'ಕಾಂತಾರ' ವೀಕ್ಷಿಸುತ್ತಿದ್ದ ಪ್ರೇಕ್ಷಕನ ಮೇಲೆ ದೈವ ಆವಾಹನೆ..!

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರ 'ಕಾಂತಾರ' ನಿನ್ನೆ (ಸಪ್ಟೆಂಬರ್‌ 30) ರಂದು ತೆರೆ ಕಂಡಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಹುತೇಕ ಸಿನಿಪ್ರಿಯರು ಪ್ರೀಮಿಯರ್‌ ಶೋ ಹಾಗೂ ಫಸ್ಟ್‌ ಡೇ ಶೋಗಳನ್ನೇ ನೋಡಿದ್ದು, ಇಂದು(ಅಕ್ಟೋಬರ್‌ 1) ಕೂಡ ಚಿತ್ರ ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ. ನಾಳೆ (ಅಕ್ಟೋಬರ್‌ 2) ಭಾನುವಾರದ ಟಿಕೆಟ್‌ಗಾಗಿ ಪ್ರೇಕ್ಷಕರು ಮುಗಿ ಬೀಳುತ್ತಿದ್ದು, ಈಗಾಗಲೇ ಬಹುತೇಕ ಚಿತ್ರಮಂದಿಗಳ ಟಿಕೆಟ್‌ ಸೋಲ್ಡ್‌ಔಟ್‌ ಆಗಿದೆ.

ವಿಶ್ವದಾದ್ಯಂತ ತೆರೆ ಕಂಡಿರುವ 'ಕಾಂತಾರಾ' ಚಿತ್ರಕ್ಕೆ ಮನಸೋಲದವರೆ ಇಲ್ಲ. ಕರಾವಳಿಯ ಭಾಗಗಳಿಗೆ ಮೀಸಲಾಗಿದ್ದ ಕಂಬಳ ಮತ್ತು ಭೂತ ಕೋಲದ ಸಾಂಪ್ರದಾಯಿಕ ಸಂಸ್ಕೃತಿ 'ಕಾಂತಾರ' ಮೂಲಕ ದೇಶದ ಮೂಲೆ ಮೂಲೆಯಲ್ಲೂ ಮಾರ್ಧನಿಸುತ್ತಿದ್ದು, ಕೇವಲ ಸ್ಯಾಂಡಲ್‌ವುಡ್‌ ಮಾತ್ರವಲ್ಲ ಭಾರತೀಯ ಚಿತ್ರರಂಗದ ಅನೇಕ ನಟ-ನಟಿಯರು ಕಾಂತಾರ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರತಿಬಾರಿಯೂ ಕನ್ನಡ ಚಿತ್ರರಂಗಕ್ಕೆ ಅತ್ಯದ್ಭುತ ಚಿತ್ರಗಳನ್ನು ನೀಡುವ ಹೊಂಬಾಳೆ ಫಿಲ್ಮ್ಸ್ ಈ ಬಾರಿಯೂ ಬಂಗಾರದ ಬೆಳೆ ತೆಗೆಯುವುದರಲ್ಲಿ ಎರಡು ಮಾತಿಲ್ಲ. ಹೊಂಬಾಳೆ ಫಿಲ್ಮ್ಸ್ ನಿರ್ಮಾದಲ್ಲಿ ಅದ್ಧೂರಿಯಾಗಿ ಮೂಡಿಬಂದಿರುವ ಕಾಂತಾರ ಚಿತ್ರಕ್ಕೆ ಮನಸೋಲದವರಿಲ್ಲ. ಇನ್ನು ರಿಷಬ್‌ ಶೆಟ್ಟಿ ಎಲ್ಲರ ಹೊಗಳಿಕೆ ಪಾತ್ರರಾಗಿದ್ದಾರೆ. ರಿಷಬ್‌ ಶೆಟ್ಟಿ ತಾವೇ ರಚಿಸಿ, ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರದಲ್ಲಿ ರಿಷಬ್‌ ಶೆಟ್ಟಿ ಅಭಿನಯವನ್ನು ಸಿನಿಮಾ ವೀಕ್ಷಿಸಿದ ಪ್ರತಿಯೊಬ್ಬರು ಕೊಂಡಿದ್ದಾರೆ.

