Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಅಪಹರಣ, ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್ ಗೆ 12 ತಾಸು ವಿಚಾರಣೆ
ಕನ್ನಡ ಚಿತ್ರಗಳಲ್ಲೂ ನಟಿಸಿರುವ ಮಲೆಯಾಳಂ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ ಎದುರಿಸುತ್ತಿರುವ ಮಲೆಯಾಳಂ ನಟ ದಿಲೀಪ್ ರವರನ್ನ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕನ್ನಡದಲ್ಲೂ ಅಭಿನಯಿಸಿದ್ದ ಬಹುಭಾಷಾ ನಟಿ ಅಪಹರಣ
12 ಗಂಟೆಗೂ ಹೆಚ್ಚು ತಾಸು ನಟ ದಿಲೀಪ್ ರವರನ್ನ ಪೊಲೀಸರು ವಿಚಾರಣೆ ಮಾಡಿದ್ದಾರೆ. ನಟ ದಿಲೀಪ್ ಜೊತೆ ನಾದೀರ್ ಶಾ ಹಾಗೂ ದಿಲೀಪ್ ಅವರ ಮಾಜಿ ಮ್ಯಾನೇಜರ್ ಅಪ್ಪುಣ್ಣಿ ಕೂಡ ವಿಚಾರಣೆಗೆ ಒಳಪಟ್ಟಿದ್ದಾರೆ. ಮುಂದೆ ಓದಿರಿ...
ಮಧ್ಯರಾತ್ರಿವರೆಗೂ ವಿಚಾರಣೆ
ಅಲುವಾ ಪೊಲೀಸ್ ಸ್ಟೇಷನ್ ಗೆ ನಿನ್ನೆ (ಬುಧವಾರ ಜೂನ್ 28) ಮಧ್ಯಾಹ್ನ 12.30ಕ್ಕೆ ಬಂದ ದಿಲೀಪ್, ನಾದೀರ್ ಶಾ ಹಾಗೂ ಅಪ್ಪುಣ್ಣಿ ರವರನ್ನ ಮಧ್ಯರಾತ್ರಿ ಒಂದು ಗಂಟೆವರೆಗೂ ವಿಚಾರಣೆ ನಡೆಸಿದ್ದಾರೆ ಪೊಲೀಸರು.
ಮಲಯಾಳಂ ನಟಿ ಕಿಡ್ನಾಪ್ ರೂವಾರಿ ಸುನೀಲ್: ಘಟನೆಯ ಪೂರ್ಣ ವಿವರ
ವಿಚಾರಣೆ ಬಳಿಕ ನಟ ದಿಲೀಪ್ ಮಾತು
''ನನಗೆ ನಂಬಿಕೆ ಇದೆ. ವಿಚಾರಣೆ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ. ನಾನು ತನಿಖೆಗೆ ಸಹಕರಿಸುತ್ತೇನೆ. ಸತ್ಯ ಹೊರಗೆ ಬರುತ್ತದೆ'' ಎಂದು ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ನಟ ದಿಲೀಪ್ ಮಾತನಾಡಿದರು.
ಪಲ್ಸರ್ ಸುನಿ ಬಾಯಿ ಬಿಟ್ಟಿದ್ದ
ಮಲೆಯಾಳಂ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 'ಮೆಗಾಸ್ಟಾರ್' ಹಾಗೂ ಪ್ರಖ್ಯಾತ ನಿರ್ದೇಶಕರೊಬ್ಬರು ಭಾಗಿಯಾಗಿದ್ದಾರೆ ಎಂದು ಪಲ್ಸರ್ ಸುನಿ, ಜೈಲುಪಾಲಾಗಿರುವ ಮತ್ತೊಬ್ಬ ಅಪರಾಧಿ ಜಿನ್ಸೆ ಎದುರು ಈ ಹಿಂದೆ ಒಪ್ಪಿಕೊಂಡಿದ್ದ. ಪಲ್ಸರ್ ಸುನಿ ನೀಡಿದ್ದ ಹೇಳಿಕೆ ಆಧಾರದ ಮೇಲೆ ನಟ ದಿಲೀಪ್ ರವರನ್ನ ವಿಚಾರಣೆ ಮಾಡಲಾಗಿದೆ.
ಮಲೆಯಾಳಂ ನಟಿ ಮೇಲೆ ಲೈಂಗಿಕ ದೌರ್ಜನ್ಯ: ಘಟನೆ ಹಿಂದೆ ಖ್ಯಾತನಾಮರ ಕೈವಾಡ.!
ಫೆಬ್ರವರಿ 17 ರಂದು ನಡೆದಿದ್ದ ಘಟನೆ
ಫೆಬ್ರವರಿ 17 ರಂದು ರಾತ್ರಿ 9.30 ರ ಸುಮಾರಿಗೆ, ಕೇರಳದ ಕೊಚ್ಚಿ ಇಂದ ತ್ರಿಶೂರ್ ಗೆ ತೆರಳುತ್ತಿದ್ದ ಮಲೆಯಾಳಂ ನಟಿಯನ್ನು ಐದು ಜನ ದುಷ್ಕರ್ಮಿಗಳ ತಂಡ ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ್ದರು. ಇಡೀ ಘಟನೆಯನ್ನ ಕ್ಯಾಮೆರಾದಲ್ಲಿ ಚಿತ್ರೀಕರಿಸಿಕೊಂಡು, ಕಾರಿನಲ್ಲಿಯೇ ನಟಿಯನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದರು. ತದನಂತರ ತಮಗೆ ಪರಿಚಯವಿದ್ದ ನಿರ್ಮಾಪಕರೊಬ್ಬರ ಮನೆಗೆ ತೆರಳಿದ ನಟಿ ಪೊಲೀಸರಿಗೆ ದೂರು ನೀಡಿದ್ದರು.