Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಜು ಸ್ವರಾಜ್ ನಿರ್ದೇಶನದ ಹೊಸ ಸಿನಿಮಾಗೆ ಟೈಟಲ್ ನಿಗದಿ
ನಿರ್ದೇಶಕ ಮಂಜು ಸ್ವರಾಜ್ ಹೊಸ ಸಿನಿಮಾ ಮಾಡುತ್ತಿರುವ ಸುದ್ದಿ ಈ ಹಿಂದೆಯೇ ಕೇಳಿ ಬಂದಿತ್ತು. ಈಗ ಈ ಸಿನಿಮಾಗೆ ಟೈಟಲ್ ನಿಗದಿಯಾಗಿದೆ. ಚಿತ್ರಕ್ಕೆ ವಿಶೇಷ ಟೈಟಲ್ ಇಡುವ ಮೂಲಕ ಪ್ರೇಕ್ಷಕರ ಗಮನ ಸೆಳೆಯಲಾಗಿದೆ.
'ಮನೆ ಮಾರಾಟಕ್ಕಿದೆ' ಎನ್ನುವ ಟೈಟಲ್ ಅನ್ನು ಸಿನಿಮಾಗೆ ನಿಗದಿ ಮಾಡಲಾಗಿದೆ. ದೆವ್ವಗಳಿದೆ ಎಚ್ಚರಿಕೆ ಎನ್ನುವ ಸಬ್ ಟೈಟಲ್ ಚಿತ್ರಕ್ಕೆ ಇದೆ. ಸಿನಿಮಾದ ಹೆಸರು ಕೇಳುತ್ತಿದ್ದರೇನೆ ಇದು ಕಾಮಿಡಿ ಸಿನಿಮಾ ಆಗಿದೆ ಎನ್ನುವುದು ತಿಳಿಯುತ್ತದೆ.
ಹೀರೋಗಳಾದ ಸಾಧು, ಚಿಕ್ಕಣ್ಣ, ರವಿಶಂಕರ್ ಗೌಡ, ಕುರಿ ಪ್ರತಾಪ್
ನಟ ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್ ಹಾಗೂ ರವಿಶಂಕರ್ ಸಿನಿಮಾದಲ್ಲಿ ನಟಿಸಿದ್ದಾರೆ. ನಾಲ್ಕು ಹಾಸ್ಯ ನಟರು ಸಿನಿಮಾದಲ್ಲಿ ನಟಿಸಿದ್ದು, ಚಿತ್ರದಲ್ಲಿ ಕಾಮಿಡಿ ಡಬಲ್ ಆಗಿರಲಿದೆ.
ಟೈಟಲ್ ಜೊತೆಗೆ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಎಸ್ ವಿ ಬಾಬು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅಭಿಮಾನ್ ರಾಯ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ
ಮಂಜು ಸ್ವರಾಜ್ ಈ ಹಿಂದೆ 'ಶಶಿರ', 'ಶ್ರಾವಣಿ ಸುಬ್ರಮಣ್ಯ', 'ಶ್ರೀ ಕಂಠ' ಹಾಗೂ 'ಪಟಾಕಿ' ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು.