Don't Miss!
- News ಬೆಂಗಳೂರಿನಲ್ಲಿ 647 ಎಕರೆಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಕೆಐಎಡಿಬಿ ಯೋಜನೆ
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣ: ಅನುಶ್ರೀ ಹುಡುಕಿಕೊಂಡು ಮಂಗಳೂರಿನಿಂದ ಪೊಲೀಸರ ಆಗಮನ
ನಟಿ, ನಿರೂಪಕಿ ಅನುಶ್ರೀ ಅವರಿಗೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಸಿಸಿಬಿ ಪೊಲೀಸರಿಂದ ನೊಟೀಸ್ ಜಾರಿ ಮಾಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅನುಶ್ರೀ ಅವರಿಗೆ ನೊಟೀಸ್ ಅನ್ನು ಹಸ್ತಾಂತರಿಸಲಾಗುತ್ತದೆ.
ಕೆಲವೇ ಗಂಟೆಗಳ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ್ದ ನಟಿ ಅನುಶ್ರೀ, 'ನನಗೆ ಸಿಸಿಬಿಯಿಂದ ಯಾವುದೇ ನೋಟೀಸ್ ಬಂದಿಲ್ಲ' ಎಂದಿದ್ದರು. ಹಾಗಾಗಿಯೇ ಅವರಿಗೆ ನೇರವಾಗಿ ನೊಟೀಸ್ ನೀಡಲೆಂದು ಪೊಲೀಸರು ಬೆಂಗಳೂರಿಗೆ ಬರುತ್ತಿದ್ದಾರೆ.
ನೊಟೀಸ್ ಬಂದಿಲ್ಲ, ಕಿಶೋರ್ ಶೆಟ್ಟಿ ಹಳೆ ಪರಿಚಯ: ಅನುಶ್ರೀ
ಈ ಮೊದಲು ಮಂಗಳೂರು ಸಿಸಿಬಿ ಪೊಲಿಸರು ವಾಟ್ಸ್ಆಪ್ ಮೂಲಕ ಅನುಶ್ರೀ ಅವರಿಗೆ ನೊಟೀಸ್ ನೀಡಿದ್ದರು ಎನ್ನಲಾಗಿದೆ. ಆದರೆ ನೇರವಾಗಿಯೇ ಅನುಶ್ರೀ ಅವರಿಗೆ ನೊಟೀಸ್ ನೀಡಲು ತಂಡವೊಂದು ಮಂಗೂರಿನಿಂದ ಬೆಂಗಳೂರಿನ ಕಡೆಗೆ ಹೊರಟಿದೆ. ಈ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಿಶೋರ್ ಶೆಟ್ಟಿ ಹೇಳಿಕೆ ಮೇರೆಗೆ ಅನುಶ್ರೀಗೆ ನೊಟೀಸ್?
ಮಂಗಳೂರು ಪೊಲೀಸರು ಸೆಪ್ಟೆಂಬರ್ 18 ರಂದು ನೃತ್ಯಗಾರ ಹಾಗೂ ನಟ ಕಿಶೋರ್ ಶೆಟ್ಟಿ ಅವರನ್ನು ಡ್ರಗ್ಸ್ ಜೊತೆಗೆ ಬಂಧಿಸಿದ್ದರು. ಅವರ ಹೇಳಿಕೆ ಆಧಾರದ ಮೇಲೆಯೇ ಅನುಶ್ರೀ ಅವರಿಗೆ ನೊಟೀಸ್ ನೀಡಲಾಗಿದೆ.
ಕಿಶೋರ್ ಶೆಟ್ಟಿ-ಅನುಶ್ರೀ ಹಳೆಯ ಗೆಳೆಯರು
ಬಂಧನಕ್ಕೆ ಒಳಗಾಗಿರುವ ಕಿಶೋರ್ ಶೆಟ್ಟಿ ಹಾಗೂ ಅನುಶ್ರೀ ಅವರು ಹಳೆಯ ಗೆಳೆಯರು, ಅನುಶ್ರೀ ಅವರು ನೃತ್ಯ ಕಾರ್ಯಕ್ರಮಗಳನ್ನು ನೀಡುವ ಸಮಯದಲ್ಲಿ ನೃತ್ಯ ನಿರ್ದೇಶನ ಮಾಡುತ್ತಿದ್ದರು ಕಿಶೋರ್.
ಡ್ರಗ್ಸ್ ಜೊತೆ ಪೊಲೀಸರಿಗೆ ಸಿಕ್ಕಿಬಿದ್ದ ಮಂಗಳೂರಿನ ನಟ: ನಿರೂಪಕಿ ಜೊತೆ ನಂಟು?
ನೊಟೀಸ್ ಬಂದರೆ ವಿಚಾರಣೆಗೆ ಹೋಗ್ತೀನಿ: ಅನುಶ್ರೀ
ಈ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅನುಶ್ರೀ, 'ನನಗೆ ನೊಟೀಸ್ ಬಂದಿಲ್ಲ, ನೊಟೀಸ್ ಬಂದರೆ ವಿಚಾರಣೆಗೆ ಹೋಗುತ್ತೇನೆ' ಎಂದಿದ್ದರು. ಕಿಶೋರ್ ಹತ್ತು ವರ್ಷಗಳಿಂದಲೂ ಪರಿಚಿತರು ಆದರೆ ಕಳೆದ ಒಂದು ವರ್ಷದಿಂದ ನನ್ನೊಂದಿಗೆ ಸಂಪರ್ಕವಿಲ್ಲ ಎಂದಿದ್ದಾರೆ ಅನುಶ್ರೀ.
Recommended Video
ಈಗಾಗಲೇ ಹಲವರ ತನಿಖೆ ಆಗಿದೆ
ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ನಟಿ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ದಿಗಂತ್, ಐಂದ್ರಿತಾ ರೇ, ಯೋಗಿ, ಸಂತೋಶ್, ಅಕುಲ್ ಬಾಲಾಜಿ ಇನ್ನೂ ಕೆಲವು ಸೆಲೆಬ್ರಿಟಿಗಳ ವಿಚಾರಣೆ ಮಾಡಲಾಗಿದೆ. ಇವರನ್ನೆಲ್ಲಾ ಬೆಂಗಳೂರು ಸಿಸಿಬಿ ವಿಭಾಗ ವಿಚಾರಣೆ ಮಾಡಿದ್ದರೆ, ಅನುಶ್ರೀ ಅವರನ್ನು ಮಂಗಳೂರು ಸಿಸಿಬಿ ವಿಭಾಗ ತನಿಖೆಗೆ ಒಳಪಡಿಸಲಿದೆ.