Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಟ್ರೋ ಕಾಮಗಾರಿ ಅವಘಡ: ಕಾರಿನಲ್ಲಿ ಚಲಿಸುತ್ತಿದ್ದ ನಟಿ ಅಪಾಯದಿಂದ ಪಾರು
ಮಲಯಾಳಂ ನಟಿ ಅರ್ಚನಾ ಕವಿ ದೊಡ್ಡ ಪ್ರಮಾದದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಚಲಿಸುತ್ತಿದ್ದಾಗ ಕಾರಿನ ಮೇಲೆ ಮೆಟ್ರೋ ಕಾಮಗಾರಿಯ ಅವಶೇಷಗಳು (ಸಿಮೆಂಟ್ ಅವಶೇಷ) ಬಿದ್ದು ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಆಪಾಯ ಆಗಿಲ್ಲ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ನಟಿ ಅರ್ಚನಾ ಕವಿ ಟ್ವಿಟ್ಟರ್ ನಲ್ಲಿ ಫೋಟೋಗಳನ್ನ ಶೇರ್ ಮಾಡಿದ್ದು, ಮೆಟ್ರೋ ಅಧಿಕಾರಿಗಳಿಗೆ ಮತ್ತು ಮುನ್ಸಿಪಾಲ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
'ಏರ್ ಪೋರ್ಟ್ ಗೆ ಹೋಗುವ ವೇಳೆ ಕಾರಿನ ಮೇಲೆ ಮೆಟ್ರೋಗೆ ಸಂಬಂಧಿಸಿದ ಅವಶೇಷಗಳು ಬಿದ್ದಿದೆ. ಈ ಬಗ್ಗೆ ಮೆಟ್ರೋ ಅಧಿಕಾರಿಗಳು ಗಮನ ಹರಿಸಬೇಕು. ಕಾರಿನ ಮಾಲೀಕರಿಗೆ ಪರಿಹಾರ ನೀಡಬೇಕು. ಮುಂದಿನ ದಿನದಲ್ಲಿ ಈ ರೀತಿ ಘಟನೆ ಸಂಭವಿಸಿದಂತೆ ಜಾಗೃತಿವಹಿಸಬೇಕು' ಎಂದು ಮನವಿ ಮಾಡಿದ್ದಾರೆ.
We had a narrow (providential) escape. A concrete slab fell on our moving car while we were on the way to the airport. I would request @kochimetro and @KochiPolice to look into the matter and compensate the driver. Also see to it that such things don't happen in future. pic.twitter.com/knDdqC3bwN
— Archana Kavi (@archana_kavi) June 5, 2019
ನಟಿ ಅರ್ಚನಾ ಕವಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಮೆಟ್ರೋ ಅಧಿಕಾರಿಗಳು 'ಈ ಘಟನೆಯನ್ನ ಗಂಭೀರವಾಗಿ ಪರಿಗಣಿಸುತ್ತೇವೆ. ಕಾರು ಚಾಲಕನ ಜೊತೆ ಮಾತನಾಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇವೆ. ಈ ಪ್ರಾಜೆಕ್ಟ್ ಸುರಕ್ಷಿತವಾಗಿ ನಡೆಯುವಂತೆ ಕ್ರಮ ಜರುಗಿಸುತ್ತೇವೆ' ಎಂದು ವಿವರಿಸಿದ್ದಾರೆ. ಆದರೆ ನೆಟ್ಟಿಗರು ಮಾತ್ರ ಮೆಟ್ರೋ ಸಿಬ್ಬಂದಿಯನ್ನ ಟ್ರೋಲ್ ಮಾಡ್ತಿದ್ದಾರೆ.
ಈ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಕೂಡ ಪ್ರತಿಕ್ರಿಯಿಸಿದ್ದು, 'ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ. ಕಾರು ಮಾಲೀಕರಿಗೆ ಪರಿಹಾರ ಕೊಡಿಸುವ ದೃಷ್ಠಿಯಲ್ಲಿ ಪ್ರಯತ್ನ ಮಾಡುತ್ತೇವೆ. ಭವಿಷ್ಯದಲ್ಲಿ ಇಂತಹ ಘಟನೆ ಸಂಭವಿಸದಂತೆ ನೋಡಿಕೊಳ್ಳುತ್ತೇವೆ' ಎಂದು ತಿಳಿಸಿದ್ದಾರೆ.
ಇನ್ನು ನಟಿ ಅರ್ಚನಾ ಕವಿ ಬಗ್ಗೆ ಹೇಳುವುದಾದರೇ ಹನಿ ಬಿ, ಪಟ್ಟಂ ಪೋಲೆ, ನಾಡೋಡಿಮನಂ ಹಾಗೂ ತಮಿಳಿನ ಅರವಾನ್, ಜ್ಞಾನ ಕಿರುಕ್ಕುನ್ ಅಂತಹ ಸಿನಿಮಾದಲ್ಲಿ ನಟಿಸಿದ್ದಾರೆ.