Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೇ ತಿಂಗಳಲ್ಲಿ ನೋಡಬಹುದು 'ಮನಸು ಮಲ್ಲಿಗೆ'
ಎಸ್.ನಾರಾಯಣ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ಮನಸು ಮಲ್ಲಿಗೆ' ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇಷ್ಟು ದಿನ ಟ್ರೈಲರ್, ಹಾಡುಗಳ ಮೂಲಕ ಕುತೂಹಲ ಮೂಡಿಸಿರುವ 'ಮನಸು ಮಲ್ಲಿಗೆ' ಇದೇ ತಿಂಗಳಲ್ಲಿ ನೋಡಬಹುದು.
ಹೌದು, ಮಾರ್ಚ್ 31 ರಂದು 'ಮನಸು ಮಲ್ಲಿಗೆ' ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ. ಅಂದ್ಹಾಗೆ, ಮನಸು ಮಲ್ಲಿಗೆ ಮರಾಠಿ ಭಾಷೆಯ ಬ್ಲಾಕ್ ಬಸ್ಟರ್ ಹಿಟ್ ಎನಿಸಿಕೊಂಡಿರುವ 'ಸೈರಾಟ್' ಚಿತ್ರದ ರೀಮೇಕ್.[ಟ್ರೈಲರ್: ಕನ್ನಡದ 'ಪ್ರೇಮಕಾವ್ಯ' ಆಗುವ ಸೂಚನೆ ಕೊಟ್ಟ 'ಮನಸು ಮಲ್ಲಿಗೆ' ]
ಈ ಚಿತ್ರದಲ್ಲಿ ನಟ ಸತ್ಯಪ್ರಕಾಶ್ ಅವರು ಮಗ ನಿಶಾಂತ್ ನಾಯಕನಾಗಿ ಅಭಿನಯಿಸಿದ್ದರೆ, ನಾಯಕಿ ಪಾತ್ರದಲ್ಲಿ ರಿಂಕು ರಾಜಗುರು ಕಾಣಿಸಿಕೊಂಡಿದ್ದಾರೆ. ಇವರ ಜೊತೆಗೆ ರಂಗಭೂಮಿ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.['ವಾಲೆಂಟೈನ್ಸ್ ಡೇ' ಪ್ರಯುಕ್ತ 'ಮನಸು ಮಲ್ಲಿಗೆ' ಆಡಿಯೋ ಬಿಡುಗಡೆ]
ಬೆಂಗಳೂರು, ಹೊಸಪೇಟೆ, ಗದಗ, ಕೊಳ್ಳೇಗಾಲ, ಚಾಮರಾಜನಗರ ಮುಂತಾದ ಪ್ರದೇಶಗಳಲ್ಲಿ ಸುಮಾರು ಮೂವತ್ತು ದಿನಗಳ ಕಾಲ 'ಮನಸ್ಸು ಮಲ್ಲಿಗೆ' ಚಿತ್ರದ ಚಿತ್ರೀಕರಣ ನಡೆದಿದೆ. ಮನೋಹರ ಜೋಷಿ ಛಾಯಾಗ್ರಹಣ, ಇಸ್ಮಾಯಿಲ್ ಕಲಾ ನಿರ್ದೇಶನ, ವಿ.ನಾಗೇಂದ್ರ ಪ್ರಸಾದ್, ಕೆ.ಕಲ್ಯಾಣ್, ಯೋಗರಾಜ್ ಭಟ್, ಕವಿರಾಜ್ ಗೀತ ಸಾಹಿತ್ಯ ಈ ಚಿತ್ರಕ್ಕಿದೆ. ಕಲಾಸಾಮ್ರಾಟ್ ಎಸ್.ನಾರಾಯಣ್ ನಿರ್ದೇಶನದ ರಾಕ್ ಲೈನ್ ವೆಂಕಟೇಶ್ ಮತ್ತು ಆಕಾಶ್ ಚಾವ್ಲಾ ನಿರ್ಮಿಸಿದ್ದಾರೆ.[ಕನ್ನಡದ 'ಸೈರಾಟ್'ಗೆ ಟೈಟಲ್ ಫಿಕ್ಸ್!]