Just In
Don't Miss!
- Lifestyle
ಶುಕ್ರವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್
- News
Mood Of The Nation ಸಮೀಕ್ಷೆ: ಈಗ ಚುನಾವಣೆ ನಡೆದರೂ ಗೆಲ್ಲೋದು ಎನ್ಡಿಎ
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುದೀಪ್ಗೆ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ಮೇನಕಾ ಗಾಂಧಿ
ಭಾರತೀಯ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ವಿಶೇಷವಾಗಿ ಅವರ ಅಭಿಮಾನಿಗಳು ಕೈಗೊಂಡ ಮಹತ್ವದ ಕೆಲಸಕ್ಕಾಗಿ ಲೋಕಸಭೆ ಸದಸ್ಯೆ ಮೇನಕಾ ಗಾಂಧಿ ಅವರು ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಿಚ್ಚ ಸುದೀಪ್ ಅವರಿಗೆ ಕರೆ ಮಾಡಿ ಮೂಕಪ್ರಾಣಿ ವಿಚಾರದಲ್ಲಿ ತಾವು ಮತ್ತು ತಮ್ಮ ಅಭಿಮಾನಿಗಳು ಮಾಡಿದ ಕೆಲಸ ನಿಜಕ್ಕೂ ಸ್ವಾಗತಾರ್ಹ, ನಿಮ್ಮಿಂದ ಇಂತಹ ಕೆಲಸಗಳು ಮತ್ತಷ್ಟು ಆಗಲಿ ಎಂದು ಶ್ಲಾಘಿಸಿದ್ದಾರೆ.
ಹಿರಿಯ ನಿರ್ದೇಶಕ ಎ.ಟಿ ರಘು ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಕಿಚ್ಚ ಸುದೀಪ್
ಅಂದ್ಹಾಗೆ, ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ, ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ 25 ಒಳ್ಳೆಯ ಕೆಲಸ ಮಾಡಲು ತೀರ್ಮಾನಿಸಿದ್ದಾರೆ. ಸತತವಾಗಿ 25 ದಿನಗಳ ಕಾಲ ಮಾನವೀಯತೆ ಸಂದೇಶ ಸಾರುವ ಸಲುವಾಗಿ 25 ಕೆಲಸಗಳನ್ನು ಮಾಡುವ ಕಾರ್ಯ ಪ್ರಾರಂಭಿಸಲಾಗಿದೆ.
ಅದರಲ್ಲೂ ಮೂಕಪ್ರಾಣಿಗಳಿಗೆ (ವಿಶೇಷವಾಗಿ ಬೀದಿಶ್ವಾನಗಳಿಗೆ) ಆಶ್ರಯ ವ್ಯವಸ್ಥೆ ಮಾಡಿರುವುದಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಅಂದ್ರೆ ಶ್ವಾನಗಳಿಗಾಗಿ ಶೆಟ್ಟರ್ ತೆರೆಯಲಾಗಿದೆ.
ಇದೇ ವಿಚಾರವಾಗಿ ಸುದೀಪ್ ಅವರಿಗೆ ದೂರವಾಣಿ ಕರೆ ಮಾಡಿದ್ದ ಮೇನಕಾ ಗಾಂಧಿ (Founder of people for Animals) ''ಭಾರತದಾದ್ಯಂತ ಇಂತಹ 100 ಶೆಟ್ಟರ್ಗಳ ಅವಶ್ಯಕತೆಯಿದ್ದು, ನೀವು (ಸುದೀಪ್) ಮೊದಲನೇಯ ಶೆಟ್ಟರ್ಗೆ ಕಾರಣರಾಗಿದ್ದಿರಾ. ಹಾಗೂ ಮೊದಲನೇ ಅಡಿಪಾಯದ ಕಲ್ಲು ನೆಟ್ಟಿದ್ದಿರಾ...ನಿಮ್ಮ ಸೇವೆ ಹೀಗೆ ಮುಂದುವರೆಯುತ್ತಾ ಇರಲಿ'' ಎಂದಿದ್ದಾರೆ.
"ಮಡದಿಯೋ ಗೆಳತಿಯೋ ಏನೆಂದು ಕರೆಯಲಿ ನಿನ್ನ": ಪತ್ನಿ ಬರ್ತಡೇಗೆ ಸುದೀಪ್ ಭರ್ಜರಿ ಗಿಫ್ಟ್
25 ಮಹತ್ವದ ಕೆಲಸಗಳಲ್ಲಿ ಇದೊಂದೆ ಅಲ್ಲ, ದೆಹಯಲ್ಲಿ ಮುಷ್ಕರ ನಿರತರಾಗಿರುವ ಅನ್ನದಾತರಿಗೆ 500 ಬ್ಲ್ಯಾಂಕೆಟ್ ಗಳನ್ನು ಕಳುಹಿಸಿಕೊಡಲಾಗಿದೆ. ಬದುಕುವ ಭರವಸೆ ಕಳೆದುಕೊಂಡಿದ್ದ ಸುಶ್ಮಾಂತ್ ಎಂಬ ವ್ಯಕ್ತಿಯ ಕುಟುಂಬಕ್ಕೆ ನೆರವು ನೀಡಲಾಗಿದೆ. ವಿಶೇಷಚೇತನರಿಗಾಗಿ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ.
ಇತ್ತೀಚಿಗಷ್ಟೆ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಿರ್ದೇಶಕ ಎಟಿ ರಘು ಅವರಿಗೆ ಫೋನ್ ಮಾಡಿದ್ದ ನಟ ಸುದೀಪ್ ಧೈರ್ಯ ತುಂಬಿದ್ದರು. ''ನಿಮ್ಮ ಜೊತೆ ನಾವು ಇದ್ದೇವೆ, ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುತ್ತೇವೆ, ಧೈರ್ಯವಾಗಿರಿ'' ಎಂದು ಭರವಸೆ ನೀಡಿದ್ದರು.