Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಮುರಳಿ 'ಮದಗಜ' ಸಿನಿಮಾದ ಟೈಟಲ್ ಬದಲಾವಣೆ
ರೋರಿಂಗ್ ಸ್ಟಾರ್ ಶ್ರೀ ಮುರಳಿ 'ಭರಾಟೆ'ಯ ನಂತರ 'ಮದಗಜ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಈ ಸಿನಿಮಾದ ಶೀರ್ಷಿಕೆ ಬದಲಾವಣೆ ಮಾಡಲಾಗಿದೆ. ಈ ವಿಷಯವನ್ನು ನಟ ಶ್ರೀಮುರಳಿ ತಿಳಿಸಿದ್ದಾರೆ.
ನಿರ್ದೇಶಕ ಎಸ್ ನಾರಾಯಣ್ ದ್ವಿತೀಯ ಪುತ್ರ ಪವನ್ ಮೊದಲ ಸಿನಿಮಾ ಮುಹೂರ್ತ ಕಾರ್ಯಕ್ರಮಕ್ಕೆ ಶ್ರೀಮುರಳಿ ಆಗಮಿಸಿದ್ದರು. ಈ ವೇಳೆ ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾತನಾಡಿದರು. 'ಮದಗಜ' ಸಿನಿಮಾ ಬೇರೊಂದು ಟೈಟಲ್ ಮೂಲಕ ಬರಲಿದೆ ಎಂದು ತಿಳಿಸಿದರು.
ಹೆಚ್ಚಾಯ್ತು ಶ್ರೀಮುರಳಿ ಸಂಭಾವನೆ, ಒಂದು ಸಿನಿಮಾಗೆ ಎಷ್ಟು ಕೋಟಿ?
''ಸಿನಿಮಾದ ಕಥೆಯಲ್ಲಿ ಸ್ವಲ್ಪ ಬದಲಾವಣೆ ಆಗಿದೆ. ಹೀಗಾಗಿ ಸಿನಿಮಾದ ಶೀರ್ಷಿಕೆ ಕೂಡ ಬದಲಾವಣೆ ಮಾಡಿದ್ದೇವೆ. ಸಿನಿಮಾದ ಕಥೆಗೆ ಟೈಟಲ್ ಸೂಕ್ತ ಆಗುತ್ತಿರಲಿಲ್ಲ. 'ಮದಗಜ' ಒಳ್ಳೆಯ ಟೈಟಲ್ ಅದಕ್ಕೆ ತೊಂದರೆ ಆಗಬಾರದು'' ಎಂದು ಶ್ರೀಮುರಳಿ ಹೇಳಿದ್ದಾರೆ.
ಸಿನಿಮಾವನ್ನು ಮಹೇಶ್ ಕುಮಾರ್ ನಿರ್ದೇಶನ ಹಾಗೂ ಉಮಾಪತಿ ನಿರ್ಮಾಣ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶ್ರೀಮುರಳಿ ಸ್ಪಷ್ಟಪಡಿಸಿದ್ದಾರೆ. ಮಹೇಶ್ ಕುಮಾರ್ ಈ ಹಿಂದೆ 'ಅಯೋಗ್ಯ' ಸಿನಿಮಾ ನಿರ್ದೇಶನ ಮಾಡಿದ್ದರು. ಉಮಾಪತಿ 'ಹೆಬ್ಬುಲಿ' ಚಿತ್ರಕ್ಕೆ ಬಂಡವಾಳ ಹಾಕಿದ್ದು, ಸದ್ಯ 'ರಾಬರ್ಟ್' ತಯಾರಿಯಲ್ಲಿ ಇದ್ದಾರೆ.
'ನಿಮ್ಮಿಂದಲೇ ನಾವು, ಈ ಕೆಲಸ ಮಾಡಬೇಡಿ': ಶ್ರೀಮುರಳಿ ಮನವಿ
ಸಿನಿಮಾದಲ್ಲಿ ಶ್ರೀಮುರಳಿ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀಮಂತನ ವ್ಯಕ್ತಿ ಪಾತ್ರವನ್ನು ಮಾಡುತ್ತಿದ್ದಾರೆ. ಸದ್ಯದಲ್ಲಿಯೇ ಸಿನಿಮಾ ಹೊಸ ಟೈಟಲ್ ಘೋಷಣೆ ಆಗಲಿದೆ.