Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಮಂಡ್ಯ ರಮೇಶ್ ತಂದೆ ರಂಗಕರ್ಮಿ ಎನ್.ಸುಬ್ರಹ್ಮಣ್ಯಂ ನಿಧನ
ಸ್ಯಾಂಡಲ್ ವುಡ್ ನಟ ಮಂಡ್ಯ ರಮೇಶ್ ತಂದೆ ಹಿರಿಯ ರಂಗಕರ್ಮಿ ಎನ್.ಸುಬ್ರಹ್ಮಣ್ಯಂ ನಿಧನರಾಗಿಗ್ದಾರೆ. 90 ವರ್ಷದ ಎನ್.ಸುಬ್ರಹ್ಮಣ್ಯಂ ಮೈಸೂರಿನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಎನ್.ಸುಬ್ರಹ್ಮಣ್ಯಂ ಅವರಿಗೆ ಮಂಡ್ಯ ರಮೇಶ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಒಬ್ಬರು ಪುತ್ರಿ ಇದ್ದಾರೆ.
ಇವರ ಅಂತ್ಯಕ್ರಿಯೆ ಇಂದು ಸಂಜೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಮುಕ್ತಿಧಾಮದಲ್ಲಿ ನೆರವೇರಿತು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದವರಾದ ಎನ್ ಸುಬ್ರಹ್ಮಣ್ಯಂ ಅವರು ಮೊದಲು ಉಪ ನೋಂದಣಿ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು, ಬೆಳ್ಳೂರು ಸೇರಿದಂತೆ ಅನೇಕ ಕಡೆ ಕಾರ್ಯ ನಿರ್ವಹಿಸಿದ್ದಾರೆ.
ಮಗುವಿಗೆ ಹಾಲು ಕುಡಿಸುವುದನ್ನು ನಿಲ್ಲಿಸಿ ವೇದಿಕೆ ಏರಿ ನಾಟಕ ಮಾಡಿದ್ರು ಮಂಡ್ಯ ರಮೇಶ್ ಪತ್ನಿ!
ಸುಮಾರು 40 ವರ್ಷಗಳ ಕಾಲ ಸರ್ಕಾರಿ ಕೆಲಸ ಮಾಡಿ ಕೊನೆಗೆ ಉಪನೋಂದಣಿ ಅಧಿಕಾರಿಯಾಗಿ ನಿವೃತ್ತರಾದು. ನಿವೃತ್ತಿಯ ಬಳಿಕ ಧಾರ್ಮಿಕ, ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ತೊಡಗಿಕೊಂಡರು. ನಟನ ಸಂಸ್ಥೆಯ ಅಧ್ಯಕ್ಷರಾಗಿ ಆರಂಭದಿಂದಲೂ ಕಾರ್ಯ ನಿರ್ವಹಿಸುತ್ತಿದ್ದರು. 'ನನ್ನ ಜೀವನ ಕೈಗನ್ನಡಿ' ಸೇರಿದಂತೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ.
Recommended Video
ಮೈಸೂರಿನಲ್ಲಿ ಪುತ್ರ ಮಂಡ್ಯ ರಮೇಶ್ ನಟನ ರಂಗಮಂದಿರ ನಿರ್ಮಿಸಿದ ನಂತರ ರಂಗಮಂದಿರದ ಅಧ್ಯಕ್ಷರಾಗಿ, ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಇಳಿವಯಸ್ಸಿನಲ್ಲೂ ನಾಟಕ ಕುರಿತ ಚರ್ಚೆ ಮತ್ತು ವಿಮರ್ಶೆಗಳಲ್ಲಿ ಪಾಲ್ಗೋಳ್ಳುತ್ತಿದ್ದರು.