Don't Miss!
- News ‘ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ?’
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕೀಯ ಬಿಟ್ಟು ಸಿನಿಮಾರಂಗಕ್ಕೆ ಕಾಲಿಟ್ಟ ಡಾ.ಕಾವೇರಿ: ಮಂಡ್ಯ ರಮೇಶ್ ಪುತ್ರಿ ಸಾಥ್
ಸಿನಿಮಾ ಲೋಕನೇ ಹಾಗೆ, ಯಾರು ಬೇಕಾದರೂ ಎಂಟ್ರಿ ಕೊಡಬಹುದು. ನಟನೆ, ನಿರ್ದೇಶನ, ನಿರ್ಮಾಣ ಹೀಗೆ ಹತ್ತು ಹಲವಾರು ಆಯ್ಕೆಗಳಿವೆ. ಸ್ಟಾರ್ ಆಗಬೇಕು ಎಂದು ಕನಸು ಕಾಣುವವರು ಒಂದೆಡೆ ಆದರೆ, ತೆರೆ ಹಿಂದೆ ಆದರೂ ಸಹಿ ಬಣ್ಣದ ಲೋಕದಲ್ಲಿ ಕೆಲಸ ಮಾಡಬೇಕು ಎನ್ನುವವರು ಮತ್ತೊಂದೆಡೆ. ಸಿನಿಮಾ ಲೋಕಕ್ಕೆ ಸಾಕಷ್ಟು ಮಂದಿ ಎಂಟ್ರಿ ಕೊಡುತ್ತಾರೆ. ಆದರೆ ಬೆರಳೆಣಿಕೆಯಷ್ಟು ಜನರು ಮಾತ್ರ ಯಶಸ್ಸು ಕಂಡು, ಉಳಿದುಕೊಳ್ಳುತ್ತಾರೆ.
ಇದೀಗ ಸಿನಿಮಾದ ಮೇಲಿನ ಆಸಕ್ತಿಯಿಂದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆಯೊಬ್ಬರು ರಾಜಕೀಯ ತೊರೆದು ಸಿನಿಮಾರಂಗದಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ. ಹೌದು, ಕೊಡಗಿನಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆಯಾಗಿದ್ದ ಡಾ.ಕಾವೇರಿ ಇದೀಗ ರಾಜಕೀಯ ಬಿಟ್ಟು ಬಣ್ಣದ ಲೋಕಕ್ಕೆ ನಿರ್ಮಾಪಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ.
ದರ್ಶನ್ ಅನುಭವಿಸಿದ ಕಷ್ಟಗಳ ಬಗ್ಗೆ ದರ್ಶನ್ ಗುರುಗಳ ಮಾತು
ತಮ್ಮ ಸ್ನೇಹಿತರ ಜೊತೆಗೂಡಿ ಡಾ.ಕಾವೇರಿ 'ಸ್ವಾಮಿ ಅಂಡ್ ಫ್ರೆಂಡ್ಸ್' ಸಿನಿಮಾ ಮೂಲಕ ಚೊಚ್ಚಲ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಕಾವೇರಿ ಅವರಿಗೆ ಪ್ರತಿಭಾನ್ವಿತ ತಂಡ ಸಾಥ್ ನೀಡಿದೆ. ವಿಶೇಷ ಎಂದರೆ ಈ ಚಿತ್ರದ ಮೂಲಕ ಖ್ಯಾತ ನಟ ಮಂಡ್ಯ ರಮೇಶ್ ಅವರ ಪುತ್ರಿ ದಿಶಾ ನಾಯಕಿಯಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ದಿಶಾ ಈಗಾಗಲೇ ರಂಗಭೂಮಿಯಲ್ಲಿ ಸಕ್ರೀಯರಾಗಿದ್ದಾರೆ.
ಚಿತ್ರದಲ್ಲಿ ಬಹುತೇಕ ರಂಗಭೂಮಿ ಕಲಾವಿದರೆ ಕಾಣಿಸಿಕೊಳ್ಳುತ್ತಿರುವುದು ಈ ಸಿನಿಮಾದ ವಿಶೇಷ. ಇನ್ನು ಬಿ. ಸುರೇಶ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ರಿಷಿಕ್ ಕಾಣಿಸಿಕೊಳ್ಳುತ್ತಿದ್ದಾರೆ. ನಟನೆ ಜೊತೆಗೆ ರಿಷಿಕ್ ನಿರ್ದೇಶನ ಮತ್ತು ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತು ಕೊಂಡಿದ್ದಾರೆ.
Recommended Video
ಶಿವು ಚಾವಡಿ, ಅವಿ ತೇಜ, ಅವಿ ವರ್ಮ, ಚಂದ್ರು ಸೇರಿದಂತೆ ಅನೇಕರು ಬಣ್ಣಹಚ್ಚುತ್ತಿದ್ದಾರೆ. ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಕೊಡಗು ಮೈಸೂರು ಭಾಗದಲ್ಲಿ ಚಿತ್ರೀಕರಣ ಮಾಡಲು ಪ್ಲಾನ್ ಮಾಡಿದೆ. ಕೊರೊನಾ ಮುನ್ನೆಚ್ಚರಿಕೆಯೊಂದಿಗೆ ಸಿನಿಮಾತಂಡ ಚಿತ್ರೀಕರಣಕ್ಕೆ ಹೊರಡಲು ಸಿದ್ಧವಾಗಿದೆ.