Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಂಗ್ರೆಸ್ ಪ್ರಚಾರಕ್ಕಾಗಿ ರಸ್ತೆಗಿಳಿದರು ಸ್ಟಾರ್ ಕಲಾವಿದರು
ಚುನಾವಣೆ ಹತ್ತಿರ ಬರುತ್ತಿದೆ. ರಾಜಕೀಯ ಪಕ್ಷಗಳು ತಮ್ಮದೇ ರೀತಿಯಲ್ಲಿ ಪ್ರಚಾರ ಕಾರ್ಯಗಳನ್ನ ಶುರು ಮಾಡುತ್ತಿವೆ. ಜನರನ್ನ ಯಾವ ರೀತಿಯಲ್ಲಿ ಆಕರ್ಷಣೆ ಮಾಡಲು ಸಾಧ್ಯ ಎನ್ನುವ ಅಂಶಗಳನ್ನ ಹುಡುಕಿ ಸಿನಿಮಾರಂಗದತ್ತ ರಾಜಕೀಯ ವ್ಯಕ್ತಿಗಳು ಮುಖ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಸ್ಟಾರ್ ಕಲಾವಿದರು ಪ್ರಚಾರಕ್ಕಾಗಿ ರಸ್ತೆಗಿಳಿಯುತ್ತಿದ್ದಾರೆ. ಇಂದಿನಿಂದ(ಜ.31) ಕಲಾವಿದರು ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಚಂದನವನದ ಕನಸಿನ ರಾಣಿ ಮಾಲಾಶ್ರೀ , ಉಮಾಶ್ರೀ ಹಾಗೂ ಹಾಸ್ಯ ಕಲಾವಿದ ಸಾಧುಕೋಕಿಲ ಸದ್ಯ ಕಾಂಗ್ರೇಸ್ ಪಕ್ಷದಿಂದ ಪ್ರಚಾರಕ್ಕೆ ಇಳಿಯುವುದು ಕನ್ಫರ್ಮ್ ಆಗಿದೆ.
ಸಿನಿಮಾ ಅಷ್ಟೇ ಅಲ್ಲ ನಿಜವಾಗಿಯೂ 'MLA' ಆಗ್ತಾರಂತೆ ಪ್ರಥಮ್
ನಟಿ ಮಾಲಾಶ್ರೀ ಅವರಿಗೆ ಕ್ಲಾಸ್ ಮತ್ತು ಮಾಸ್ ಎರಡು ರೀತಿಯ ಅಭಿಮಾನಿಗಳು ಇದ್ದಾರೆ. ಇನ್ನು ಸಾಧುಕೋಕಿಲ ತೆರೆ ಮೇಲೆ ಬಂದರೆ ಸಾಕು ಖುಷಿ ಪಡುವ ಜನರು ಸಾಕಷ್ಟಿದ್ದಾರೆ. ಅದೇ ಕಾರಣದಿಂದ ಇವರಿಬ್ಬರನ್ನ ಸ್ಟಾರ್ ಪ್ರಚಾರಕರನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.
ಡಿ ಕೆ ಶಿವಕುಮಾರ್ ಈ ಮೂರು ಕಲಾವಿದರನ್ನ ತಮ್ಮ ಪಕ್ಷದ ಪ್ರಚಾರದ ಕೆಲಸಕ್ಕಾಗಿ ಆಹ್ವಾನ ಮಾಡಿದ್ದಾರೆ. ಇವರುಗಳನ್ನ ಬಿಟ್ಟು ಇನ್ನು ಅನೇಕರು ಕಾಂಗ್ರೆಸ್ ಪಕ್ಷದ ಪರವಾಗಿ ಓಟು ಕೇಳಲು ನಿಮ್ಮ ಮನೆಯ ಬಾಗಿಲಿಗೆ ಬರಲಿದ್ದಾರೆ.