Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಮುಂಡೇಶ್ವರಿ ದೇವಿ ಮುಂದೆ ಚೇತನ್ ಬರೆದ ಸಾಹಿತ್ಯ ಹೀಗಿದೆ
ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಮದಗಜ' ಸಿನಿಮಾದ ಸ್ಕ್ರಿಪ್ಟ್ ಪೂಜೆ ಹಾಗೂ ಲಿರಿಕ್ಸ್ ಪೂಜೆ ಇಂದು ನಡೆದಿದೆ. ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ಅಮ್ಮನ ದೇವಸ್ಥಾನದಲ್ಲಿ ಚಿತ್ರದ ಪೂಜೆ ಕಾರ್ಯಕ್ರಮ ಜರುಗಿದೆ.
ಇಂದು ಬೆಳಗ್ಗೆ 7.30ಕ್ಕೆ ಚಿತ್ರದ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ನಟ ಶ್ರೀಮುರಳಿ, ಚೇತನ್ ಕುಮಾರ್ (ಭರಾಟೆ) , ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ , ಸುಪ್ರೀತ್, ನಿರ್ದೇಶಕ ಮಹೇಶ್ ಕುಮಾರ್ ಭಾಗಿಯಾಗಿದ್ದರು.
ಸ್ಕ್ರಿಪ್ಟ್ ಪೂಜೆ ಮುಗಿಸಿದ 'ಭರಾಟೆ' ಟೀಂ
ವಿಶೇಷ ಅಂದರೆ, ತಾಯಿ ಚಾಮುಂಡೇಶ್ವರಿ ಮುಂದೆಯೇ ಚೇತನ್ ಕುಮಾರ್ ಸಿನಿಮಾದ ಹಾಡನ್ನು ಬರೆದಿದ್ದಾರೆ. ದೇವರ ಮುಂದೆ ಚೇತನ್ ಬರದ ಸಾಹಿತ್ಯ ಈ ಮುಂದಿನಂತಿದೆ.
''ಶತ್ರು ದಮನವನ್ನು ಮಾಡೋ ಸೈನ್ಯವನೇ ಇಳಿಸೋ ವೈರತ್ವ ದರ್ಪ ಹೊರೆ
ಸೂರ್ಯ ಇರೋವರೆಗೂ ಭೂಮಿ ನೆನೆಯಲಿ ಮೊಳಗಲಿ ಕೀರ್ತಿ ಜಯಿಸೊ ದೊರೆ
ಗಜಗಳ ಪಳಗಿಸೊ ನಿನ್ನಯ ಭುಜಬಲಮದವನ್ನು ಕರಗಿಸೋ ನಿನ್ನೆಯ ಮನೋಬಲ
ಛಲದಂಕ ಮಲ್ಲ ನೀನೇ ಮದಗಜ''
ಶ್ರೀಮುರಳಿಯ ಈ ಚಿತ್ರ ನೋಡಿ ದರ್ಶನ್ ಹೊಟ್ಟೆ ಉರಿದುಕೊಂಡಿದ್ರಂತೆ
'ಮದಗಜ' ಸಿನಿಮಾ ಟೈಟಲ್ ಸಾಂಗ್ ಇದಾಗಿದೆ. ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. 'ಅಯೋಗ್ಯ' ನಂತರ ಮತ್ತೆ ಅದೇ ಕಾಂಬಿನೇಶನ್ ನಲ್ಲಿ ಈ ಚಿತ್ರದ ಹಾಡುಗಳು ಸಿದ್ಧವಾಗಲಿವೆ.