Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸ್ನೇಹ ಪ್ರೀತಿಗೆ ಸಾಕಾರ ರೂಪ ನಮ್ಮ ವಿಷ್ಣುವರ್ಧನ್': ಸುಮಲತಾ ಅಂಬರೀಶ್
ಕನ್ನಡ ಚಿತ್ರರಂಗ ಮೇರು ನಟ, ಸಾಹಸ ಸಿಂಹ ಡಾ ವಿಷ್ಣುವರ್ಧನ್ ಅವರು ಅಗಲಿ ಇಂದಿಗೆ 11 ವರ್ಷ ಕಳೆದಿದೆ. ದೈಹಿಕವಾಗಿ ವಿಷ್ಣುದಾದ ಇಲ್ಲವಾದರೂ ಪ್ರತಿಯೊಬ್ಬ ಅಭಿಮಾನಿ ಹೃದಯದಲ್ಲಿ ಹೃದಯವಂತನಾಗಿ ನೆಲೆಸಿದ್ದಾರೆ.
ವಿಷ್ಣುದಾದ ಅವರ ಹನ್ನೊಂದನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಅಭಿಮಾನ್ ಸ್ಟುಡಿಯೋದಲ್ಲಿ ಸಂಪ್ರದಾಯದಂತೆ ರಕ್ತದಾನ, ಅನ್ನದಾನ, ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಗಳು ನಡೆಯುತ್ತಿವೆ. ಅದೇ ರೀತಿ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಭಾರತಿ ವಿಷ್ಣುವರ್ಧನ್ ಹಾಗೂ ಕುಟುಂಬ ಪೂಜೆ ಮಾಡಲಿದ್ದಾರೆ.
ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ
ವಿಷ್ಣುವರ್ಧನ್ ಅವರ ಪುಣ್ಯ ಸ್ಮರಣೆಯ ವಿಶೇಷವಾಗಿ ಮಂಡ್ಯ ಸಂಸದೆ, ಅಂಬರೀಶ್ ಅವರ ಪತ್ನಿ ಸುಮಲತಾ ಸಾಮಾಜಿಕ ಜಾಲತಾಣದ ಮೂಲಕ ದಾದಾ ಅವರನ್ನು ಸ್ಮರಿಸಿದ್ದಾರೆ.
''ಸ್ನೇಹ ಪ್ರೀತಿಗೆ ಸಾಕಾರ ರೂಪವಾಗಿದ್ದ ನಮ್ಮ ವಿಷ್ಣುವರ್ಧನ್ ನಮ್ಮ ಕಣ್ಣ ಮುಂದೆ ಇರದೇ ಇರಬಹುದು. ಆದರೆ ನಮ್ಮ ನಿಶ್ಚಲ ಯೋಚನೆಗಳಲ್ಲಿ, ನಮ್ಮ ಚೈತನ್ಯದ ಯೋಜನೆಗಳಲ್ಲಿ, ನಮ್ಮ ಸಾಕ್ಷಿ ಪ್ರಜ್ಞೆಯಲ್ಲಿ ಮತ್ತು ಎಲ್ಲದಕ್ಕೂ ಹೆಚ್ಚಾಗಿ ನಮ್ಮೆಲ್ಲರ ಸ್ನೇಹದ ಸೇತುವೆಯಾಗಿ ಇನ್ನೂ ಜೀವಂತವಾಗಿದ್ದಾರೆ. #ವಿಷ್ಣು_ಚಿರಾಯು'' ಎಂದು ನೆನಪಿಸಿಕೊಂಡಿದ್ದಾರೆ.
ಈ ಪೋಸ್ಟ್ ಜೊತೆ ವಿಷ್ಣುವರ್ಧನ್ ಅವರ ಮನೆಯಲ್ಲಿ ಅಂಬರೀಶ್ ಕುಳಿತುಕೊಂಡಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಸೂಕ್ಷ್ಮವಾಗಿ ಈ ಫೋಟೋ ಗಮನಿಸಿದರೆ ಅಂಬರೀಶ್ ಮತ್ತು ವಿಷ್ಣುವರ್ಧನ್ ಅವರ ಸ್ನೇಹ ಹೇಗಿತ್ತು ಎಂಬ ನೆನಪು ಕಾಡುತ್ತದೆ.