Don't Miss!
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Automobiles ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- News ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹದೇವಪುರದಲ್ಲಿ ಮಯೂರ್ ಬಿರುಸಿನ ಪ್ರಚಾರ
ಬೆಂಗಳೂರು ಮಹದೇವಪುರ ಕ್ಷೇತ್ರದಿಂದ ಮಯೂರ್ ಕಣಕ್ಕಿಳಿಯಲಿದ್ದಾರೆ. ಈ ಸಂಬಂಧ ಅವರು ಈ ಕ್ಷೇತ್ರದಲ್ಲಿ ಸೋಮವಾರದಿಂದ (ಏ.1) ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಇದಕ್ಕೆ ಅವರ ಅಪ್ಪ ಮದನ್ ಪಟೇಲ್ ಅವರು ಸಾಥ್ ನೀಡಿದರು.
ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಈ ಸಂದರ್ಭದಲ್ಲಿ ಮಯೂರ್ ಹೇಳಿದರು. ಇದೇ ಸಂದರ್ಭದಲ್ಲಿ ಅವರು ಮಾರತ್ ಹಳ್ಳಿಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಉದ್ಘಾಟಿಸಿದರು.
ಮದನ್ ಪಟೇಲ್ ಅವರು ಟಿ.ನರಸೀಪುರದಿಂದ ಸ್ಪರ್ಧಿಸುತ್ತಿದ್ದಾರೆ. ಒಂದು ದಶಕದಿಂದ ಮದನ್ ಪಟೇಲ್ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಆರಂಭದಲ್ಲಿ ಭಾರತೀಯ ಜನತಾ ಪಕ್ಷ ಬಳಿಕ ಕರ್ನಾಟಕ ಜನತಾ ಪಕ್ಷ ಈಗ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸದಲ್ಲಿ ಅವರಿದ್ದಾರೆ.
ಸದ್ಯಕ್ಕೆ ಮಯೂರ್ ಪಟೇಲ್ ಅವರು ಹಿಂದಿ ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಯಾರಿವನು? (ಹಳೆ ಶೀರ್ಷಿಕೆ ಸತ್ಯಾನಂದ) ಹಿಂದಿ ಅವತರಣಿಕೆಯನ್ನು ಮಯೂರ್ ಅವರೇ ನಿರ್ದೇಶಿಸುತ್ತಿದ್ದಾರೆ. ಜೂನ್ ತಿಂಗಳಿಂದ ಚಿತ್ರೀಕರಣ ಶುರು. ರವಿಚೇತನ್ ಸೇರಿದಂತೆ ಹಿಂದಿಯ ಹಲವು ತಾರೆಗಳು ಚಿತ್ರದಲ್ಲಿರುತ್ತಾರೆ. (ಏಜೆನ್ಸೀಸ್)