ರಿಷಬ್‌ ಅಭಿನಯಲ್ಲಿ ರೋಮಾಂಚನಗೊಂಡ ಪ್ರೇಕ್ಷಕರು

ರಿಷಬ್‌ ಅಭಿನಯಲ್ಲಿ ರೋಮಾಂಚನಗೊಂಡ ಪ್ರೇಕ್ಷಕರು

ಇಡೀ 'ಕಾಂತಾರ'ವೇ ಒಂದು ಅದ್ಭುತ ಅನುಭವವಾಗಿದ್ದು, ಚಿತ್ರದ ಕೊನೆಯ 20 ನಿಮಿಷಗಳು ಪ್ರೇಕ್ಷಕರ ಗಮನ ಕಿಂಚಿತ್ತು ವ್ಯತ್ಯಾಸವಾಗದಂತೆ ಹಿಡಿದಿಟ್ಟುಕೊಳ್ಳುತ್ತದೆ. ಕ್ಲೈಮಾಕ್ಸ್‌ನಲ್ಲಿ ರಿಷಬ್ ಶೆಟ್ಟಿ ಅಭಿನಯ ನೋಡಿ ಪ್ರತಿಯೊಬ್ಬರು ರೋಂಮಾಂಚನಗೊಂಡಿದ್ದಾರೆ. ಇನ್ನು ಕೆಲವರು ಕೊನೆಯಲ್ಲಿ ಕಣ್ಣೀರು ಹಾಕಿದ್ದಾರೆ. ಕರಾವಳಿಯ ಸಂಸ್ಕೃತಿಯ ಭಾಗವು ಪ್ರತಿಯೊಬ್ಬ ಪ್ರೇಕ್ಷಕನನ್ನೂ ತಲುಪಿದ್ದು, ರಿಷಬ್‌ ಶೆಟ್ಟಿ ಮತ್ತೆ ತಾನೊಬ್ಬ ಭರವಸೆಯ ನಿರ್ದೇಶಕ ಎನ್ನುವುದನ್ನು ಸಾಬೀತು ಮಾಡಿದ್ದಾರೆ.

'ಕಾಂತಾರ' ವೀಕ್ಷಿಸುತ್ತಿದ್ದ ಪ್ರೇಕ್ಷಕನ ಮೇಲೆ ದೈವ ಆವಾಹನೆ

'ಕಾಂತಾರ' ವೀಕ್ಷಿಸುತ್ತಿದ್ದ ಪ್ರೇಕ್ಷಕನ ಮೇಲೆ ದೈವ ಆವಾಹನೆ

'ಕಾಂತಾರ'ದ ಕ್ಲೈಮಾಕ್ಸ್‌ ಒಬ್ಬ ಪ್ರೇಕ್ಷಕನನ್ನು ಎಷ್ಟರ ಮಟ್ಟಿಗೆ ಆವರಿಸಿಕೊಳ್ಳುತ್ತದೆ ಎನ್ನುವುದಕ್ಕೆ ಮಂಗಳೂರಿನಲ್ಲಿ ನಡೆದ ವಿಶೇಷ ಘಟನೆಯೊಂದು ಸಾಕ್ಷಿಯಾಗಿದೆ. ಮಂಗಳೂರಿನ ಪಿವಿಆರ್ ಚಿತ್ರಮಂದಿರದಲ್ಲಿ ಶುಕ್ರವಾರ ನಾಲ್ಕನೇ ಶೋನಲ್ಲಿ 'ಕಾಂತಾರ' ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕನ ಮೈ ಮೇಲೆ ದೈವ ಆವಾಹನೆ ಆಗಿದೆ. ಸಿನಿಮಾ ನೋಡುತ್ತಿದ್ದ ವ್ಯಕ್ತಿ ಏಕಾಏಕಿ ದೈವ ಆವಾಹನೆ ಆದಂತೆ ವರ್ತಿಸಿದ್ದು, ಸ್ಥಳದಲ್ಲಿದ್ದವರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಪ್ರೇಕ್ಷನ ವರ್ತನೆ ಕಂಡು ಜನ ಗಾಬರಿಗೊಂಡಿದ್ದಾರೆ. ಈ ವೇಳೆ ಕೂಡಲೇ ಸಿನಿಮಾವನ್ನು ಸ್ಥಗಿತಗೊಳಿಸಲಾಗಿತ್ತು. ಸುಮಾರು ೧೦ ನಿಮಿಷದ ಬಳಿಕ ವ್ಯಕ್ತಿ ಚೇರಿಸಿಕೊಂಡಿದ್ದು ಮತ್ತೆ ಸಿನಿಮಾ ಮುಂದುವರಿಸಲಾಗಿದೆ.

