Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೀರೋಗಳಾದ ಸಾಧು, ಚಿಕ್ಕಣ್ಣ, ರವಿಶಂಕರ್ ಗೌಡ, ಕುರಿ ಪ್ರತಾಪ್
Recommended Video
ಕಾಮಿಡಿ ಕಲಾವಿದರು ತಾವೇ ಹೀರೋಗಳಾಗುವುದು ಹೊಸತೆನಲ್ಲ. ಆದರೆ, ಈಗ ಕನ್ನಡದ ಹಾಸ್ಯ ನಟರಾದ ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್ ಹಾಗೂ ನಟ ರವಿಶಂಕರ್ ಗೌಡ ಒಂದೇ ಸಿನಿಮಾದಲ್ಲಿ ಹೀರೋಗಳಾಗಿ ನಟಿಸುತ್ತಿದ್ದಾರೆ.
ನಿರ್ದೇಶಕ ಮಂಜು ಸ್ವರಾಜ್ ಈಗ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಈ ಮೂರು ಹಾಸ್ಯ ಕಲಾವಿದರು ಹಾಗೂ ನಟ ರವಿಶಂಕರ್ ಗೌಡ ನಾಯಕರಾಗಿ ನಟಿಸುತ್ತಿದ್ದಾರೆ. ಇದೊಂದು ಹಾರರ್ ಕಾಮಿಡಿ ಸಿನಿಮಾವಾಗಿದ್ದು, ಜನರಿಗೆ ಹೆದರಿಸುವ ಜೊತೆಗೆ ನಗಿಸುತ್ತದೆ ಎನ್ನುತ್ತಾರೆ ಮಂಜು ಸ್ವರಾಜ್.
ಬೀದಿ ಬೀದಿ ಸುತ್ತಿ ಮೊದಲ ಸಿನಿಮಾ ಮಾಡಿದ್ದರು ನಿರ್ದೇಶಕ ಮಂಜು ಸ್ವರಾಜ್
ಅಂದಹಾಗೆ, ಈ ಚಿತ್ರವನ್ನು ಎಸ್ ಪಿ ಬಾಬು ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಗಣೇಶ್ ನಟನೆಯ 'ಪಟಾಕಿ' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ಮಂಜು ಸ್ವರಾಜ್ ಹಾಗೂ ಎಸ್ ಪಿ ಬಾಬು ಈಗ ಮತ್ತೆ ಒಂದಾಗಿದ್ದಾರೆ.
ಸಿನಿಮಾದಲ್ಲಿ ನಾಯಕಿಯಾಗಿ ನಟಿ ಶೃತಿ ಹರಿಹರನ್ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು ಇಂದಿನಿಂದ ಸಿನಿಮಾದ ಶೂಟಿಂಗ್ ಶುರು ಆಗಿದ್ದು, ಚಿತ್ರಕ್ಕೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ.