Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಷ್ಣುಪ್ರಿಯ' ಮೂಲಕ ಕನ್ನಡಕ್ಕೆ ಬಂದ ಪ್ರಿಯಾ ಪ್ರಕಾಶ್
ಕಣ್ಸನ್ನೆಯ ಮೂಲಕ ಖ್ಯಾತಿಗಳಿಸಿರುವ ಮಲಯಾಳಿ ಬೆಡಗಿ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರಿಯಾ ಪ್ರಕಾಶ್ ಕನ್ನಡಕ್ಕೆ ಬರ್ತಾರೆ ಎನ್ನುವ ಸುದ್ದಿ ಸುಮಾರು ವರ್ಷದಿಂದನೆ ಕೇಳಿ ಬರುತ್ತಿತ್ತು. ಆದ್ರೀಗ ಪ್ರಿಯಾ ಸ್ಯಾಂಡಲ್ ವುಡ್ ಗೆ ಬರೋದು ಪಕ್ಕಾ ಆಗಿದೆ.
ಅಂದ್ಹಾಗೆ ಪಡ್ಡೆಹುಲಿ ಖ್ಯಾತಿಯ ನಟ ಶ್ರೇಯಸ್ ಮಂಜು ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ವಿಷ್ಣುಪ್ರಿಯ ಚಿತ್ರದ ಮೂಲಕ ಪ್ರಿಯಾ ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಚಿತ್ರದಲ್ಲಿ ಪ್ರಿಯಾ ನಾಯಕಿಯಾಗಿ ಮಿಂಚುವ ಮೂಲಕ ಕನ್ನಡಾಭಿಮಾನಿಗಳನ್ನು ರಂಜಿಸಲಿದ್ದಾರೆ.
ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಪಡ್ಡೆಹುಲಿ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಕೆ ಮಂಜು ಮತ್ತು ಮಗ ಶ್ರೇಯಸ್ ಇಬ್ಬರು ವಿಷ್ಣುವರ್ಧನ್ ಅಪ್ಪಟ ಅಭಿಮಾನಿ. ಶ್ರೇಯಸ್ ಸಿನಿಮಾದಲ್ಲಿ ವಿಷ್ಣು ಛಾಯೆ ಕಾಣಿಸುತ್ತೆ. ಎರಡನೆ ಸಿನಿಮಾದಲ್ಲೂ ವಿಷ್ಣು ಹೆಸರು ಇಡುವ ಮೂಲಕ ವಿಷ್ಣುವರ್ಧನ್ ಮೇಲಿನ ಅಭಿಮಾನವನ್ನು ಮೆರೆಯುತ್ತಿದ್ದಾರೆ.
ಚಿತ್ರಕ್ಕೆ ಮಲಯಾಳಂನ ಖ್ಯಾತ ನಿರ್ದೇಶಕ ವಿ ಕೆ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನೈಜ್ಯ ಘಟನೆ ಆಧಾರಿತ ಸಿನಿಮಾ ಇದಾಗಿದ್ದು ಚಿತ್ರಕ್ಕೆ ಧಾರವಾಡ ಮೂಲಕದ ಸಿಂಧು ಶ್ರೀ ಕಥೆ ಬರೆದಿದ್ದಾರೆ. ಮುಂದಿನ ತಿಂಗಳು ಸೆಪ್ಟಂಬರ್ 9ಕ್ಕೆ ಚಿತ್ರ ಸೆಟ್ಟೇರಲಿದೆ. ಅದಕ್ಕು ಮೊದಲು ಚಿತ್ರತಂಡ ವರ್ಕ್ ಶಾಪ್ ಮಾಡಲಿದ್ದು ಪ್ರಿಯಾ ಪ್ರಕಾಶ್ ಮುಂದಿನ ತಿಂಗಳೆ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.