ಭೂತಾರಾಧನೆ ವೇಷಭೂಷಣದಲ್ಲಿ ರಿಷಬ್‌ ಶೆಟ್ಟಿ

ಭೂತಾರಾಧನೆ ವೇಷಭೂಷಣದಲ್ಲಿ ರಿಷಬ್‌ ಶೆಟ್ಟಿ

'ಕಾಂತಾರ' ಸಿನಿಮಾದಲ್ಲಿ ಕರಾವಳಿ ಭಾಗದ ಕಂಬಳ ಹಾಗೂ ಭೂತಾರಾಧನೆಯನ್ನು ಹೈಲೈಟ್‌ ಮಾಡಲಾಗಿದೆ. ಅಲ್ಲದೇ ರಿಷಬ್‌ ಶೆಟ್ಟಿ ಭೂತಾರಾಧನೆ ವೇಷಭೂಷಣದಲ್ಲಿ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಈ ವೇಷಭೂಷಣದಲ್ಲಿ ರಿಷಬ್‌ ಆಕರ್ಷಿಣೀಯವಾಗಿ ಕಾಣಿಸಿಕೊಂಡಿದ್ದು, ಕರಾವಳಿಯ ಪವಿತ್ರ ಆರಾಧನೆ ಭೂತಾರಾಧನೆಯ ಚಿತ್ರೀರಣದ ಸಂದರ್ಭದಲ್ಲಿ ರಿಷಬ್‌ ಶೆಟ್ಟಿ ಅವರಿಗೆ ಸಹ ವಿಶೇಷ ಅನುಭವವಾಗಿದೆ. ಚಿತ್ರದ ಕ್ಲೈಮಾಕ್ಸ್‌ನಲ್ಲಿ ರಿಷಬ್‌ ಶೆಟ್ಟಿ ತಮ್ಮನ್ನೇ ತಾವು ಮರೆತು ನಟಿಸಿ ಜನರ ಮನಸ್ಸು ಮುಟ್ಟಿದ್ದಾರೆ.

ಕ್ಲೈಮಾಕ್ಸ್‌ಗೆ ಮನಸೋತ ಟಾಲಿವುಡ್‌ ನಟ

ಕ್ಲೈಮಾಕ್ಸ್‌ಗೆ ಮನಸೋತ ಟಾಲಿವುಡ್‌ ನಟ

ಇನ್ನು ಟಾಲಿವುಡ್‌ ನಟ ಪ್ರಭಾಸ್‌ ಕೂಡ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದು, ರಿಷಬ್‌ ಶೆಟ್ಟಿ ಅಭಿನಯಕ್ಕೆ ಮನಸೋತಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ 'ಕಾಂತಾರ' ಬಗ್ಗೆ ಬರೆದುಕೊಂಡಿದ್ದಾರೆ. 'ಕಾಂತಾರ' ಚಿತ್ರವನ್ನು ನೋಡಿ ಖುಷಿ ಪಟ್ಟಿದ್ದೇನೆ. ಅದರಲ್ಲೂ ಕ್ಲೈಮಾಕ್ಸ್‌ ಬಹಳ ಇಷ್ಟವಾಯಿತು. ಕಾಂತಾರ ಚಿತ್ರದ ನಾಯಕ ರಿಷಬ್ ಶೆಟ್ಟಿ, ನಾಯಕಿ ಸಪ್ತಮಿ ಗೌಡ, ನಿರ್ಮಾಪಕ ಹೊಂಬಾಳೆ ಫಿಲ್ಮ್ಸ್ ತಂಡದವರಿಗೆ ಪ್ರಭಾಸ್‌ ಶುಭ ಕೋರಿದ್ದಾರೆ. ಇನ್ನು ಪ್ರಭಾಸ್‌ ಮುಂದಿನ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದ್ದಾರೆ.

More from Filmibeat

English summary
Man feel special experience while watching Rishab Shetty starrer kantara movie at Mangalore.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X