Don't Miss!
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ ನಾರಾಯಣ್ ಗೆ 40 ಲಕ್ಷ ರೂಪಾಯಿ ಮೋಸ ಮಾಡಿದ ಜೋತಿಷಿ!
Recommended Video
ಖ್ಯಾತ ಚಲನಚಿತ್ರ ನಿರ್ದೇಶಕ ಎಸ್ ನಾರಾಯಣ್ ಈಗ ಮೋಸ ಹೋಗಿದ್ದಾರೆ. ಕಡಿಮೆ ಬಡ್ಡಿ ದರಕ್ಕೆ ಆಸೆ ಪಟ್ಟು 40 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಈ ಪ್ರಕರಣದ ಒಬ್ಬ ಆರೋಪಿ ಕೂಡ ಈಗ ಸಿಕ್ಕಿ ಬಿದ್ದಿದ್ದಾನೆ.
2016ರಲ್ಲಿ ಎನ್ ನಾರಾಯಣ್ ಅವರ ಒಂದು ಪ್ರಾಜೆಕ್ಟ್ ಗೆ ಹೆಚ್ಚು ಹಣದ ಅಗತ್ಯ ಇತಂತ್ತೆ. ಈ ಕಾರಣದಿಂದ ಸಾಲ ಪಡೆಯಲು ಬ್ಯಾಂಕ್ ಗಳಿಗೆ ಅಲೆದಾಡುತ್ತಿದ್ದರಂತೆ. ಒಮ್ಮೆ ಬ್ಯಾಂಕ್ ನಲ್ಲಿ ಪರಿಚಯ ಆದ ಒಬ್ಬ ವ್ಯಕ್ತಿ ತಮಿಳುನಾಡಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುತ್ತೇನೆ ಎಂದು ನಂಬಿಸಿದನಂತೆ.
ನಾರಾಯಣ್ ಪುತ್ರನಿಗೆ ಲಾಟರಿ ಹೊಡಿತು : ಡಿ ಬಾಸ್ ಚಿತ್ರದಲ್ಲಿ ಪಂಕಜ್!
ತಮಿಳುನಾಡಿನ ಮಂದಾರ ಮೂರ್ತಿ ಎಂಬ ಜೋತಿಷಿ ಕಡೆಯಿಂದ ಕಡಿಮೆ ಬಡ್ಡಿಗೆ ಸಾಲ ಕೊಡಿಸುತ್ತೇನೆ ಎಂದು ಆ ವ್ಯಕ್ತಿ ಮಾತು ಕೊಟ್ಟಿದ್ದ. ಬಳಿಕ ಎಸ್ ನಾರಾಯಣ್ 40 ಲಕ್ಷ ಹಣವನ್ನು ಕಮಿಷನ್ ರೂಪದಲ್ಲಿ ಅವನಿಗೆ ನೀಡಿದ್ದರು. ಹಣ ಪಡೆದ ನಂತರ ಆತ ಫೇಕ್ ಡಿಡಿ ನೀಡಿ ಯಾಮಾರಿಸಿದ್ದ.
ಈ ವಿಷಯಕ್ಕೆ ಸಂಬಂಧಿಸಿದಂತೆ 2017 ರಲ್ಲಿ ಎಸ್ ನಾರಾಯಣ್ ಪೊಲೀಸರಿಗೆ ದೂರು ನೀಡಿದ್ದರು. ಯಶವಂತಪುರ ಪೊಲೀಸರು ಇದೀಗ ಈ ಪ್ರಕರಣದ ಒಬ್ಬ ಆರೋಪಿಯನ್ನು ಬಂದಿಸಿದ್ದಾರೆ. ಮುಖ್ಯ ಆರೋಪಿ ಮಂದಾರ ಮೂರ್ತಿಯ ಹುಡುಕಾಟದಲ್ಲಿ ಪೋಲೀಸರು ತೊಡಗಿದ್ದಾರೆ.