Don't Miss!
- Lifestyle ಹೌಸ್ವೈಫ್ ಆಗಿರುವ ಈ ಮಹಿಳೆ ದಿನದಲ್ಲಿ 2 ಗಂಟೆ ಕೆಲಸ ಮಾಡಿ ಲಕ್ಷ ಗಳಿಸುತ್ತಿದ್ದಾರಂತೆ!
- News ಜಲ ಜೀವನ್ ಮಿಷನ್ ಯೋಜನೆ ವ್ಯರ್ಥ: ಈ ವೃದ್ದೆಗೆ ಕಣ್ಣೀರೇ ಗತಿ
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Automobiles ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಜು ಸ್ವರಾಜ್ ನಿರ್ದೇಶನದ ಹೊಸ ಸಿನಿಮಾಗೆ ಟೈಟಲ್ ನಿಗದಿ
ನಿರ್ದೇಶಕ ಮಂಜು ಸ್ವರಾಜ್ ಹೊಸ ಸಿನಿಮಾ ಮಾಡುತ್ತಿರುವ ಸುದ್ದಿ ಈ ಹಿಂದೆಯೇ ಕೇಳಿ ಬಂದಿತ್ತು. ಈಗ ಈ ಸಿನಿಮಾಗೆ ಟೈಟಲ್ ನಿಗದಿಯಾಗಿದೆ. ಚಿತ್ರಕ್ಕೆ ವಿಶೇಷ ಟೈಟಲ್ ಇಡುವ ಮೂಲಕ ಪ್ರೇಕ್ಷಕರ ಗಮನ ಸೆಳೆಯಲಾಗಿದೆ.
'ಮನೆ ಮಾರಾಟಕ್ಕಿದೆ' ಎನ್ನುವ ಟೈಟಲ್ ಅನ್ನು ಸಿನಿಮಾಗೆ ನಿಗದಿ ಮಾಡಲಾಗಿದೆ. ದೆವ್ವಗಳಿದೆ ಎಚ್ಚರಿಕೆ ಎನ್ನುವ ಸಬ್ ಟೈಟಲ್ ಚಿತ್ರಕ್ಕೆ ಇದೆ. ಸಿನಿಮಾದ ಹೆಸರು ಕೇಳುತ್ತಿದ್ದರೇನೆ ಇದು ಕಾಮಿಡಿ ಸಿನಿಮಾ ಆಗಿದೆ ಎನ್ನುವುದು ತಿಳಿಯುತ್ತದೆ.
ಹೀರೋಗಳಾದ ಸಾಧು, ಚಿಕ್ಕಣ್ಣ, ರವಿಶಂಕರ್ ಗೌಡ, ಕುರಿ ಪ್ರತಾಪ್
ನಟ ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್ ಹಾಗೂ ರವಿಶಂಕರ್ ಸಿನಿಮಾದಲ್ಲಿ ನಟಿಸಿದ್ದಾರೆ. ನಾಲ್ಕು ಹಾಸ್ಯ ನಟರು ಸಿನಿಮಾದಲ್ಲಿ ನಟಿಸಿದ್ದು, ಚಿತ್ರದಲ್ಲಿ ಕಾಮಿಡಿ ಡಬಲ್ ಆಗಿರಲಿದೆ.
ಟೈಟಲ್ ಜೊತೆಗೆ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಎಸ್ ವಿ ಬಾಬು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅಭಿಮಾನ್ ರಾಯ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ
ಮಂಜು ಸ್ವರಾಜ್ ಈ ಹಿಂದೆ 'ಶಶಿರ', 'ಶ್ರಾವಣಿ ಸುಬ್ರಮಣ್ಯ', 'ಶ್ರೀ ಕಂಠ' ಹಾಗೂ 'ಪಟಾಕಿ' ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು.