಿದರು. ಆ ನಂತರ ಸಾಕಷ್ಟು ಸಿನಿಮಾಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದರು.
'ಮದುವೆಯ ಮಮತೆಯ ಕರೆಯೋಲೆ' ಕವಿರಾಜ್ ನಿರ್ದೇಶನದ ಮೊದಲ ಸಿನಿಮಾ. ಸದ್ಯಕ್ಕೆ, 'ಕನ್ನಡ ಮೇಷ್ಟ್ರು ಕಾಳಿದಾಸ' ಸಿನಿಮಾಗೆ ಕವಿರಾಜ್ ಡೈರೆಕ್ಷನ್ ಮಾಡುತ್ತಿದ್ದಾರೆ. ಜಗ್ಗೇಶ್ ಈ ಸಿನಿಮಾದ ನಾಯಕ.