Don't Miss!
- News
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದ ಸಿದ್ದರಾಮಯ್ಯ.! ಆ ಪತ್ರದಲ್ಲಿ ಏನಿದೆ.?
- Sports
IND-W vs SA-W T20 Tri-series Final: ಭಾರತ ವನಿತೆಯರ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ
- Lifestyle
ಮಗುವಿಗೆ ತುಂಬಾ ಜ್ವರ ಇದ್ದಾಗ ಏನು ಮಾಡಬೇಕು?
- Finance
6 ತಿಂಗಳಲ್ಲಿ 2ನೇ ಬಾರಿಗೆ ಉದ್ಯೋಗಿಗಳನ್ನು ವಜಾಗೊಳಿಸಿದ Byju's: ಈ ಬಾರಿ ಎಷ್ಟು ನೌಕರರು?
- Automobiles
ಭಾರತದಲ್ಲಿ ಮಾರುತಿ ಜಿಮ್ನಿ ಎಸ್ಯುವಿಗೆ ಭಾರೀ ಡಿಮ್ಯಾಂಡ್: ಪ್ರತಿಸ್ಪರ್ಧಿಗಳಿಗೆ ಹೆಚ್ಚಿದ ಆತಂಕ
- Technology
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ದಾಸನ ಗರಡಿ ಹುಡುಗ ಮನೋಜ್' ಎರಡನೇ ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಟಕ್ಕರ್ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಮನೋಜ್ ನಟನೆಯ ಎರಡನೇ ಚಿತ್ರ 'ಧರಣಿ'ಯ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಕುತೂಹಲ ಮೂಡಿಸಿದೆ. ಮನೋಜ್ ಹುಟ್ಟು ಹಬ್ಬದ ಪ್ರಯುಕ್ತ 'ಧರಣಿ' ಫಸ್ಟ್ ಲುಕ್ ಬಿಡುಗಡೆಯಾಗಿದೆ. "ನನ್ನ ಹಿಂದಿನ ಸಿನಿಮಾದ ಜೊತೆಗೆ ಧರಣಿಯನ್ನು ಹೋಲಿಕೆ ಮಾಡಲೂ ಸಾಧ್ಯವಿಲ್ಲ. ಕೋಳಿ ಪಂದ್ಯದಂತೆಯೇ ಇಲ್ಲಿ ಕೂಡಾ ನೋಡುಗರನ್ನು ರಂಜಿಸುತ್ತಲೇ ಕಾಡುವ ಅಂಶಗಳಿವೆ. ನನ್ನ ಲುಕ್ ಕೂಡಾ ಇಲ್ಲಿ ಬೇರೆಯದ್ದೇ ರೀತಿಯಲ್ಲಿ ನೋಡಬಹುದು. ಇತ್ತೀಚೆಗೆ ಕಟೆಂಟ್ ಇರುವ ಸಿನಿಮಾಗಳನ್ನು ಜನ ಹೆಚ್ಚು ಇಷ್ಟ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಧರಣಿ ಹೊಸ ವಿಚಾರಗಳ ಸುತ್ತ ಆವರಿಸಿಕೊಂಡಿದೆ. ಅದನ್ನು ಕಮರ್ಷಿಯಲ್ ಆಗಿ ರೂಪಿಸುತ್ತಿದ್ದೇವೆ" ಎಂದು ಮನೋಜ್ ಧರಣಿ ಚಿತ್ರದಲ್ಲಿನ ತನ್ನ ಪಾತ್ರ ಹಾಗೂ ಚಿತ್ರದ ಕಂಟೆಂಟ್ ಕುರಿತು ಮಾತನಾಡಿದರು.
ಇಲ್ಲಿ ಎಲ್ಲವನ್ನೂ ಹೊಚ್ಚ ಹೊಸದಾಗಿ ಹೇಳುತ್ತಿದ್ದೇವೆ. ಪಕ್ಕಾ ಹಳ್ಳಿ ಸೊಗಡಿನ ಸಬ್ಜೆಕ್ಟ್ ಇದಾಗಿದೆ. ಕರ್ನಾಟಕ ಮಾತ್ರವಲ್ಲದೆ ಭಾರತದ ಇತರೆ ರಾಜ್ಯಗಳಲ್ಲೂ ಕೋಳಿ ಪಂದ್ಯ ಬರಿಯ ಮನರಂಜನೆ ಅಲ್ಲದೇ ಅಪಾರ ಪ್ರಮಾಣದ ವಹಿವಾಟು ನಡೆಸುವ ಜೂಜಾಗಿದೆ, ಇದರ ಸುತ್ತ ಧರಣಿ ಕಥಾ ಹಂದರ ತೆರೆದುಕೊಂಡಿದೆ, ಇದಲ್ಲದೇ ಈವರೆಗೆ ಎಲ್ಲೂ ಹೇಳಿರದ ಒಂದಷ್ಟು ವಿಚಾರಗಳೂ ಇಲ್ಲಿ ದೃಶ್ಯರೂಪದಲ್ಲಿ ಅನಾವರಣಗೊಳ್ಳಲಿದೆ ಎಂದು ನಿರ್ದೇಶಕ ಸುಧೀರ್ ಶಾನುಭೋಗ್ ತಮ್ಮ ಚಿತ್ರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ ವಿನಯ್ ರಾಜ್ ಕುಮಾರ್ ನಟಿಸಿದ್ದ ಅನಂತು ವರ್ಸಸ್ ನುಸ್ರತ್ ಚಿತ್ರವನ್ನು ನಿರ್ದೇಶಿದ್ದ ಸುಧೀರ್ ಶಾನುಭೋಗ್ ಮೇಲೆ ನಿರೀಕ್ಷೆ ಹೆಚ್ಚಿದೆ. ರಾಷ್ಟ್ರ ಪ್ರಶಸ್ತಿ ಪಡೆದ 'ಮದಿಪು' ಚಿತ್ರದ ಭಾಗವಾಗಿದ್ದ, ಹೊಸತನದಿಂದ ಮೂಡಿಬಂದಿದ್ದ 'ಅಳಿದು ಉಳಿದವರು' ಸಿನಿಮಾಗೆ ಕಥೆಯನ್ನೂ ಸಹ ಸುಧೀರ್ ಶಾನಭೋಗ್ ಬರೆದಿದ್ದರು. ರಾಮರಾಮರೇ ಖ್ಯಾತಿಯ ನಟರಾಜ್ ಅಭಿನಯದ 'ಮಾರೀಚ' ಬಿಡುಗಡೆಗೆ ತಯಾರಾಗಿದೆ. ಈ ಚಿತ್ರಕ್ಕೂ ಸಹ ಸುದೀರ್ ಶಾನಭೋಗ್ ನಿರ್ದೇಶನವಿದೆ. ಇನ್ನು ಈ ಚಿತ್ರಕ್ಕೆ ಜಿ.ಕೆ.ಉಮೇಶ್ ಹಾಗೂ ಕೆ. ಗಣೇಶ್ ಐತಾಳ್ ಯಂಗ್ ಥಿಂಕರ್ಸ್ ಫಿಲಂಸ್ ಅಡಿಯಲ್ಲಿ ಅವರು ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ, ಅರುಣ್ ಸುರೇಶ್ ಛಾಯಾಗ್ರಹಣ, ಅರುಣೋದಯ ಕಥೆ, ಶ್ರೀನಿಧಿ ಡಿ ಎಸ್ ಸಂಭಾಷಣೆ ಜೊತೆಗೆ ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಶಿವಕುಮಾರ್ ಮಾವಲಿ ಅವರ ಸಾಹಿತ್ಯ ಇದೆ.