Don't Miss!
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- News ಮತದಾನದ ದಿನ ಬೆಳಗ್ಗೆ ಸಿಗಲ್ಲ ಬಾಡಿಗೆ ವಾಹನಗಳು!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ಗೆ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ಮೇನಕಾ ಗಾಂಧಿ
ಭಾರತೀಯ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ವಿಶೇಷವಾಗಿ ಅವರ ಅಭಿಮಾನಿಗಳು ಕೈಗೊಂಡ ಮಹತ್ವದ ಕೆಲಸಕ್ಕಾಗಿ ಲೋಕಸಭೆ ಸದಸ್ಯೆ ಮೇನಕಾ ಗಾಂಧಿ ಅವರು ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಿಚ್ಚ ಸುದೀಪ್ ಅವರಿಗೆ ಕರೆ ಮಾಡಿ ಮೂಕಪ್ರಾಣಿ ವಿಚಾರದಲ್ಲಿ ತಾವು ಮತ್ತು ತಮ್ಮ ಅಭಿಮಾನಿಗಳು ಮಾಡಿದ ಕೆಲಸ ನಿಜಕ್ಕೂ ಸ್ವಾಗತಾರ್ಹ, ನಿಮ್ಮಿಂದ ಇಂತಹ ಕೆಲಸಗಳು ಮತ್ತಷ್ಟು ಆಗಲಿ ಎಂದು ಶ್ಲಾಘಿಸಿದ್ದಾರೆ.
ಹಿರಿಯ ನಿರ್ದೇಶಕ ಎ.ಟಿ ರಘು ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಕಿಚ್ಚ ಸುದೀಪ್
ಅಂದ್ಹಾಗೆ, ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ, ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ 25 ಒಳ್ಳೆಯ ಕೆಲಸ ಮಾಡಲು ತೀರ್ಮಾನಿಸಿದ್ದಾರೆ. ಸತತವಾಗಿ 25 ದಿನಗಳ ಕಾಲ ಮಾನವೀಯತೆ ಸಂದೇಶ ಸಾರುವ ಸಲುವಾಗಿ 25 ಕೆಲಸಗಳನ್ನು ಮಾಡುವ ಕಾರ್ಯ ಪ್ರಾರಂಭಿಸಲಾಗಿದೆ.
ಅದರಲ್ಲೂ ಮೂಕಪ್ರಾಣಿಗಳಿಗೆ (ವಿಶೇಷವಾಗಿ ಬೀದಿಶ್ವಾನಗಳಿಗೆ) ಆಶ್ರಯ ವ್ಯವಸ್ಥೆ ಮಾಡಿರುವುದಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಅಂದ್ರೆ ಶ್ವಾನಗಳಿಗಾಗಿ ಶೆಟ್ಟರ್ ತೆರೆಯಲಾಗಿದೆ.
ಇದೇ ವಿಚಾರವಾಗಿ ಸುದೀಪ್ ಅವರಿಗೆ ದೂರವಾಣಿ ಕರೆ ಮಾಡಿದ್ದ ಮೇನಕಾ ಗಾಂಧಿ (Founder of people for Animals) ''ಭಾರತದಾದ್ಯಂತ ಇಂತಹ 100 ಶೆಟ್ಟರ್ಗಳ ಅವಶ್ಯಕತೆಯಿದ್ದು, ನೀವು (ಸುದೀಪ್) ಮೊದಲನೇಯ ಶೆಟ್ಟರ್ಗೆ ಕಾರಣರಾಗಿದ್ದಿರಾ. ಹಾಗೂ ಮೊದಲನೇ ಅಡಿಪಾಯದ ಕಲ್ಲು ನೆಟ್ಟಿದ್ದಿರಾ...ನಿಮ್ಮ ಸೇವೆ ಹೀಗೆ ಮುಂದುವರೆಯುತ್ತಾ ಇರಲಿ'' ಎಂದಿದ್ದಾರೆ.
"ಮಡದಿಯೋ ಗೆಳತಿಯೋ ಏನೆಂದು ಕರೆಯಲಿ ನಿನ್ನ": ಪತ್ನಿ ಬರ್ತಡೇಗೆ ಸುದೀಪ್ ಭರ್ಜರಿ ಗಿಫ್ಟ್
25 ಮಹತ್ವದ ಕೆಲಸಗಳಲ್ಲಿ ಇದೊಂದೆ ಅಲ್ಲ, ದೆಹಯಲ್ಲಿ ಮುಷ್ಕರ ನಿರತರಾಗಿರುವ ಅನ್ನದಾತರಿಗೆ 500 ಬ್ಲ್ಯಾಂಕೆಟ್ ಗಳನ್ನು ಕಳುಹಿಸಿಕೊಡಲಾಗಿದೆ. ಬದುಕುವ ಭರವಸೆ ಕಳೆದುಕೊಂಡಿದ್ದ ಸುಶ್ಮಾಂತ್ ಎಂಬ ವ್ಯಕ್ತಿಯ ಕುಟುಂಬಕ್ಕೆ ನೆರವು ನೀಡಲಾಗಿದೆ. ವಿಶೇಷಚೇತನರಿಗಾಗಿ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ.
ಇತ್ತೀಚಿಗಷ್ಟೆ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಿರ್ದೇಶಕ ಎಟಿ ರಘು ಅವರಿಗೆ ಫೋನ್ ಮಾಡಿದ್ದ ನಟ ಸುದೀಪ್ ಧೈರ್ಯ ತುಂಬಿದ್ದರು. ''ನಿಮ್ಮ ಜೊತೆ ನಾವು ಇದ್ದೇವೆ, ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುತ್ತೇವೆ, ಧೈರ್ಯವಾಗಿರಿ'' ಎಂದು ಭರವಸೆ ನೀಡಿದ್ದರು.