Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ಶ್ರೀಕುಮಾರ್ ವಿರುದ್ಧ ನಟಿ ಮಂಜು ವಾರಿಯರ್ ಪೊಲೀಸ್ ದೂರು
ಮಲಯಾಳಂನ ಖ್ಯಾತ ನಿರ್ದೇಶಕ ಶ್ರೀಕುಮಾರ್ ವಿರುದ್ಧ ನಟಿ ಮಂಜು ವಾರಿಯರ್ ಕೇರಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶ್ರೀಕುಮಾರ್ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಕೇರಳ ಡಿಜಿಪಿ ಲೋಕನಾಥ್ ಬೆಹೆರಾ ಅವರಿಗೆ ಕಂಪ್ಲೆಂಟ್ ನೀಡಿದ್ದಾರೆ.
ಮಂಜು ವಾರಿಯರ್ ಅವರ ದೂರಿನ ಅನ್ವಯ ಕೇರಳ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. 'ಶ್ರೀಕುಮಾರ್ ಅವರಿಂದ ನನಗೆ ಬೆದರಿಕೆ ಇದೆ, ಮತ್ತು ಸಾಮಾಜಿಕ ಜಾಲತಾಣದಲ್ಲಿ ನನ್ನ ಮಾನಹಾನಿ ಮಾಡಲಾಗಿದೆ' ಎಂದು ದೂರಿದ್ದಾರೆ.
ದೂರಿನಲ್ಲಿ ಉಲ್ಲೇಖಿಸಿರುವ ಪ್ರಮುಖ ಅಂಶಗಳನ್ನ ಗಮನಿಸಿದರೆ, 'ಚಿತ್ರದ ಶೂಟಿಂಗ್ ಸೆಟ್ಗಳಲ್ಲಿ ಮತ್ತು ಚಿತ್ರದ ನಿರ್ಮಾಣ, ಪ್ರಚಾರ ಮತ್ತು ಬಿಡುಗಡೆಯ ವಿವಿಧ ಹಂತಗಳಲ್ಲಿ ನಿರ್ದೇಶಕರು ಮೌಖಿಕವಾಗಿ ನಿಂದಿಸಿದ್ದಾರೆ. ಅವರ ವರ್ತನೆಯು ನನಗೆ ಮಾನಸಿಕ ಯಾತನೆಗೆ ಕಾರಣವಾಗಿದೆ'' ಎಂದು ಪ್ರಸ್ತಾಪಿಸಿದ್ದಾರೆ.
ಹಿಮಾಚಲ ಪ್ರದೇಶದ ಭೀಕರ ಪ್ರವಾಹದಲ್ಲಿ ಸಿಲುಕಿಕೊಂಡ ಖ್ಯಾತ ನಟಿ
ಈ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀಕುಮಾರ್ ''ಮಂಜು ಅವರು ದೂರಿನ ವಿಚಾರವಾಗಿ ನನಗೆ ಅಚ್ಚರಿಯಾಗಿದೆ. ಪೊಲೀಸರಿಗೆ ನಾನು ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ. ಆದರೆ, ಮಂಜು ಅವರು ಒಂದನ್ನ ಸ್ಮರಿಸಬೇಕಾಗಿದೆ. ಅವರು ಕಷ್ಟಕಾಲದಲ್ಲಿದ್ದಾಗ ನಾನು ಅವರಿಗೆ ಎಷ್ಟು ಸಹಾಯ ಮಾಡಿದ್ದೆ, ಅವರ ನೋವಿನಲ್ಲಿ ನಾನು ಭಾಗಿಯಾಗಿದ್ದೆ. ಎಲ್ಲವನ್ನು ಮರೆತಿದ್ದಾರೆ'' ಎಂದಿದ್ದಾರೆ.
ಇದರ ಜೊತೆಗೆ ಫಿಲ್ಮ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಕೇರಳ (FEFKA) - (Film Employees Federation of Kerala) ಸಂಸ್ಥೆಯಲ್ಲೂ ಶ್ರೀಕುಮಾರ್ ವಿರುದ್ಧ ದೂರು ನೀಡಿದ್ದಾರೆ. ಶ್ರೀಕುಮಾರ್ ನಿರ್ದೇಶಕ ಸಂಘದ ಸದಸ್ಯನಾಗಿರುವ ಅವರನ್ನ ಸಂಘಟನೆಯಿಂದ ಹೊರಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕಳೆದ ವರ್ಷ ತೆರೆಕಂಡಿದ್ದ 'ಒಡಿಯನ್' ಸಿನಿಮಾವನ್ನ ಶ್ರೀಕುಮಾರ್ ನಿರ್ದೇಶಿಸಿದ್ದರು. ಮೋಹನ್ ಲಾಲ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರದಲ್ಲಿ ಮಂಜು ವಾರಿಯರ್ ಕೂಡ ಕಾಣಿಸಿಕೊಂಡಿದ್ದರು.