Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಲ್ಲಿ ಸಾವನಪ್ಪಿದ 'ಮಗಳು ಜಾನಕಿ' ಖ್ಯಾತಿಯ ನಟಿ ಶೋಭಾ
Recommended Video
ಖ್ಯಾತ ಕಿರುತೆರೆ ನಟಿ ಶೋಭಾ ಎಮ್.ವಿ ನಿನ್ನೆ(ಜುಲೈ 17) ಘಟಿಸಿದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಚಿತ್ರದುರ್ಗದ ಹೊರವಲಯ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಶೋಭಾ ಸೇರಿದಂತೆ ಐವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಟ್ಟು ಎಂಟು ಜನ ಪ್ರಯಾಣಿಸುತ್ತಿದ್ದು ಇವರೆಲ್ಲಾ ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಬಾಗಲಕೋಟೆ ಜಿಲ್ಲೆಯ ಬದಾಮಿ ಬನಶಂಕರಿ ದೇವಾಲಯಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ.
ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಸೇರಿದ್ದು ಎಲ್ಲಾ ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳಕ್ಕೆ ಚಿತ್ರದುರ್ಗ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಿರುತೆರೆಯ ಖ್ಯಾತ ಧಾರಾವಾಹಿಗಳಲ್ಲಿ ಒಂದಾಗಿರುವ ಮಗಳು ಜಾನಕಿಯಲ್ಲಿ ಶೋಭಾ ಅವರು ಮಂಗಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆನಂದ್ ಬೆಳಗೂರ್ ತಾಯಿಯಾಗಿ ಅದ್ಭುತ ಅಭಿನಯ ಮಾಡುತ್ತಿದ್ದ ಮಂಗಳಕ್ಕ ಇನ್ಮುಂದೆ ನೆನಪು ಮಾತ್ರ.
ಸಹಜ ಮತ್ತು ನೈಜ ಅಭಿನಯದ ಮೂಲಕವೆ ವೀಕ್ಷಕರ ಮನಗೆದ್ದಿದ್ದ ಶೋಭಾ ಧಾರಾವಾಹಿಯ ಪಾತ್ರಧಾರಿಯಂತೆ, ನಿಜ ಜೀವನದಲ್ಲೂ ಅತ್ಯಂತ ಸಜ್ಜನ ಮತ್ತು ಸೌಮ್ಯ ಸ್ವಭಾವದವರಾಗಿದ್ದರು. ಮಗಳು ಜಾನಕಿ ಧಾರಾವಾಹಿ ಸೇರಿದಂತೆ ಅನೇಕ ಚಲನಚಿತ್ರಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ವೀಕ್ಷಕರಿಗೆ ಮನರಂಜನೆ ನೀಡಿದ್ದಾರೆ ಶೋಭಾ.
ಶಾಲೆಯ ಸಂಚಿಕೆ ನೋಡಿ ಬೇಸರ ವ್ಯಕ್ತ ಪಡಿಸಿದ 'ಮಗಳು ಜಾನಕಿ' ವೀಕ್ಷಕರು
ಶೋಭಾ ಅವರ ನಿಧನಕ್ಕೆ ಮಗಳು ಜಾನಕಿ ಧಾರಾವಾಹಿ ತಂಡ ಮತ್ತು ಅಭಿಮಾನಿ ಬಳಗ ಸಂತಾಪ ಸೂಚಿಸಿದೆ. ಶೋಭಾ ಅವರ ಅಗಲಿಗೆ ತಂಡಕ್ಕೆ ದೊಡ್ಡ ನಷ್ಟ ಎಂದು ಧಾರಾವಾಹಿ ತಂಡ ಹೇಳಿಕೊಂಡಿದೆ. ಅಲ್ಲದೆ ಈ ಧಾರಾವಾಹಿಯ ಅತೀ ದೊಡ್ಡ ಫೇಸ್ ಬುಕ್ ಗ್ರೂಪ್ ನವರು ಕೂಡ ಶುಭಾ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಮಂಗಳಕ್ಕ ಆಗಿ ಧಾರಾವಾಹಿಯಲ್ಲಿ ಎಲ್ಲರ ಅಚ್ಚುಮೆಚ್ಚಾಗಿದ್ದರು ಶೋಭಾ. ಮಗಳು ಜಾನಕಿ ಧಾರಾವಾಹಿ ನಿರ್ದೇಶಕ ಟಿ ಎನ್ ಸೀತಾರಾಮ್ ಅವರ ಸಾರಥ್ಯದಲ್ಲಿ ಮೂಡಿ ಬರುತ್ತಿದೆ. ವಿಭಿನ್ನ ಕಥಾಹಂದರದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಸೆಳೆದಿದೆ ಈ ಧಾರಾವಾಹಿ.