Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಮಹಾ ಸಮರ: ಆರಂಭಿಕ ಮುನ್ನಡೆ ಕಾಯ್ದುಕೊಂಡ ನಿಖಿಲ್ ಕುಮಾರ್
ಭಾರಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೊದಲ ಸುತ್ತಿನ ಎಣಿಕೆ ನಂತರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 907 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.
ಆರಂಭದಿಂದಲೂ ಭಾರಿ ಪೈಪೋಟಿ ನೀಡುತ್ತಿರುವ ಸುಮಲತಾ ಅಂಬರೀಶ್ ಕೆಲವೇ ಮತಗಳ ಅಂತರದಿಂದ ಹಿಂದೆ ಬಿದ್ದಿದ್ದಾರೆ. ಅದಕ್ಕೂ ಮುಂಚೆ ಅಂಚೆ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಮುನ್ನಡೆ ಸಾಧಿಸಿದ್ದರು.
ಲೋಕಸಭೆ ಚುನಾವಣೆ 2019 ಫಲಿತಾಂಶ LIVE : 250 ಕ್ಷೇತ್ರದಲ್ಲಿ NDA ಮುನ್ನಡೆ
ಆದರೆ ಮೊದಲ ಸುತ್ತಿನ ಮತ ಎಣಿಕೆ ಮುಗಿಯುವಷ್ಟರಲ್ಲಿ ಮತ್ತೆ ನಿಖಿಲ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯ ಲೋಕಸಭೆ ಎಣಿಕೆ ಪ್ರತಿಹಂತದಲೂ ಕುತೂಹಲ ಮೂಡಿಸಿದೆ. ಯಾವುದೇ ಹಂತದಲ್ಲೂ ಫಲಿತಾಂಶ ಈ ಕಡೆ, ಆ ಕಡೆ ಆಗುವ ನಿರೀಕ್ಷೆ ಇದೆ.
ಮಂಡ್ಯ ಫಲಿತಾಂಶ LIVE: ಮೊದಲ ಸುತ್ತಿನಲ್ಲಿ ನಿಖಿಲ್ ಗೆ ಮುನ್ನಡೆ
ಚುನಾವಣೆ ಬಳಿಕ ಹೊರಬಿದ್ದಿದ್ದ ಎಕ್ಸಿಟ್ ಪೋಲ್ ನಲ್ಲಿ ಆರು ಸಮೀಕ್ಷೆಗಳು ನಿಖಿಲ್ ಕುಮಾರ್ ಪರವಾಗಿ ಫಲಿತಾಂಶ ನೀಡಿದ್ದರೆ, ಸುಮಲತಾ ಪರವಾಗಿ ನಾಲ್ಕು ಸಮೀಕ್ಷೆಗಳು ಫಲಿತಾಂಶ ಕೊಟ್ಟಿದ್ದವು.
ಆದ್ರೆ, ಸಮೀಕ್ಷೆಗಳನ್ನ ನಾನು ನಂಬಲ್ಲ, ನಮ್ಮ ಪರವಾಗಿ ಜನರು ತೀರ್ಪು ನೀಡಿದ್ದಾರೆ. ನಾನು ಜಯಗಳಿಸುತ್ತೇನೆ ಎಂದು ನಿಖಿಲ್ ಕುಮಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು.